Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಕರ್ನಾಟಕದಲ್ಲಿ ಪ್ರತಿಯೊಬ್ಬರಿಗೂ...

ಉತ್ತರ ಕರ್ನಾಟಕದಲ್ಲಿ ಪ್ರತಿಯೊಬ್ಬರಿಗೂ ಸತೀಶ್ ಜಾರಕಿಹೊಳಿಯವರ ರಾಜಕೀಯ ಹಿನ್ನಲೆ ಗೊತ್ತಿದೆ: ಬಿ.ಕೆ.ಹರಿಪ್ರಸಾದ್

''ಬಿಜೆಪಿಯವರು ಹಿಂದೂ ಧರ್ಮದ ಬಗ್ಗೆ ಮಾತನಾಡದೇ ಇರುವುದೇ ಒಳ್ಳೆಯದು''

8 Nov 2022 6:09 PM IST
share
ಉತ್ತರ ಕರ್ನಾಟಕದಲ್ಲಿ ಪ್ರತಿಯೊಬ್ಬರಿಗೂ ಸತೀಶ್ ಜಾರಕಿಹೊಳಿಯವರ ರಾಜಕೀಯ ಹಿನ್ನಲೆ ಗೊತ್ತಿದೆ: ಬಿ.ಕೆ.ಹರಿಪ್ರಸಾದ್
''ಬಿಜೆಪಿಯವರು ಹಿಂದೂ ಧರ್ಮದ ಬಗ್ಗೆ ಮಾತನಾಡದೇ ಇರುವುದೇ ಒಳ್ಳೆಯದು''

ಬೆಂಗಳೂರು, ನ. 8: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಶಾಸಕ ಸತೀಶ್ ಜಾರಕಿಹೊಳಿ ಅವರು ಬುದ್ದ, ಬಸವ, ಅಂಬೇಡ್ಕರ್ ವಿಚಾರಗಳಿಂದ ರಾಜಕೀಯ ಪ್ರಾರಂಭ ಮಾಡಿದವರು. ‘ಹಿಂದೂ’ ಪದದ ಹೇಳಿಕೆ ಅವರ ವೈಯಕ್ತಿಕವಾದದ್ದು. ಮಾನವ ಬಂಧುತ್ವ ವೇದಿಕೆಯ ಮೂಲಕ ಮೌಢ್ಯಾಚರಣೆ ವಿರುದ್ಧ ಜಾಗೃತಿ ನಡೆಸುತ್ತಿದ್ದಾರೆ’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸತೀಶ್ ಆವರು ವೈಚಾರಿಕ ವಿಷಯಗಳನ್ನ ಜನರಿಗೆ ತಲುಪಿಸುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರತಿಯೊಬ್ಬರಿಗೂ ಸತೀಶ್ ಜಾರಕಿಹೊಳಿಯವರ ರಾಜಕೀಯ ಹಿನ್ನಲೆ ಗೊತ್ತಿದೆ. ಅಲ್ಲಿನ ಜನರಿಗೆ ಅದು ವಿವಾದ ಎಂದು ಭಾವಿಸುವುದಿಲ್ಲ. ಹೇಳಿಕೆಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸತೀಶ್ ಜಾರಕಿಹೊಳಿ ಒಬ್ಬ ಹಿಂದೂ. ಹಿಂದೂಧರ್ಮದ ಒಳಗೆ ಇರುವ ಅಸಮಾನತೆಗಳ ಬಗ್ಗೆ ಅವರು ಬಂಧುತ್ವ ವೇದಿಕೆಯಲ್ಲಿ ಮಾತನಾಡಿದ್ದಾರೆ. ಅದನ್ನ ಅನಗತ್ಯ ವಿವಾದ ಮಾಡಬಾರದು’ ಎಂದು ಕೋರಿದರು.

‘ಬಿಜೆಪಿಯ ಹಿಂದುತ್ವವಾದಿಗಳಿಗೂ ಹಿಂದೂಧರ್ಮಕ್ಕೂ ಸಂಬಂಧವೇ ಇಲ್ಲ. ಸಾವರ್ಕರ್ ಸ್ಪಷ್ಟವಾಗಿ ಹೇಳಿದ್ದಾರೆ ಹಿಂದೂ ಧರ್ಮಕ್ಕೂ ಹಿಂದುತ್ವಕ್ಕೂ ಸಂಬಂಧವೇ ಇಲ್ಲ ಎಂದು. ಬಿಜೆಪಿಯ ನಾಯಕಿ ಸುಶ್ಮಾ ಸ್ವರಾಜ್ ಅವರೇ ಹೇಳಿದ್ದಾರೆ. ಚುನಾವಣಾ ಭಾಷಣದಲ್ಲಿ, ರಾಮಮಂದಿರ ಚುನಾವಣಾ ವಿಷಯವೇ ಹೊರತು ಹಿಂದೂಧರ್ಮದ್ದಲ್ಲ ಎಂದು. ಹಿಂದೂ ಧರ್ಮ ಬಿಜೆಪಿಯ ಗುತ್ತಿಗೆಯಲ್ಲ, ಬಿಜೆಪಿಯವರು ಹಿಂದೂ ಧರ್ಮದ ಬಗ್ಗೆ ಮಾತನಾಡದೇ ಇರುವುದೇ ಒಳ್ಳೆಯದು’ ಎಂದು ಅವರು ಹೇಳಿದರು.

‘ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದ ಮೇಲೆ ಕೇವಲ ರಾಜ್ಯಕ್ಕೆ ಮಾತ್ರ ಶಕ್ತಿಯಲ್ಲ, ಇಡೀ ದೇಶಕ್ಕೆ ಶಕ್ತಿ. ಎಐಸಿಸಿ ಅಧ್ಯಕ್ಷರಿಗಿರುವ ಶಕ್ತಿಯೇ ಬೇರೆ. ನಮ್ಮಲ್ಲಿ ಯಾವ ಅಧಿಕಾರ ಕೇಂದ್ರವೂ ಇಲ್ಲ, ಕೇವಲ ಕಾಂಗ್ರೆಸ್ ಪವರ್ ಪಾಯಿಂಟ್ ಮಾತ್ರ ಇದೆ. ಖರ್ಗೆ ಅವರಿಗೆ ಟಿಕೆಟ್ ಕೊಡಿ ಎಂದು ಆಕಾಂಕ್ಷಿಗಳು ಹೋಗುವುದರಲ್ಲಿ ತಪ್ಪೇನಿದೆ. ಬಿಜೆಪಿಯಲ್ಲಿ ಕೇಶವ ಕೃಪಕ್ಕೆ ಅರ್ಜಿ ಸಲ್ಲಿಸಬೇಕು, ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಂದು ಸಮಿತಿ ಇದೆ. ಆಂತರಿಕ ಪ್ರಜಾಪ್ರಭುತ್ವ ಇದೆ’

-ಬಿ.ಕೆ.ಹರಿಪ್ರಸಾದ್ ಪರಿಷತ್ ವಿಪಕ್ಷ ನಾಯಕ

share
Next Story
X