Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಳಲಿಪೇಟೆ ಮಸೀದಿ ಪ್ರಕರಣ: ನ.9ರಂದು...

ಮಳಲಿಪೇಟೆ ಮಸೀದಿ ಪ್ರಕರಣ: ನ.9ರಂದು ತೀರ್ಪು ಸಾಧ್ಯತೆ

8 Nov 2022 8:51 PM IST
share
ಮಳಲಿಪೇಟೆ ಮಸೀದಿ ಪ್ರಕರಣ: ನ.9ರಂದು ತೀರ್ಪು ಸಾಧ್ಯತೆ

ಬಜ್ಪೆ, ನ.8: ಮಳಲಿಪೇಟೆ ಮಸೀದಿ ಪ್ರಕರಣ ಸಂಬಂಧ ತೀರ್ಪು ಕಾಯ್ದಿರಿಸಿದ್ದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ನ.9ರಂದು ತೀರ್ಪು ನೀಡುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಮಳಲಿಪೇಟೆ ಮಸೀದಿಯ ನವೀಕರಣ ಸಂದರ್ಭ ಅದರ ರಚನೆ ಮತ್ತು ಕೆತ್ತನೆಗಳನ್ನು ಕಂಡು ದೇವಸ್ಥಾನ ಎಂದು ಆರೋಪಿಸಿ ಸ್ಥಳೀಯರಾದ ಧನಂಜಯ ಮತ್ತು ಐದು ಮಂದಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ಕೊಕದ್ದಮೆ ದಾಖಲಿಸಿ ಮಸೀದಿಯ ನವೀಕರಣಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆಯನ್ನು ಕೈಗೆತ್ತಿಕೊಂಡ ಮೂರನೇ ಹೆಚ್ಚುವರಿ ನ್ಯಾಯಾಲಯ ಎರಡೂ ಕಡೆಯ ಕಕ್ಷಿದಾರರ ಪರವಾದ ವಕೀಲರ ವಾದ -ವಿವಾದಗಳನ್ನು ಆಲಿಸಿತ್ತು. ಈ ವೇಳೆ ಮಸೀದಿ ವಕ್ಫ್‌ ಆಸ್ತಿಯಾಗಿರುವ ಕಾರಣ ಈ ಪ್ರಕರಣವನ್ನು ಮುನ್ನಡೆಸುವ ಕಾರ್ಯವ್ಯಾಪ್ತಿ ಸಿವಿಲ್‌ ನ್ಯಾಯಾಲಯಕ್ಕಿಲ್ಲ. ಇದಕ್ಕಾಗಿಯೇ ವಕ್ಫ್‌ಗೆ ಸಂಬಂಧಿಸಿ ನ್ಯಾಯಾಲಯಗಳಿವೆ. ಆದ್ದರಿಂದ ಈ ಪ್ರಕರಣವನ್ನು ವಜಾಗೊಳಿಸಬೇಕೆಂದು ವಾದಿಸಿದ್ದರು.

ಈ ಹಿನ್ನಲೆಯಲ್ಲಿ ವಾದ-ವಿವಾದಗಳನ್ನು ಆಲಿಸಿದ್ದ ನ್ಯಾಯಾಯಲವು ಪ್ರಕರಣ ಸಿವಿಲ್‌ ವ್ಯಾಪ್ತಿಗೆ ಬರುತ್ತದೆಯೇ? ಇಲ್ಲವೇ? ಎಂಬ ಬಗ್ಗೆ ಪ್ರಥಮ ಹಂತದ ತೀರ್ಪು ನೀಡುವುಗಾಗಿ ತಿಳಿಸಿ ತೀರ್ಪು ನೀಡುವ ದಿನಾಂಕವನ್ನು ಪ್ರಕಟಿಸಿತ್ತು. ಈ ಮಧ್ಯೆ ಮಸೀದಿ ನವೀಕರಣಕ್ಕೆ ಆಕ್ಷೇಪಿಸಿದ್ದ ಅರ್ಜಿದಾರರು ಕರ್ನಾಟಕ ಹೈಕೋರ್ಟ್‌ ಮೊರೆಹೋಗಿ ಮಳಲಿಪೇಟೆ ಮಸೀದಿಗೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ನೀಡದಂತೆ ಸೂಚಿಸಬೇಕೆಂದು ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಯನ್ನು ನಡೆಸಿದ ಹೈಕೋರ್ಟ್‌, "ಆಕ್ಷೇಪಣೆ ಅರ್ಜಿ ವಿಚಾರಣೆ ನಡೆಸಿ ತೀರ್ಪು ನೀಡುವವರೆಗೆ ಕೆಳನ್ಯಾಯಾಲಯ ಪ್ರಕರಣ ಸಂಬಂಧ ಯಾವುದೇ ತೀರ್ಪುಗಳನ್ನು ನೀಡಬಾರದು" ಎಂದು ಸೂಚನೆ ನೀಡಿತ್ತು. ಹೀಗಾಗಿ ಮಂಗಳೂರು ಸಿವಿಲ್‌ ನ್ಯಾಯಾಲಯ ತೀರ್ಪು ಪ್ರಕಟನೆಗೆ ದಿನಾಂಕಗಳನ್ನು ನೀಡುತ್ತಾ ತೀರ್ಪು ನೀಡುವುದನ್ನು ಮುಂದೂಡುತ್ತಿತ್ತು. ಬಳಿಕ ಮಸೀದಿ ನವೀಕರಣಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಅರ್ಜಿದಾರರ ಅರ್ಜಿಯನ್ನು ಹೈಕೋರ್ಟ್‌ ವಜಾ ಗೊಳಿಸಿತ್ತು. ಆ ನಡುವೆ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಯಾಗಿತ್ತು.

ನಂತರ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಹೊಸ ನ್ಯಾಯಪೀಠ, ಪ್ರಕರಣವು ಸಿವಿಲ್‌ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆಯೇ? ಇಲ್ಲವೇ ಎಂಬ ಕುರಿತಾಗಿ ತೀರ್ಪು ಕಾಯ್ದಿರಿಸಿ ವಕಾಲತ್ತನ್ನು ಮುಂದೂಡಿತ್ತು. ಈಗಾಗಲೇ ಸತತ 5 ಬಾರಿ ವಕಾಲತ್ತನ್ನು ಮುಂದೂಡಿರುವ ನ್ಯಾಯಾಲಯ ನವೆಂಬರ್‌ 9ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಹಾಗಾಗಿ ಸಿವಿಲ್‌ ನ್ಯಾಯಾಲಯ ನ.9ರಂದು ತೀರ್ಪು ನೀಡುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಅರ್ಜಿದಾರರು ಮತ್ತು ಅರ್ಜಿದಾರರ ಪರ ವಕೀಲರು ಹಾಗೂ ಮಳಲಿಪೇಟೆ ಗ್ರಾಮಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

share
Next Story
X