Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಟಿ ಜಾಕ್ವೆಲಿನ್‌ ರನ್ನು ಯಾಕೆ...

ನಟಿ ಜಾಕ್ವೆಲಿನ್‌ ರನ್ನು ಯಾಕೆ ಬಂಧಿಸಿಲ್ಲ? 'ನೋಡಿ ಆಯ್ಕೆ ಮಾಡುವ' ನೀತಿಯೇಕೆ? ಎಂದು ಪ್ರಶ್ನಿಸಿದ ದಿಲ್ಲಿ ಕೋರ್ಟ್‌

10 Nov 2022 6:15 PM IST
share
ನಟಿ ಜಾಕ್ವೆಲಿನ್‌ ರನ್ನು ಯಾಕೆ ಬಂಧಿಸಿಲ್ಲ? ನೋಡಿ ಆಯ್ಕೆ ಮಾಡುವ ನೀತಿಯೇಕೆ? ಎಂದು ಪ್ರಶ್ನಿಸಿದ ದಿಲ್ಲಿ ಕೋರ್ಟ್‌

ಹೊಸದಿಲ್ಲಿ: ರೂ. 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ನಟಿ ಜಾಕ್ವೆಲೀನ್‌ ಫೆರ್ನಾಂಡಿಝ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆದಾಗ ನ್ಯಾಯಾಧೀಶರಿಂದ ಜಾರಿ ನಿರ್ದೇಶನಾಲಯಕ್ಕೆ ಎಚ್ಚರಿಕೆಯ ಮಾತೊಂದು ಬಂದಿದೆ. ʻʻಪಿಕ್‌ ಎಂಡ್‌ ಚೂಸ್‌(ನೋಡಿ ಆಯ್ಕೆ ಮಾಡುವ)ʼʼ ನೀತಿ ಜಾರಿಗೊಳಿಸಬೇಡಿ ಎಂದು ನ್ಯಾಯಾಧೀಶರು ಇಡಿಗೆ ಹೇಳಿದರಲ್ಲದೆ, ಜಾರಿ ನಿರ್ದೇಶನಾಲಯ ಆಕೆಯನ್ನು ಏಕೆ ಬಂಧಿಸಿಲ್ಲ ಹಾಗೂ ಈ ಪ್ರಕರಣದಲ್ಲಿನ ಆರೋಪಿಗಳಿಗೆ ಬೇರೆ ಬೇರೆ ಮಾನದಂಡಗಳನ್ನು ಏಕೆ ಅನುಸರಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.

ಇತ್ತಂಡಗಳ ವಾದಗಳನ್ನು ಆಲಿಸಿದ ನಂತರ ಜಾಮೀನು ಅರ್ಜಿಯ ಕುರಿತು ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸುವ ಸಾಧ್ಯತೆಯಿದೆ.

ಇಂದಿನ ವಿಚಾರಣೆ ವೇಳೆ ತಮ್ಮ ವಾದ ಮಂಡಿಸಿದ ಜಾಕ್ವೆಲೀನ್‌ ಪರ ವಕೀಲ ಸಿದ್ಧಾರ್ಥ್‌ ಅಗರ್ವಾಲ್‌,   ಆಕೆ  ದೇಶ ಬಿಟ್ಟು ಪಲಾಯನಗೈಯ್ಯಲು ಈ ಹಿಂದೆ ಯತ್ನಿಸಿದ್ದರು ಎಂಬ ಜಾರಿ ನಿರ್ದೇಶನಾಲಯದ ಆರೋಪವನ್ನು ಉಲ್ಲೇಖಿಸಿ, ಆಕೆ ಎರಡು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ ಹಾಗೂ ಆರೋಪಿ ಎಂದು ಆಕೆಯನ್ನು ಆಗ ಆರೋಪಿಯೆಂದು ಹೆಸರಿಸಲಾಗಿರಲಿಲ್ಲ. ಆಕೆ 2021 ರಲ್ಲಿ ವಿದೇಶಕ್ಕೆ ಪ್ರಯಾಣಿಸಲು ಯತ್ನಿಸಿದ ಸಂದರ್ಭ ಆಕೆಯ ವಿರುದ್ಧ ಲುಕೌಟ್‌ ನೋಟಿಸ್‌ ಇದೆ ಎಂಬ ವಿಚಾರ ಕುರಿತು ಆಕೆಗೆ ಮಾಹಿತಿ ನೀಡಲಾಗಿರಲಿಲ್ಲ ಎಂದರು.

ತಮ್ಮ ತಾಯಿಯನ್ನು ಭೇಟಿಯಾಗಲು ತೆರಳಲು ಎರಡು ಬಾರಿ ಜಾರಿ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಿದ್ದರೂ ಉತ್ತರ ದೊರಕಿರಲಿಲ್ಲ ಎಂದು ವಕೀಲರು ತಿಳಿಸಿದರಲ್ಲದೆ ಆಕೆಗೆ ವೃತ್ತಿ ಸಂಬಂಧಿ ಕೆಲಸಗಳಿಗಾಗಿ ಪ್ರಯಾಣಿಸಲು ಅನುಮತಿಸಿದ್ದ ಈ ಹಿಂದಿನ ನ್ಯಾಯಾಲಯದ ಆದೇಶದತ್ತವೂ ವಕೀಲರು ಕೋರ್ಟಿನ ಗಮನ ಸೆಳೆದರು.

ವಿಶೇಷ ಸಾರ್ವಜನಿಕ ಅಭಿಯೋಜಕರಾದ ಶೈಲೇಶ್‌ ಎನ್‌ ಪಾಠಕ್‌ ತಮ್ಮ ವಾದ ಮಂಡನೆ ವೇಳೆ ಮಹಿಳೆಯೆಂಬ ಕಾರಣಕ್ಕೆ ಅಕ್ರಮ ಹಣ ವರ್ಗಾಗಣೆ ತಡೆ ಕಾಯಿದೆಯಿಂದ ಆಕೆ ವಿನಾಯಿತಿ ಕೋರುವಂತಿಲ್ಲ ಎಂದರು. ವಿನಾಯಿತಿಗಾಗಿ ಅಪರಾಧವು ರೂ 1 ಕೋಟಿಗಿಂತ ಕಡಿಮೆ ಹಣ ಒಳಗೊಂಡಿರಬೇಕು ಎಂದೂ ಅವರು ಹೇಳಿದರು.

ʻʻಬಂಧನಕ್ಕಾಗಿ ಅಧಿಕಾರ ಹೊಂದಿರುವುದು ಹಾಗೂ ಆ ಅಧಿಕಾರ ಚಲಾಯಿಸುವುದು ಬೇರೆ ಬೇರೆ ವಿಚಾರ,ʼʼ ಎಂದು ಅವರು ಹೇಳಿದಾಗ ನ್ಯಾಯಾಧೀಶರು ಪ್ರತಿಕ್ರಿಯಿಸಿ ʻʻನೀವು ಪಿಕ್‌ ಎಂಡ್‌ ಚೂಸ್‌ ನೀತಿ ಹೊಂದುವಂತಿಲ್ಲ. ಆಕೆಯನ್ನು ಬಂಧಿಸದೇ ಇರಲು ಕಾರಣವಿರಬೇಕು,ʼʼ ಎಂದರು.

share
Next Story
X