Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ನಿಯಮಗಳಿಗೆ ತಿದ್ದುಪಡಿ: 10...

ಆಧಾರ್ ನಿಯಮಗಳಿಗೆ ತಿದ್ದುಪಡಿ: 10 ವರ್ಷಗಳಲ್ಲಿ ಕನಿಷ್ಠ ಒಮ್ಮೆಯಾದರೂ ಪೂರಕ ದಾಖಲೆಗಳ ನವೀಕರಣ ಕಡ್ಡಾಯ

10 Nov 2022 6:38 PM IST
share
ಆಧಾರ್ ನಿಯಮಗಳಿಗೆ ತಿದ್ದುಪಡಿ: 10 ವರ್ಷಗಳಲ್ಲಿ ಕನಿಷ್ಠ ಒಮ್ಮೆಯಾದರೂ ಪೂರಕ ದಾಖಲೆಗಳ ನವೀಕರಣ ಕಡ್ಡಾಯ

ಹೊಸದಿಲ್ಲಿ: ಸರಕಾರವು ಆಧಾರ್ ನಿಯಮಗಳನ್ನು ತಿದ್ದುಪಡಿಗೊಳಿಸಿದ್ದು, ಆಧಾರ್(Aadhaar) ಹೊಂದಿರುವವರು ನೋಂದಣಿ ದಿನಾಂಕದಿಂದ 10 ವರ್ಷಗಳು ಪೂರ್ಣಗೊಂಡ ಬಳಿಕ ಕನಿಷ್ಠ ಒಂದು ಸಲವಾದರೂ ಪೂರಕ ದಾಖಲೆಗಳನ್ನು ನವೀಕರಿಸುವುದನ್ನು ಅಗತ್ಯವಾಗಿಸಲಾಗಿದೆ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಹೊರಡಿಸಿರುವ ಗೆಝೆಟ್ ಅಧಿಸೂಚನೆಯಂತೆ ನವೀಕರಣವು ಸೆಂಟ್ರಲ್ ಐಡೆಂಟಿಟಿಸ್ ಡಾಟಾ ರಿಪೋಸಿಟರಿ(Central Identity Data Repository) (ಸಿಐಡಿಆರ್)ಯಲ್ಲಿ ಆಧಾರ್ ಸಂಬಂಧಿತ ಮಾಹಿತಿಯ ‘ನಿರಂತರ ನಿಖರತೆ’('Continuous Accuracy')ಯನ್ನು ಖಚಿತಪಡಿಸಲಿದೆ.

 ಆಧಾರ್ ಸಂಖ್ಯೆಯನ್ನು ಹೊಂದಿರುವವರು ನೋಂದಣಿ ದಿನಾಂಕದಿಂದ ಪ್ರತಿ 10 ಹತ್ತು ವರ್ಷಗಳು ಪೂರ್ಣಗೊಂಡ ಬಳಿಕ ಕನಿಷ್ಠ ಒಂದು ಸಲವಾದರೂ ಗುರುತು ಮತ್ತು ವಿಳಾಸದ ಪುರಾವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಪೂರಕ ದಾಖಲೆಗಳನ್ನು ನವೀಕರಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಧಾರ್ (ನೋಂದಣಿ ಮತ್ತು ನವೀಕರಣ) ನಿಯಮಗಳನ್ನು ಪರಿಷ್ಕರಿಸುವ ಮೂಲಕ ಈ ಬದಲಾವಣೆಯನ್ನು ಮಾಡಲಾಗಿದೆ.

ಆಧಾರ್ ಸಂಖ್ಯೆಯನ್ನು ಪಡೆದು 10 ವರ್ಷಗಳು ಪೂರ್ಣಗೊಂಡಿದ್ದರೂ ತಮ್ಮ ವಿವರಗಳನ್ನು ನವೀಕರಿಸದಿದ್ದವರು ತಮ್ಮ ಗುರುತು ಪುರಾವೆ (ಪಿಒಐ)ಮತ್ತು ವಿಳಾಸದ ಪುರಾವೆ (ಪಿಒಎ)ಗಳನ್ನು ನವೀಕರಿಸುವಂತೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ವು ಕಳೆದ ತಿಂಗಳು ಸಾರ್ವಜನಿಕರನ್ನು ಆಗ್ರಹಿಸಿತ್ತು.

ಇದಕ್ಕಾಗಿ ಯುಐಡಿಎಐ ‘ಅಪ್‌ಡೇಟ್ ಡಾಕ್ಯುಮೆಂಟ್ ’('Update Document')ಎಂಬ ಹೊಸ ವೈಶಿಷ್ಟವನ್ನು ಅಭಿವೃದ್ಧಿಗೊಳಿಸಿದೆ. myAadhaar

ಪೋರ್ಟಲ್ ಮತ್ತು myAadhaar ಆ್ಯಪ್‌ನಲ್ಲಿ ಈ ಸೌಲಭ್ಯ ಲಭ್ಯವಿದೆ ಅಥವಾ ಸಾರ್ವಜನಿಕರು ಇದಕ್ಕಾಗಿ ಯಾವುದೇ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿಯನ್ನು ನೀಡಬಹುದು. ಹೊಸ ವೈಶಿಷ್ಟವು ಆಧಾರ್ ಹೊಂದಿರುವವರು ಪಿಒಐ (ಹೆಸರು ಮತ್ತು ಭಾವಚಿತ್ರವನ್ನೊಳಗೊಂಡ) ಮತ್ತು ಪಿಒಎ (ಹೆಸರು ಮತ್ತು ವಿಳಾಸವನ್ನೊಳಗೊಂಡ)ಗಳನ್ನು ಅಪ್‌ಡೇಟ್ ಮಾಡಲು ಅನುಮತಿಸುತ್ತದೆ.

ದೇಶದಲ್ಲಿ ಈವರೆಗೆ 134 ಕೋ. ಆಧಾರ್ ಸಂಖ್ಯೆಗಳನ್ನು ವಿತರಿಸಲಾಗಿದೆ.

10 ವರ್ಷಗಳ ಹಿಂದೆ ವಿತರಿಸಲಾಗಿದ್ದ ಆಧಾರ್‌ಗಾಗಿ ಈಗ ಆರಂಭಿಸಲಾಗಿರುವ ನವೀಕರಣ ಅಭಿಯಾನವು ಜನಸಂಖ್ಯಾ ಮಾಹಿತಿಯ ಅಪ್‌ಡೇಟ್‌ಗೆ ಸಂಬಂಧಿಸಿದೆ ಮತ್ತು ಬಯೊಮೆಟ್ರಿಕ್ ಅಪ್‌ಡೇಟ್‌ನ್ನು ಒಳಗೊಂಡಿಲ್ಲ. ಅಗತ್ಯವಿದ್ದಾಗ ಬಯೊಮೆಟ್ರಿಕ್ ನವೀಕರಣದ ಬಗ್ಗೆ ನಿರ್ಧರಿಸಲಾಗುವುದು ಎಂದು ಸರಕಾರದ ಮೂಲವೊಂದು ಈ ಮುನ್ನ ತಿಳಿಸಿತ್ತು.

share
Next Story
X