Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಮುಖ ಮೂಲಸೌಕರ್ಯಗಳು ಸೈಬರ್ ದಾಳಿಗಳಿಗೆ...

ಪ್ರಮುಖ ಮೂಲಸೌಕರ್ಯಗಳು ಸೈಬರ್ ದಾಳಿಗಳಿಗೆ ಸುಲಭದ ತುತ್ತಾಗಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್‌

10 Nov 2022 7:30 PM IST
share
ಪ್ರಮುಖ ಮೂಲಸೌಕರ್ಯಗಳು ಸೈಬರ್ ದಾಳಿಗಳಿಗೆ ಸುಲಭದ ತುತ್ತಾಗಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್‌

 ಹೊಸದಿಲ್ಲಿ,ನ.10: ಆಂತರಿಕ ಮತ್ತು ಬಾಹ್ಯ ಭದ್ರತೆ ನಡುವಿನ ಅಂತರವು ಕಡಿಮೆಯಾಗುತ್ತಿದೆ ಮತ್ತು ಭದ್ರತಾ ಬೆದರಿಕೆಗಳ ಹೊಸ ಆಯಾಮಗಳು ಹೊರಹೊಮ್ಮುತ್ತಿವೆ,ಇವುಗಳನ್ನು ವರ್ಗೀಕರಿಸುವುದು ಕಷ್ಟವಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ (Rajnath Singh)ಅವರು ಗುರುವಾರ ಇಲ್ಲಿ ಹೇಳಿದರು.

 ನ್ಯಾಷನಲ್ ಡಿಫೆನ್ಸ್ ಕಾಲೇಜಿನ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು,‘ಚಲನಶೀಲವಲ್ಲದ’('immobile') ಮತ್ತು ‘ಸಂಪರ್ಕರಹಿತ ’('Contactless')ಯುದ್ಧದ ಬಗ್ಗೆ ತನ್ನ ಕಳವಳವನ್ನು ವ್ಯಕ್ತಪಡಿಸಿದರು.

‘ಚಲನಶೀಲವಲ್ಲದ ಮತ್ತು ಸಂಪರ್ಕರಹಿತ ಯುದ್ಧದ ವರ್ಗದಡಿ ಬರುವ ಭದ್ರತಾ ಬೆದರಿಕೆಗಳನ್ನು ನಾವು ಎದುರಿಸುತ್ತಿದ್ದೇವೆ. ಸೈಬರ್ ಯುದ್ಧ ಮತ್ತು ಮಾಹಿತಿ ಯುದ್ಧ ಇಂತಹ ಭದ್ರತಾ ಬೆದರಿಕೆಗಳಾಗಿವೆ. ನಿರ್ಣಾಯಕ ಮೂಲಸೌಕರ್ಯಗಳು ಸೈಬರ್ ದಾಳಿಗಳಿಗೆ ಸುಲಭಭೇದ್ಯವಾಗಿರುವುದು ದೊಡ್ಡ ಕಳವಳವಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಂತಹ ಪ್ರಮುಖ ಮೂಲಸೌಕರ್ಯ ಹೆಚ್ಚೆಚ್ಚು ಸಂಕೀರ್ಣಗೊಳ್ಳುತ್ತಿದೆ ಮತ್ತು ಸಂಪರ್ಕಿತ ಸಾಧನಗಳ ನೆಟ್ವರ್ಕಗಳ ಮೇಲೆ ಅವಲಂಬಿತವಾಗಿದೆ ’ಎಂದು ಸಿಂಗ್ ಹೇಳಿದರು.

 ಸಾರ್ವಜನಿಕ ಕ್ಷೇತ್ರದ ಸಾರಿಗೆ ಸೇವೆಗಳು,ದೂರಸಂಪರ್ಕ ಮತ್ತು ಪ್ರಮುಖ ತಯಾರಿಕಾ ಸ್ಥಾವರಗಳೊಂದಿಗೆ ಇಂಧನ ಕ್ಷೇತ್ರವು ಸೈಬರ್ ದಾಳಿಯ ಮುಖ್ಯಗುರಿಗಳಲ್ಲೊಂದಾಗಿದೆ ಎಂದು ಅವರು ಬೆಟ್ಟು ಮಾಡಿದರು.

ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಸುದ್ದಿಗಳ ಹರಡುವಿಕೆ ಕುರಿತು ಮಾತನಾಡಿದ ಸಿಂಗ್,ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಎಷ್ಟು ಸುಳ್ಳು ಸುದ್ದಿಗಳು ಮತ್ತು ದ್ವೇಷ ವಿಷಯಗಳನ್ನು ಸಮಾಜದಲ್ಲಿ ಹರಡಬಹುದು ಎಂಬ ಬಗ್ಗೆ ಯಾವುದೇ ಲೆಕ್ಕವಿಲ್ಲ ಎಂದರು.

ಸಾಮೂಹಿಕ ಅಭಿಪ್ರಾಯ ಅಥವಾ ದೃಷ್ಟಿಕೋನವನ್ನು ರೂಪಿಸಲು ಸಾಮಾಜಿಕ ಮಾಧ್ಯಮ ಮತ್ತು ಇತರ ಆನ್ಲೈನ್ ಕಂಟೆಂಟ್ ಜನರೇಷನ್ ವೇದಿಕೆಗಳು ಸಂಘಟಿತವಾಗಿ ಬಳಕೆಯಾಗುತ್ತಿವೆ. ಹಾಲಿ ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಾಹಿತಿ ಯುದ್ಧದ ನಿಯೋಜನೆಯು ಹೆಚ್ಚು ಸ್ಪಷ್ಟವಾಗಿದೆ ಎಂದು ಹೇಳಿದ ಸಿಂಗ್,ಮಾಹಿತಿ ಯುದ್ಧವು ನಮ್ಮ ರಾಜಕೀಯ ಸ್ಥಿರತೆಗೆ ಬೆದರಿಕೆಯನ್ನೊಡ್ಡುವ ಸಾಮರ್ಥ್ಯವನ್ನು ಹೊಂದಿದೆ ಎಂದರು.

share
Next Story
X