Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನಗತ್ಯವಾಗಿ ವಿವಾದ ಸೃಷ್ಟಿ ಮಾಡಿದ BJP,...

ಅನಗತ್ಯವಾಗಿ ವಿವಾದ ಸೃಷ್ಟಿ ಮಾಡಿದ BJP, ಸತೀಶ್ ಜಾರಕಿಹೊಳಿ ಪರ ನಿಲ್ಲದ ಕಾಂಗ್ರೆಸ್: ಡಿಎಸ್‍ಎಸ್‍ ಖಂಡನೆ

10 Nov 2022 7:31 PM IST
share
ಅನಗತ್ಯವಾಗಿ ವಿವಾದ ಸೃಷ್ಟಿ ಮಾಡಿದ BJP, ಸತೀಶ್ ಜಾರಕಿಹೊಳಿ ಪರ ನಿಲ್ಲದ ಕಾಂಗ್ರೆಸ್: ಡಿಎಸ್‍ಎಸ್‍ ಖಂಡನೆ

ಬೆಂಗಳೂರು, ನ. 10: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‍ಜಾರಕಿಹೊಳಿ ಹಿಂದೂ ಪದದ ಕುರಿತು ಹೇಳಿರುವ ಹೇಳಿಕೆಗೆ ಬಿಜೆಪಿ ಪಕ್ಷವು ಅನಗತ್ಯವಾಗಿ ವಿವಾದವನ್ನು ಸೃಷ್ಟಿಸಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್  ಪಕ್ಷವು (Indian National Congress) ಸತೀಶ್ ಜಾರಕಿಹೊಳಿ (Satish Jarkiholi) ಪರವಾಗಿ ನಿಲ್ಲಬೇಕಿತ್ತು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯು ಬೇಸರ ವ್ಯಕ್ತಪಡಿಸಿದೆ.

ಗುರುವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ದಲಿತ ಮುಖಂಡ ಡಾ. ಮೋಹನ್‍ರಾಜ್, ಸತೀಶ್ ಜಾರಕಿಹೊಳಿ ಯಾವುದೇ ಜಾತಿ ಮತ್ತು ಧರ್ಮವನ್ನು ಅವಹೇಳನವನ್ನು ಮಾಡಿಲ್ಲ. ಇತಿಹಾಸದ ಕೆಲ ಪುಸ್ತಕಗಳನ್ನು, ಪತ್ರಿಕೆಗಳನ್ನು ಉಲ್ಲೇಖಿಸಿ ಹಿಂದೂ ಪದದ ಬಗ್ಗೆ ತಿಳಿಸಿದ್ದಾರೆ. ಆದರೆ ಬಿಜೆಪಿ ಅದನ್ನು ರಾಜಕೀಯವಾಗಿ ಬಳಸಿಕೊಂಡು ಅನಗತ್ಯವಾಗಿ ವಿವಾದವನ್ನು ಸೃಷ್ಟಿಸಿದೆ.ಈ ವಿಚಾರದಲ್ಲಿ ಕಾಂಗ್ರೆಸ್‍ ಅವರಿಗೆ ಬೆಂಬಲವನ್ನು ನೀಡದಿದ್ದರೂ, ದಲಿತರು ಅವರಿಗೆ ಬೆಂಬಲವನ್ನು ನೀಡುತ್ತೇವೆ ಎಂದರು.

ಹಿಂದೂ ಎಂದರೆ ಯಾರು ಎನ್ನುವ ಜೊತೆಗೆ ಹಿಂದೂಗಳು ಎಂದರೆಯಾರು? ಎಂಬ ಪ್ರಶ್ನೆಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಬೇಕಾಗಿತ್ತು. ಹಿಂದು-ಹಿಂದುತ್ವ ಎಂಬ ಹೆಸರಿನಲ್ಲಿ ಸಾವಿರಾರು ವರ್ಷಗಳಿಂದ ದಲಿತರನ್ನು, ಆದಿವಾಸಿಗಳನ್ನು, ಮಹಿಳೆಯರನ್ನು ವಂಚಿಸುತ್ತಲೇ ಬಂದಿದ್ದಾರೆಎಂದುಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಎಂದರೆ ‘ನಾವೆಲ್ಲಒಂದು’ ಎಂದು ಹೇಳುವವರು ತಮ್ಮ ಜೊತೆಯಲ್ಲಿಯೇ ಇರುವ ದೊಡ್ಡ ಸಮುದಾಯವನ್ನು ಜಾತಿ ಹೆಸರಿನಲ್ಲಿ ಹಲ್ಲೆ, ಅತ್ಯಾಚಾರ, ಸಾಮಾಜಿಕ ಬಹಿಷ್ಕಾರಗಳನ್ನು ಹಾಕುತ್ತಿದ್ದಾರೆ.ಹಾಗಾಗಿ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಬೆಂಬಲಿಸಿ, ಹಿಂದೂ ಪದದ ಕುರಿತು ಬಹಿರಂಗ ಚರ್ಚೆಗೆ ದಲಿತ ಸಂಘಟನೆಗಳು ಆಹ್ವಾನವನ್ನು ನೀಡುತ್ತವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಸಂಸ ರಾಜ್ಯ ಸಂಚಾಲಕ ಬಸವರಾಜ್ ಕೌತಾಳ್ ಮತ್ತು ದಸಂಸ ಮುಖಂಡ ಹೆಣ್ಣೂರು ಶ್ರೀನಿವಾಸ್‍ ಉಪಸ್ಥಿತರಿದ್ದರು.

share
Next Story
X