Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಧಿಕೃತ ನಿರ್ಮಾಣ ಆರೋಪ: ಅಫ್ಝಲ್‌ ಖಾನ್‌...

ಅನಧಿಕೃತ ನಿರ್ಮಾಣ ಆರೋಪ: ಅಫ್ಝಲ್‌ ಖಾನ್‌ ಸಮಾಧಿಯ ಸುತ್ತಲಿನ ಕಟ್ಟಡವನ್ನು ಕೆಡವಿದ ಮಹಾರಾಷ್ಟ್ರ ಸರ್ಕಾರ

10 Nov 2022 8:21 PM IST
share
ಅನಧಿಕೃತ ನಿರ್ಮಾಣ ಆರೋಪ: ಅಫ್ಝಲ್‌ ಖಾನ್‌ ಸಮಾಧಿಯ ಸುತ್ತಲಿನ ಕಟ್ಟಡವನ್ನು ಕೆಡವಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲಾಡಳಿತವು ಬಿಜಾಪುರದ ಆದಿಲ್ ಶಾಹಿ ರಾಜವಂಶದ ಜನರಲ್ 1659 ರಲ್ಲಿ ಮರಾಠಾ ದೊರೆ ಶಿವಾಜಿಯಿಂದ ಪ್ರತಾಪಗಢ ಅವರ ಸಮಾಧಿಯ ಸುತ್ತಲಿನ ಕಟ್ಟಡಗಳನ್ನು ಅನಧಿಕೃತ ಎಂದು ಗುರುವಾರ ಕೆಡವಲು ಪ್ರಾರಂಭಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

1659 ರಲ್ಲಿ ಮರಾಠಾ ದೊರೆ ಶಿವಾಜಿಯಿಂದ ಪ್ರತಾಪಗಢ ಕೋಟೆಯ ಬಳಿ ಕೊಲ್ಲಲ್ಪಟ್ಟ ಅಫ್ಝಲ್‌ ಖಾನ್ ರಿಗೆ ನಂತರ ಸಮಾಧಿಯನ್ನು ನಿರ್ಮಿಸಲಾಗಿತ್ತು. ಮಹಾರಾಷ್ಟ್ರದ ಕೆಲವು ಸಂಘಟನೆಗಳು "ಶಿವ ಪ್ರತಾಪ್ ದಿನ್" ಎಂದು 363 ನೇ ವಾರ್ಷಿಕೋತ್ಸವ ಆಚರಿಸಿದ ದಿನದಂದೇ ಸತಾರಾ ಆಡಳಿತವು ಈ ಕ್ರಮ ಕೈಗೊಂಡಿರುವುದು ಗಮನಾರ್ಹ.

ಭಾರೀ ಪೊಲೀಸ್ ಭದ್ರತೆಯ ನಡುವೆ ಗುರುವಾರ ಮುಂಜಾನೆ ಧ್ವಂಸ ಕಾರ್ಯ ಆರಂಭಗೊಂಡಿದ್ದು, ಇನ್ನೂ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

"ನಾವು ಅಫ್ಜಲ್ ಖಾನ್ ಸಮಾಧಿ ಆವರಣದ ಸುತ್ತಲೂ ನಿರ್ಮಿಸಲಾದ ಶಾಶ್ವತ ಕೊಠಡಿಗಳಂತಹ ಅಕ್ರಮ ಕಟ್ಟಡಗಳನ್ನು ತೆಗೆದುಹಾಕಿದ್ದೇವೆ" ಎಂದು ಸತಾರಾ ಕಲೆಕ್ಟರ್ ರುಚೇಶ್ ಜೈವಂಶಿ ಹೇಳಿದ್ದಾರೆ. ಹೈಕೋರ್ಟ್‌ನ ಆದೇಶ ಮತ್ತು ರಾಜ್ಯ ಸರ್ಕಾರ ನೀಡಿರುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಚನೆಗಳು 15 ರಿಂದ 20 ಗುಂಟೆಗಳ ಭೂಮಿಯಲ್ಲಿ ಹರಡಿಕೊಂಡಿವೆ ಎಂದು ಜೈವಂಶಿ ಹೇಳಿದರು (ಒಂದು ಗುಂಟೆ ಎಂದರೆ 1,089 ಚದರ ಅಡಿಗಳು). ಈ ಜಮೀನಿನ ಕೆಲವು ಭಾಗ ಅರಣ್ಯ ಮತ್ತು ಕಂದಾಯ ಇಲಾಖೆಗೆ ಸೇರಿದ್ದು ಎಂದು ಅವರು ಹೇಳೀದ್ದಾರೆ.

ಮರಾಠ ರಾಜನಿಂದ ಖಾನ್ ಕೊಲ್ಲಲ್ಪಟ್ಟ ದಿನದಂದೇ ಧ್ವಂಸಗೊಳಿಸಿರುವುದು ಪ್ರತಿಯೊಬ್ಬರಿಗೂ ಹೆಮ್ಮೆ ತರುವ ವಿಚಾರ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ಹೇಳಿದ್ದಾರೆ.

"2007 ರಲ್ಲಿ, ನ್ಯಾಯಾಲಯವು ಅತಿಕ್ರಮಣವನ್ನು ತೆಗೆದುಹಾಕಲು ಆದೇಶಿಸಿತ್ತು. 2017 ರಲ್ಲಿ, ನಾವು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಆದರೆ ಕೆಲವು ಕಾನೂನು ಸಮಸ್ಯೆಗಳು ಬಂದವು. ಅತಿಕ್ರಮಣಗಳನ್ನು ತೆಗೆದುಹಾಕಲು ಶಿವಾಜಿಯ ಅನುಯಾಯಿಗಳ ಬೇಡಿಕೆಗಳು ಇದ್ದವು ಆದರೆ ಅವರು ಪ್ರತಿಭಟನೆಗಳನ್ನು ನಡೆಸಿದಾಗ, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿತ್ತು‌, ಬಳಿಕ ಅತಿಕ್ರಮಣ ನಿರ್ಮಾಣವನ್ನು ಎಂದಿಗೂ ತೆಗೆದುಹಾಕಲಿಲ್ಲ. ಇಂದು ಎಲ್ಲರಿಗೂ ತೃಪ್ತಿ ತಂದುಕೊಟ್ಟಿದೆ...” ಎಂದು ಫಡ್ನವೀಸ್‌ ಹೇಳಿದ್ದಾರೆ.

Maharashtra | Anti-encroachment drive underway near Afzal Khan's tomb in Satara near Pratapgad, in compliance with the Bombay High Court order: Satara Police pic.twitter.com/44BvZO7jWE

— ANI (@ANI) November 10, 2022
share
Next Story
X