Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರಜಾಪ್ರಭುತ್ವವನ್ನು ತಕ್ಷಣ ಹಳಿಗೆ...

ಪ್ರಜಾಪ್ರಭುತ್ವವನ್ನು ತಕ್ಷಣ ಹಳಿಗೆ ತನ್ನಿ : ಮ್ಯಾನ್ಮಾರ್ ಸೇನಾಡಳಿತಕ್ಕೆ ವಿಶ್ವಸಂಸ್ಥೆ ಆಗ್ರಹ

12 Nov 2022 10:56 PM IST
share
ಪ್ರಜಾಪ್ರಭುತ್ವವನ್ನು ತಕ್ಷಣ ಹಳಿಗೆ ತನ್ನಿ : ಮ್ಯಾನ್ಮಾರ್ ಸೇನಾಡಳಿತಕ್ಕೆ ವಿಶ್ವಸಂಸ್ಥೆ ಆಗ್ರಹ

ವಿಶ್ವಸಂಸ್ಥೆ, ನ.12: ಮ್ಯಾನ್ಮಾರ್‍(Myanmar)ನಲ್ಲಿ ತಕ್ಷಣ ಪ್ರಜಾಪ್ರಭುತ್ವವನ್ನು ಪುನರಾರಂಭಿಸಬೇಕು ಎಂದು ವಿಶ್ವಸಂಸ್ಥೆ(WHO)ಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್(Antonio Guterres) ಆಗ್ರಹಿಸಿದ್ದು, ದೇಶವನ್ನು ಆವರಿಸಿರುವ ದುಃಸ್ವಪ್ನವನ್ನು ತಡೆಯುವ ಏಕೈಕ ಮಾರ್ಗ ಇದಾಗಿದೆ ಎಂದಿದ್ದಾರೆ.

ಕಳೆದ ವರ್ಷದ ಫೆಬ್ರವರಿಯಲ್ಲಿ ಆಂಗ್ ಸಾನ್‍ಸೂಕಿ(Aung San Suu Kyi) ನೇತೃತ್ವದ ಸರಕಾರವನ್ನು ಕ್ಷಿಪ್ರಕ್ರಾಂತಿಯಲ್ಲಿ ಸೇನೆ ಪದಚ್ಯುತಗೊಳಿಸಿದಂದಿನಿಂದ ಮ್ಯಾನ್ಮಾರ್‍ನಲ್ಲಿ ಮಾರಣಾಂತಿಕ ಸಂಘರ್ಷ ಭುಗಿಲೆದ್ದಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಸೇನಾಡಳಿತ ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿರಾರು ಮಂದಿ ಹತರಾಗಿದ್ದಾರೆ. ಇದೀಗ ಕಾಂಬೋಡಿಯಾದಲ್ಲಿ ನಡೆಯುತ್ತಿರುವ  ಆಗ್ನೇಯ ಏಶ್ಯಾ ರಾಷ್ಟ್ರಗಳ ಸಂಘಟನೆ( ಆಸಿಯಾನ್)ಯ ಶೃಂಗಸಭೆಯ ನೇಪಥ್ಯದಲ್ಲಿ ಸುದ್ಧಿಗಾರರ ಜತೆ ಮಾತನಾಡಿದ  ಗುಟೆರಸ್ , ಮ್ಯಾನ್ಮಾರ್‍ನಲ್ಲಿನ ಪರಿಸ್ಥಿತಿಯು ಜನರಿಗೆ ಅಂತ್ಯವಿಲ್ಲದ ದುಃಸ್ವಪ್ನವಾಗಿದೆ ಮತ್ತು ಪ್ರದೇಶಾದ್ಯಂತ ಶಾಂತಿ ಮತ್ತು ಭದ್ರತೆಗೆ ಬೆದರಿಕೆಯಾಗಿದೆ ಎಂದರು.

ಸೇನಾಡಳಿತ ತಮ್ಮ ಜನರ ಅಭಿಪ್ರಾಯವನ್ನು ಆಲಿಸಬೇಕು, ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಬೇಕು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರಳಿ ಹಳಿಗೆ ತರಬೇಕಾಗಿದೆ. ಶಾಂತಿ ಮತ್ತು ಸ್ಥಿರತೆಗೆ ಇದು ಏಕೈಕ ಮಾರ್ಗವಾಗಿದೆ. ನಾಗರಿಕರ ಮೇಲಿನ ವಿವೇಚನಾರಹಿತ ದಾಳಿಗಳು  ಭಯಾನಕ ಮತ್ತು ಹೃದಯ ವಿದ್ರಾವಕವಾಗಿದೆ ಎಂದು ಗುಟೆರಸ್ ಹೇಳಿದ್ದಾರೆ.

ಮ್ಯಾನ್ಮಾರ್‍ನಲ್ಲಿರುವ ಅವ್ಯವಸ್ಥೆ, ಗೊಂದಲ ನಿವಾರಣೆಗಾಗಿ ಕಳೆದ ಎಪ್ರಿಲ್‍ನಲ್ಲಿ ಅಲ್ಲಿನ ಸೇನಾಡಳಿತದ ಒಪ್ಪಿರುವ ಐದು ಅಂಶದ ಕಾರ್ಯಕ್ರಮ ಇದುವರೆಗೂ ಜಾರಿಗೆ ಬಂದಿಲ್ಲ ಎಂದು ಗುಟೆರಸ್ ಅಸಮಾಧಾನ ಸೂಚಿಸಿದರು.

share
Next Story
X