Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ. ರೈಪಿ.ಎ. ರೈ14 Nov 2022 12:05 AM IST
share
ಓ ಮೆಣಸೇ...

ರೈತರು ಯಾವ ಪಕ್ಷಕ್ಕೂ ಸೇರಿದವರಲ್ಲ - ಬಸವರಾಜ ಬೊಮ್ಮಾಯಿ, ಸಿಎಂ
ರೈತರು ಯಾವ ಪಕ್ಷಕ್ಕೂ ಬೇಕಾಗಿಲ್ಲ ಎನ್ನುವುದು ಹೆಚ್ಚು ಸರಿ.

ಈ.ಡಿ. ಪದೇ ಪದೇ ನನಗೆ ನೋಟಿಸ್ ನೀಡಿ ಹಿಂಸೆ ನೀಡುತ್ತಿದೆ - ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ದುಡ್ಡು ಮಾಡಬೇಕು, ಆದರೆ ಈ.ಡಿ. ನೋಟಿಸ್ ಬೇಡ ಎಂದರೆ ಆಗುತ್ತದೆಯೇ?

ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಕೊಲಿಜಿಯಂ ವ್ಯವಸ್ಥೆ ಅಪಾರದರ್ಶಕ - ಕಿರಣ್ ರಿಜಿಜು, ಕೇಂದ್ರ ಸಚಿವ
ವ್ಯವಸ್ಥೆಯನ್ನು ಅವ್ಯವಸ್ಥೆಗೊಳಿಸುವುದು ನಿಮಗೆ ಕಲಿಸಬೇಕಾಗಿಲ್ಲ.

ಭಾರತೀಯ ಪರಂಪರೆ ಬಗ್ಗೆ ಗೌರವ ಇಲ್ಲದವರು ಭಗವದ್ಗೀತೆಯನ್ನು ವಿರೋಧಿಸುತ್ತಿದ್ದಾರೆ -ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ
ಸಂವಿಧಾನವನ್ನು ವಿರೋಧಿಸುವವರ ಬಗ್ಗೆ ನಿಮ್ಮ ನಿಲುವೇನು?

ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನಮ್ಮ ಬೆನ್ನಿಗೆ ಚೂರಿ ಹಾಕಿದ್ದಕ್ಕಾಗಿ ನಾವು ಅವರ ವಿರುದ್ಧ ಸೇಡು ತೀರಿಸಿಕೊಂಡಿದ್ದೇವೆ - ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ಡಿಸಿಎಂ
ಒಟ್ಟಿನಲ್ಲಿ ಇಬ್ಬರೂ ಪರಸ್ಪರ ಬೆನ್ನಿಗೆ ಚೂರಿ ಹಾಕಿಸಿಕೊಂಡಿದ್ದೀರಿ. ಇನ್ನು ಹೊಟ್ಟೆಗೆ ಯಾವಾಗ ಹಾಕಿ ಕೊಳ್ಳುತ್ತೀರಿ ಎಂದು ಜನ ಕಾಯುತ್ತಿದ್ದಾರೆ.

ಕೆಲವು ರಾಜ್ಯಗಳು ಅನಗತ್ಯ ಸರಕುಗಳನ್ನು ವಿವೇಚನೆ ಇಲ್ಲದೆ ಖರೀದಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ - ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ
ಬಿಜೆಪಿ ಸಂಸದರ ಆಯ್ಕೆ ಬಗ್ಗೆ ಹೇಳುತ್ತಿರಬೇಕು.

ಹುಲಿ ಬೇಟೆಯಾಡಲು ಸಿದ್ಧವಾದರೆ ಯಾರೂ ತಡೆಯಲು ಸಾಧ್ಯವಿಲ್ಲ - ಜನಾರ್ದನ ರೆಡ್ಡಿ, ಮಾಜಿ ಸಚಿವ
ಹುಲಿ ಬೇಟೆಯಾಡಿದ್ದರೆ ಇಷ್ಟು ಹೊತ್ತಿಗೆ ನೀವು ಹರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರಬೇಕಾಗಿತ್ತು.

ಕಟ್ಟಾ ಪ್ರಾಮಾಣಿಕರು ಎಂದು ಹೇಳಿಕೊಳ್ಳುವವರೇ ಅತೀ ಭ್ರಷ್ಟರು - ನರೇಂದ್ರ ಮೋದಿ, ಪ್ರಧಾನಿ
ಪದೇ ಪದೇ ನೀವು ಪ್ರಾಮಾಣಿಕರು ಎಂದು ಘೋಷಿಸಿಕೊಳ್ಳುತ್ತಿರುವುದರ ಅರ್ಥ ಗೊತ್ತಾಯಿತು ಬಿಡಿ.

ನನ್ನ ಸೋದರನ ಮಗ ಚಂದ್ರು ಸಾವಿನ ಪ್ರಕರಣದ ಪೊಲೀಸ್ ತನಿಖೆ ಬಗ್ಗೆ ನನಗೆ ವಿಶ್ವಾಸವಿಲ್ಲ - ರೇಣುಕಾಚಾರ್ಯ, ಶಾಸಕ
ಹಾಗಾದರೆ ತನಿಖೆ ಸರಿಯಾದ ದಾರಿಯಲ್ಲಿದೆ ಎಂದು ಅರ್ಥ.

ಗುಜರಾತ್‌ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದರೂ ಒಳಗೊಳಗೆ ಗಂಡ-ಹೆಂಡತಿಯಂತಿದ್ದಾರೆ - ಅರವಿಂದ್ ಕೇಜ್ರಿವಾಲ್, ದಿಲ್ಲಿ ಸಿಎಂ
ನಿಮ್ಮದು ಸವತಿಯ ಪಾತ್ರವೇ?

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೂಡಾ ಒಂದು ದಿನ ಎಐಸಿಸಿ ಅಧ್ಯಕ್ಷ ಆಗಬಹುದು ಎಂಬುದಕ್ಕೆ ಮಲ್ಲಿಕಾರ್ಜುನ ಖರ್ಗೆಯವರೇ ಸಾಕ್ಷಿ -ರಣದೀಪ್ ಸುರ್ಜೆವಾಲಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ
ವರಿಷ್ಠರು ಬರೆದು ಕೊಟ್ಟದ್ದನ್ನು ಒಪ್ಪಿಸುವ ಕಲೆ ಕರಗತ ಆಗಿದ್ದರೆ ಸಾಕು.

ಬ್ರೇಕಿಂಗ್ ನ್ಯೂಸ್ ಬದಲು ಮೇಕಿಂಗ್ ನ್ಯೂಸ್‌ನತ್ತ ವಾರ್ತಾ ವಾಹಿನಿಗಳು ಆದ್ಯತೆ ನೀಡಬೇಕು - ರಾಘವೇಶ್ವರ ಭಾರತಿ ಸ್ವಾಮೀಜಿ, ರಾಮಚಂದ್ರಾಪುರ ಮಠ
ಸ್ವಾಮೀಜಿಗಳೇ ಬ್ರೇಕಿಂಗ್ ಸುದ್ದಿಯಾಗುತ್ತಿರುವಾಗ ಪಾಪ ಪತ್ರಕರ್ತರು ಏನು ಮಾಡಬೇಕು?

ಕಟ್ಟುವ ಮತ್ತು ಒಡೆಯುವ ಎರಡೂ ಸಾಮರ್ಥ್ಯ ಮಾಧ್ಯಮಕ್ಕೆ ಇದೆ - ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
ಇತ್ತೀಚೆಗೆ ಸ್ವಾಮೀಜಿಗಳು ತಮ್ಮ ಸಾಮರ್ಥ್ಯವನ್ನು ಒಡೆಯುವುದಕ್ಕಷ್ಟೇ ಸೀಮಿತಗೊಳಿಸುತ್ತಿದ್ದಾರೆ ಎನ್ನುವ ಆರೋಪಗಳಿವೆ.

ಕಾಂಗ್ರೆಸ್‌ನವರಿಗೆ ಅಧಿಕಾರ ಕೊಟ್ಟರೆ ಕರ್ನಾಟಕವನ್ನು ಕೇರಳದ ರೀತಿ ಮಾಡುತ್ತಾರೆ ಎಂಬ ಭಯ ಜನರನ್ನು ಕಾಡುತ್ತಿದೆ - ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ
ಶಿಕ್ಷಣ, ಆರೋಗ್ಯ, ಅಭಿವೃದ್ಧಿಗೆ ಮಾದರಿಯಾಗಿ ಕೇರಳದ ರೀತಿ ಮಾಡಲಿ ಎನ್ನುವುದೇ ಕರ್ನಾಟಕದ ಜನರ ಆಶಯ.

'ತಬ್ಬಲಿಯು ನೀನಾದೆ ಮಗನೇ' ಎನ್ನುವ ಹಾಗೆ ಕಾಂಗ್ರೆಸ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಬ್ಬಲಿಯಾಗಿದ್ದಾರೆ - ಸಿ.ಎಂ.ಇಬ್ರಾಹೀಂ, ಜೆಡಿಎಸ್ ಅಧ್ಯಕ್ಷ
ತಬ್ಬಲಿಕ್ಕೆ ನೀವಿಲ್ಲ ಎನ್ನುವ ಕಾರಣದಿಂದಲೇ?

ಅಧಿಕಾರವೆಂಬ ಪಿತ್ತ ಹಣದ ಪಿತ್ತಕ್ಕಿಂತಲೂ ಅತ್ಯಂತ ಕೆಟ್ಟದು - ಸಿ.ಟಿ.ರವಿ, ಶಾಸಕ
ನಿಮಗೆ ಏರಿರುವ ಪಿತ್ತ ಅದನ್ನೇ ಹೇಳುತ್ತಿದೆ.

ಬಿಪಿಎಲ್ ಕಾರ್ಡುದಾರರಿಗೆ ಕರಾವಳಿಯಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ - ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಕುಚ್ಚಲಕ್ಕಿ ವಿತರಿಸದಿದ್ದರೂ ತೊಂದರೆಯಿಲ್ಲ, ದ್ವೇಷ ವಿತರಿಸುವುದನ್ನು ನಿಲ್ಲಿಸಿ.

ಮೇಲ್ಜಾತಿಯ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆಯೂ ಇದೆ - ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ
ದಲಿತರಿಗಿರುವ ಮೀಸಲಾತಿಯನ್ನು ರದ್ದುಗೊಳಿಸಲು ಕಾಂಗ್ರೆಸ್ ಹೋರಾಟ ಯಾವಾಗ?

ಆರ್ಥಿಕ ಉದಾರೀಕರಣಕ್ಕಾಗಿ ಭಾರತವು ಮನಮೋಹನ್ ಸಿಂಗ್ ಗೆ ಋಣಿಯಾಗಿದೆ - ನಿತಿನ್ ಗಡ್ಕರಿ, ಕೇಂದ್ರ ಸಚಿವ
ಅದರಿಂದಲೇ ನಿಮಗೆ ದೇಶವನ್ನು ದೋಚುವುದು ಇಷ್ಟು ಸುಲಭವಾಗಿರುವುದು. ಋಣಿಯಾಗಲೇಬೇಕು ಬಿಡಿ.

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೆಗೌಡರಿಗೆ ಆಹ್ವಾನ ನೀಡದೆ ಇರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ - ಕುಮಾರ ಸ್ವಾಮಿ, ಜೆಡಿಎಸ್ ಮುಖಂಡ
ದೇವೇಗೌಡರು ಅನಾವರಣಗೊಳಿಸುವುದಕ್ಕಾಗಿ ಹೊಸ ಪ್ರತಿಮೆ ನಿರ್ಮಾಣ ಮಾಡುವ ಉದ್ದೇಶ ಇದೆಯೇ?

ನಾಗರಿಕ ಸ್ವಾತಂತ್ರ್ಯ, ಹಕ್ಕುಗಳಿಗೆ ಬದ್ಧರಾಗೋಣ - ಜಾನೆಟ್ ಎಲೆನ್, ಅಮೆರಿಕ ವಿತ್ತ ಸಚಿವೆ
ಇರಾಕ್, ಫೆಲೆಸ್ತೀನ್, ಸಿರಿಯಾ, ಅಫ್ಘಾನಿಸ್ತಾನಗಳೆಲ್ಲ ನಿಮ್ಮ ನಾಗರಿಕ ಸ್ವಾತಂತ್ರ ದ ಹೆಗ್ಗಳಿಕೆಗಳಲ್ಲವೇ?

ಮೂಲ ಸೌಕರ್ಯಗಳು ಸೈಬರ್ ದಾಳಿಗಳಿಗೆ ಸುಲಭದ ತುತ್ತಾಗಬಹುದು - ರಾಜನಾಥ್ ಸಿಂಗ್, ಕೇಂದ್ರ ಸಚಿವ
ಕಾರ್ಪೊರೇಟ್ ದಾಳಿಗೆ ಸಿಕ್ಕಿದ ದೇಶದ ಬಗ್ಗೆ ಒಂದಿಷ್ಟು ಆತಂಕ ವ್ಯಕ್ತಪಡಿಸಿ

share
ಪಿ.ಎ. ರೈ
ಪಿ.ಎ. ರೈ
Next Story
X