Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2020ರ ಗಲಭೆ ಪ್ರಕರಣದಲ್ಲಿ ʼಅಸಂಬದ್ಧʼ...

2020ರ ಗಲಭೆ ಪ್ರಕರಣದಲ್ಲಿ ʼಅಸಂಬದ್ಧʼ ಸಾಕ್ಷಿಗಳನ್ನು ಹಾಜರುಪಡಿಸಿದ್ದಕ್ಕೆ ದಿಲ್ಲಿ ಪೊಲೀಸರಿಗೆ ಕೋರ್ಟ್‌ ತರಾಟೆ

15 Nov 2022 5:32 PM IST
share
2020ರ ಗಲಭೆ ಪ್ರಕರಣದಲ್ಲಿ ʼಅಸಂಬದ್ಧʼ ಸಾಕ್ಷಿಗಳನ್ನು ಹಾಜರುಪಡಿಸಿದ್ದಕ್ಕೆ ದಿಲ್ಲಿ ಪೊಲೀಸರಿಗೆ ಕೋರ್ಟ್‌ ತರಾಟೆ

ಹೊಸದಿಲ್ಲಿ,ನ.15: ಈಶಾನ್ಯ ದಿಲ್ಲಿಯಲ್ಲಿ 2020ರಲ್ಲಿ ಸಂಭವಿಸಿದ್ದ ಗಲಭೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ‘ಅಸಂಬದ್ಧ ಸಾಕ್ಷಿ’ಗಳನ್ನು ಹಾಜರು ಪಡಿಸಿದ್ದಕ್ಕಾಗಿ ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿರುವ ದಿಲ್ಲಿಯ ನ್ಯಾಯಾಲಯವು,ಇದೇ ವೇಳೆ ‘ಎಚ್ಚೆತ್ತುಕೊಳ್ಳುವಂತೆ ’ ಪ್ರಾಸಿಕ್ಯೂಷನ್ಗೆ ಅಂತಿಮ ಎಚ್ಚರಿಕೆಯನ್ನು ನೀಡಿದೆ.

ದಾಖಲೆಗಳನ್ನು ಪರಿಶೀಲಿಸುವಂತೆ ಮತ್ತು ಎಲ್ಲವೂ ಸರಿಯಾಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳುವಂತೆ ಹಿಂದಿನ ಹಲವಾರು ಪ್ರಕರಣಗಳಲ್ಲಿ ಪದೇ ಪದೇ ನಿರ್ದೇಶನಗಳನ್ನು ನೀಡಿದ್ದರೂ ಈ ಪ್ರಕರಣದಲ್ಲಿ ಪ್ರಾಸಿಕ್ಯೂಟರ್ ಆಗಲೀ ತನಿಖಾಧಿಕಾರಿಯಾಗಲೀ ಆ ಕಷ್ಟವನ್ನು ತೆಗೆದುಕೊಂಡಿಲ್ಲ ಎಂದು ನ್ಯಾಯಾಲಯವು ಝಾಡಿಸಿತು.

ನ್ಯಾಯಾಲಯವು ಮೂವರು ಮುಸ್ಲಿಮ್ ವ್ಯಕ್ತಿಗಳ ವಿರುದ್ಧ ಖಜುರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಕಲಾಪವನ್ನು ಕೈಗೆತ್ತಿಕೊಂಡಿತ್ತು.

ಸೋಮವಾರ ಮನೋಜ್ ಕುಮಾರ್ ಎಂಬ ಸಾಕ್ಷಿ ನ್ಯಾಯಾಲಯದಲ್ಲಿ ಹಾಜರಿದ್ದ. ಇದನ್ನು ಗಮನಿಸಿದ ಆರೋಪಿಗಳ ಪೈಕಿ ಓರ್ವನ ಪರ ವಕೀಲರು,‌ ರೂಪಿಸಲಾಗಿರುವ ಆರೋಪಗಳಲ್ಲಿ ಕುಮಾರ್‌ನ ದೂರನ್ನು ಉಲ್ಲೇಖಿಸಿಲ್ಲ ಎನ್ನುವುದನ್ನು ಬೆಟ್ಟು ಮಾಡಿದರು. ಘಟನೆಯ ತಪ್ಪು ದಿನಾಂಕವನ್ನು ಆರೋಪಗಳಲ್ಲಿ ಉಲ್ಲೇಖಿಸಲಾಗಿದೆ ಎನ್ನುವುದನ್ನೂ ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಕುಮಾರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಆರೋಪಗಳನ್ನು ರೂಪಿಸಲಾಗಿಲ್ಲ,ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಲಿರುವ ಇನ್ನೋರ್ವ ಸಾಕ್ಷಿಗೂ ಇದು ಅನ್ವಯಿಸುತ್ತದೆ ಎಂದು ಪ್ರಾಸಿಕ್ಯೂಷನ್ ಒಪ್ಪಿಕೊಂಡಿತು.
ಹಲವಾರು ದೂರುಗಳನ್ನು ಒಂದುಗೂಡಿಸಲಾಗಿದೆ ಎಂದೂ ಅದು ತಿಳಿಸಿತು.
‌

ಇನ್ನು ಮುಂದೆ ಇಂತಹ ತಪ್ಪುಗಳ ಕುರಿತು ನ್ಯಾಯಾಲಯವು ಉದಾರವಾಗಿರುವುದಿಲ್ಲ ಮತ್ತು ಎಚ್ಚೆತ್ತುಕೊಳ್ಳುವಂತೆ ಇದು ಪ್ರಾಸಿಕ್ಯೂಷನ್ಗೆ ಕೊನೆಯ ಎಚ್ಚರಿಕೆಯಾಗಿದೆ ಎಂದು ಹೇಳಿದ ನ್ಯಾಯಾಲಯವು,ಪ್ರಕರಣದ ವಿಚಾರಣೆಯನ್ನು ನ.29ಕ್ಕೆ ಮುಂದೂಡಿತು.

share
Next Story
X