Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹರೇಕಳ: ಪಂಚಾಯತ್ ಕಟ್ಟಡದಲ್ಲಿ ಅರಳಿದ...

ಹರೇಕಳ: ಪಂಚಾಯತ್ ಕಟ್ಟಡದಲ್ಲಿ ಅರಳಿದ ಹಾಜಬ್ಬರ ಚಿತ್ತಾರ

16 Nov 2022 1:48 PM IST
share
ಹರೇಕಳ: ಪಂಚಾಯತ್ ಕಟ್ಟಡದಲ್ಲಿ ಅರಳಿದ ಹಾಜಬ್ಬರ ಚಿತ್ತಾರ

ಕೊಣಾಜೆ: ಹರೇಕಳ ಎಂಬ ಗ್ರಾಮದ ಹೆಸರನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕೀರ್ತಿ ಹರೇಕಳ ಹಾಜಬ್ಬ ರಿಗೆ ಸಲ್ಲುತ್ತದೆ. ಇದೀಗ ಅದೇ ಹರೇಕಳ ಹಾಜಬ್ಬರ ಭಾವಚಿತ್ರವು  ಗ್ರಾಮದ ಮುಖ್ಯ ಕೇಂದ್ರವಾಗಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಹೊರ ಭಾಗದಲ್ಲಿ ಗೋಡೆಯಲ್ಲಿ ಆಕರ್ಷಣೀಯವಾಗಿ ಮೂಡಿ ಬಂದಿದ್ದು, ಈ ಮೂಲಕ ಹಾಜಬ್ಬರ ಕೊಡುಗೆಯನ್ನು ಸ್ಮರಿಸಿ ಗೌರವಿಸುವ ಕಾರ್ಯಕ್ಕೆ ಮುಂದಾಗಿದೆ.

ಕಿತ್ತಲೆ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ  ಅವರಲ್ಲಿ ಮೂಡಿದ ಅಕ್ಷರ ಕ್ರಾಂತಿಯು ಅವರ ಕೀರ್ತಿಯನ್ನು ಈ ಎತ್ತರಕ್ಕೆ ನಿಲ್ಲಿಸಿದೆ. ಗ್ರಾಮದಲ್ಲಿ ಶಾಲೆ ಆರಂಭಿಸಬೇಕೆಂಬ ಅವರ ಕನಸಿಗೆ ಅವಿರತ ಹೋರಾಟ, ಪರಿಶ್ರ, ಇಲಾಖೆ, ಜನಪ್ರತಿನಿಧಿಗಳಲ್ಲಿಗೆ ಅಲೆದಾಟ ಪರಿಣಾಮ ಇಂದು ಶಾಲೆ ಹಂತ ಹಂತವಾಗಿ ಹೈಸ್ಕೂಲ್ ವರೆಗೂ ಬೆಳೆದಿದೆ. ಅವರ ಕನಸಿನ ಪಿಯು ಕಾಲೇಜು ಕೂಡಾ ನಿರ್ಮಾಣಗೊಳ್ಳುವ ಯೋಜನೆಯೂ ಸಾಕರಗೊಳ್ಳುವ ಹಂತಕ್ಕೆ ಬಂದಿದೆ. ಅಕ್ಷರ ಸಂತ ಹಾಜಬ್ಬರಿಗೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಜೊತೆಗೆ ಅಕ್ಷರ ಸಂತನಿಗೆ ಒಲಿದ  ಪದ್ಮಶ್ರೀ ಇಡೀ ಜಗತ್ತಿಗೇ ಅವರನ್ನು ಪರಿಚಯಿಸುವಂತೆ ಮಾಡಿದೆ.

 ಇಂತಹ ಅಕ್ಷರ ಸಂತ ಹಾಜಬ್ಬರೊಂದಿಗೆ  ಹರೇಕಳದ ಹೆಸರೂ ಪ್ರಸಿದ್ಧವಾಗಿದೆ. ಹಾಜಬ್ಹರ ಪ್ರಸಿದ್ದಿಯೊಂದಿಗೆ ಹಾಜಬ್ಬರ ಹೆಸರು ಕೂಡಾ ಇಂದು ಪ್ರಸಿದ್ಧಿಯನ್ನು ಪಡೆದಿದೆ. ಇದೀಗ ಹರೇಕಳ ಬಾವಲಿಗುರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಗ್ರಾಮಪಂಚಾಯಿತಿಯ ಕೆಲಸ ಕಾರ್ಯ ಮುಗಿಯುತ್ತಾ ಬಂದಿದೆ. ಇದೀಗ ಕಟ್ಟಡದ ಒಂದು ಭಾಗದ ಡಿಜಿಟಲ್ ಗ್ರಂಥಾಲಯದ ಗೋಡೆಯಲ್ಲಿ ಹರೇಕಳ ಹಾಜಬ್ಬರ ಚಿತ್ರವನ್ನು ಬಿಡಿಸುವ ಮೂಲಕ ಹರೇಕಳ ಗ್ರಾಮಸ್ಥರು ಕೂಡಾ ಹಾಜಬ್ಬರಿಗೆ ಆ ಮೂಲಕ ಗೌರವ ಸಲ್ಲಿಸಲು ಮುಂದಾಗಿದೆ ಶ್ಲಾಘನೀಯವಾಗಿದೆ.

ನನ್ನ ಭಾವಚಿತ್ರವನ್ನು ಪಂಚಾಯತಿ ಕಟ್ಟಡದ ಗೋಡೆಯಲ್ಲಿ ಬಿಡಿಸಿ ನನ್ನ ಮೇಲೆ ಅಭಿಮಾನ ತೋರಿದ ಗ್ರಾಮಸ್ಥರು, ಜನಪ್ರತಿನಿಧಿಗಳಿಗೆ ಚಿರ ಋಣಿಯಾಗಿದ್ದೇನೆ.

ಹರೇಕಳ ಹಾಜಬ್ಬ

share
Next Story
X