Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ವಿವಾದಿತ ಬಸ್‌ ನಿಲ್ದಾಣ ವಾರದೊಳಗೆ...

'ವಿವಾದಿತ ಬಸ್‌ ನಿಲ್ದಾಣ ವಾರದೊಳಗೆ ​ತೆರವುಗೊಳಿಸಿ'; ಮೈಸೂರು ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್

16 Nov 2022 5:53 PM IST
share
ವಿವಾದಿತ ಬಸ್‌ ನಿಲ್ದಾಣ ವಾರದೊಳಗೆ ​ತೆರವುಗೊಳಿಸಿ; ಮೈಸೂರು ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್

ಮೈಸೂರು,ನ.16: ಮೈಸೂರು ನಗರದ ಜೆಎಸ್‍ಎಸ್ ಕಾಲೇಜು ಬದಿಯ ಮೈಸೂರು- ನಂಜನಗೂಡು ರಸ್ತೆಯಲ್ಲಿ ನಿರ್ಮಿಸುತ್ತಿರುವ ನೂತನ ಬಸ್ ನಿಲ್ದಾಣವನ್ನು ಒಂದು ವಾರದೊಳಗೆ ತೆರವು ಮಾಡುವಂತೆ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದಿಂದ ಪಾಲಿಕೆ ಆಯುಕ್ತರು ಮತ್ತು ಕೆ.ಆರ್.ಐ.ಡಿ.ಎಲ್ ಎಂಜಿನಿಯರ್ ಗೆ ನೋಟೀಸ್ ಜಾರಿ ಮಾಡಲಾಗಿದೆ.

'ಬಸ್ ನಿಲ್ದಾಣ ಗುಂಬಜ್ ರೀತಿ ಇದೆ. ಅದನ್ನು ಒಡೆಯುತ್ತೇನೆ' ಎಂಬ ವಿವಾದಕ್ಕೆ ಕಾರಣವಾಗಿದ್ದ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಶಾಸಕ ಎಸ್.ಎ.ರಾಮದಾಸ್ ಸ್ಪಷ್ಟನೆ ಕೂಡ ನೀಡಿದ್ದರು. 

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಸುಮಾರು 10 ಲಕ್ಷ ರೂ. ಅನುದಾನ ನೀಡಿ ಈ ನೂತನ ಬಸ್ ನಿಲ್ದಾಣ ನಿರ್ಮಿಸಿದ್ದರು. ಬಸ್ ನಿಲ್ದಾಣ ಮೇಲಿನ ಗೋಳಾಕಾರದ ಗುಮ್ಮಟಗಳು ಈಗ ವಿವಾದಕ್ಕೀಡಾಗಿದ್ದು, ಈ ವಿಚಾರ ಶಾಸಕ ಎಸ್.ಎ.ರಾಮದಾಸ್ ಮತ್ತು ಸಂಸದ ಪ್ರತಾಪ್ ಸಿಂಹ ನಡುವೆ ಜಟಾಪಟಿಗೆ ಕಾರಣವಾಗಿದೆ ಎನ್ನಲಾಗಿದೆ.

ಇವುಗಳ ಮಧ್ಯೆ ಹೈವೇ ಅಥಾರಿಟಿ ಜಾರಿ ಮಾಡಿರುವ ನೋಟೀಸ್‍ನಲ್ಲಿ ಇದೊಂದು ವಿವಾದಾತ್ಮಕ ಅಕ್ರಮ ಕಟ್ಟಡ, ಯಾವುದೇ ಪೂರ್ವಾನುಮತಿ ಪಡೆಯದೆ ಇದನ್ನು ನಿರ್ಮಿಸಲಾಗಿದೆ. ಜತೆಗೆ ಕಟ್ಟಡ ವಿನ್ಯಾಸವು ಕೋಮು ಭಾವನೆ ಕೆರಳಿಸುವಂತಿದ್ದು ಕೂಡಲೇ ಇದನ್ನು ತೆರವುಗೊಳಿಸಿ ಎಂದು ತಿಳಿಸಲಾಗಿದೆ.  

ಇದನ್ನೂ ಓದಿ: ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ, ಗುತ್ತಿಗೆದಾರ ಮುಸ್ಲಿಮ್ ಅಲ್ಲ: ಶಾಸಕ ಎಸ್.ಎ. ರಾಮದಾಸ್

ಸಾರ್ವಜನಿಕರ  ಆಕ್ರೋಶ:  ''ಕಟ್ಟಡ ಒಡೆದರೆ 10 ಲಕ್ಷ ರೂ, ಜನರ ತೆರಿಗೆ ಹಣ ಹಾಳುಮಾಡಿದಂತೆ. ಇದಕ್ಕೆ ಯಾರು  ಹೊಣೆ? ಶಾಸಕರೋ? ಅಧಿಕಾರಿಗಳೋ ಅಥವಾ ಕಟ್ಟಡ ಒಡೆಯಲು ಮುಂದಾಗಿರುವ ಸಂಸದರೋ ? '' ಎಂದು  ಸಾರ್ವಜನಿಕರು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

---------------------------------------------

'ಪಾರಂಪರಿಕ ವಿನ್ಯಾಸವನ್ನೇ ಹೊಂದಿರ ಬೇಕು ಎಂದು ತೀರ್ಮಾನಿಸಲಾಗಿದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

''ಇಡೀ ಪ್ರಪಂಚದಲ್ಲಿ 8 ಬಗೆಯ ಆರ್ಕಿಟೆಕ್ಚರ್ ಗಳನ್ನು ಬಳಸಲಾಗುತ್ತಿದೆ. ಮೈಸೂರು ಅರಮನೆಯ ಮೇಲ್ಬಾಗದ ಗೋಪುರವನ್ನು ಮೋಘಲರ ಆರ್ಕಿಟೆಕ್ಚರ್ ಎಂದು ಕರೆಯುತ್ತೇವೆ. ಬ್ರಿಟನ್ ಸೇರಿದಂತೆ ಪ್ರಪಂಚದಾದ್ಯಂತ ಈ ವಿನ್ಯಾಸ ಬಳಸಲಾಗಿದೆ. ಮೈಸೂರು ಅರಮನೆ ವಿನ್ಯಾಸ ಆಧಆರದ ಮೇಲೆ ಅಲ್ಲಿನ ಪಾಲಿಕೆ, ಶಾಸಕರು ಸೇರಿ ಅರಮನೆಯ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ  ನಿರ್ಮಾಣ ಮಾಡಬೇಕಾದರೂ ಅದು ಅರಮನೆಯ ಪಾರಂಪರಿಕ ವಿನ್ಯಾಸವನ್ನೇ ಹೊಂದಿರ ಬೇಕು ಎಂದು ತೀರ್ಮಾನಿಸಲಾಗಿದೆ. ಇದು ಮೈಸೂರು ಪಾಲಿಕೆಯ ಬೈಲಾದಲ್ಲೂ ಇದೆ. ಒಂದು ಶೌಚಾಲಯ ಕಟ್ಟಿದರೂ ಅದರ ವಿನ್ಯಾಸ ಈ ರೀತಿ ಇರಬೇಕು ಎಂದು ಕಾನೂನು ಇದೆ'' ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 

share
Next Story
X