Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಇಲಾಖೆಯ ಅಕ್ರಮದ ಬಗ್ಗೆ...

ಪೊಲೀಸ್ ಇಲಾಖೆಯ ಅಕ್ರಮದ ಬಗ್ಗೆ ಶೀಘ್ರದಲ್ಲೇ ದಾಖಲೆ ಬಿಡುಗಡೆ: ಡಿ.ಕೆ.ಶಿವಕುಮಾರ್

''ಪ್ರತಾಪ್ ಸಿಂಹ ಮೈಸೂರಿನ ಉದ್ಧಾರಕ್ಕೆ ಒಂದು ದಿನವೂ ಮಾತನಾಡಿಲ್ಲ''

16 Nov 2022 7:55 PM IST
share
ಪೊಲೀಸ್ ಇಲಾಖೆಯ ಅಕ್ರಮದ ಬಗ್ಗೆ ಶೀಘ್ರದಲ್ಲೇ ದಾಖಲೆ ಬಿಡುಗಡೆ: ಡಿ.ಕೆ.ಶಿವಕುಮಾರ್
''ಪ್ರತಾಪ್ ಸಿಂಹ ಮೈಸೂರಿನ ಉದ್ಧಾರಕ್ಕೆ ಒಂದು ದಿನವೂ ಮಾತನಾಡಿಲ್ಲ''

ಬೆಂಗಳೂರು, ನ. 16: ‘ಪೊಲೀಸ್ ಇಲಾಖೆಯ ಅಕ್ರಮದ ಬಗ್ಗೆ ಪೂರಕವಾಗಿರುವ ದಾಖಲೆಗಳನ್ನು ನಾನು ಸದ್ಯದಲ್ಲೇ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾಖಲೆ ಇಲ್ಲದೆ ಯಾವುದೇ ಆರೋಪ ಮಾಡುತ್ತಿಲ್ಲ ಈ ವಿಚಾರವಾಗಿ ಹಿರಿಯ ಅಧಿಕಾರಿಗಳ ಜತೆ ಮಾತನಾಡಿರುವ ಆಡಿಯೋ ನಮ್ಮ ಬಳಿ ಇದೆ. ಈಗ ಇದರಲ್ಲಿ ಯಾರೆಲ್ಲಾ ಭಾಗವಾಗಿದ್ದಾರೆಂದು ಹೇಳಿದರೆ ಮಾನನಷ್ಟ ಮೊಕದ್ದಮೆಗೆ ದಾರಿಯಾಗುತ್ತದೆ. ಆ ಅಧಿಕಾರಿ ಅನುಮತಿ ಪಡೆದು ಕಾನೂನು ರೀತಿಯಲ್ಲಿ ಆಡಿಯೋ ಬಿಡುಗಡೆ ಮಾಡಲಾಗುವುದು’ ಎಂದು ಹೇಳಿದರು.

ಅವರು ಭಾರತ ಮಾತೆ ಮಕ್ಕಳಲ್ಲವೇ?: ‘ಸಂಸದ ಪ್ರತಾಪ್ ಸಿಂಹಗೆ ಒಂದು ಪ್ರಶ್ನೆ ಕೇಳುತ್ತೇನೆ. ದೇಶದಲ್ಲಿರುವ ಮುಸ್ಲಿಮರು ಭಾರತ ಮಾತೆಯ ಮಕ್ಕಳಲ್ಲವೇ? ನಮಗೆ ನಿಮಗೆ ಯಾವ ಹಕ್ಕಿದೆಯೋ ಅವರಿಗೂ ಅಷ್ಟೇ ಹಕ್ಕು ಇದೆ. ನಿಮ್ಮ ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಜನರಲ್ಲಿ ಭ್ರಮೆ ಮೂಡಿಸಬೇಡಿ. 2023ರ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಜನ ತೋರಿಸುತ್ತಾರೆ’ ಎಂದು ಶಿವಕುಮಾರ್ ಎಚ್ಚರಿಕೆ ನೀಡಿದರು.

‘ಒಂದು ಕ್ಷೇತ್ರದ ಬಸ್ ಶೆಲ್ಟರ್ ಕಾಮಗಾರಿಗೂ ಸಂಸದ ಪ್ರತಾಪ್ ಸಿಂಹಗೂ ಏನು ಸಂಬಂಧ. ಬಿಜೆಪಿ ಶಾಸಕ ರಾಮದಾಸ್ ಲಿಖಿತ ರೂಪದಲ್ಲಿ ಪ್ರತಾಪ್ ಸಿಂಹ ಅವರು ರಾಜಕಾರಣ ಮಾಡುತ್ತಿದ್ದಾರೆಂದು ಹೇಳಿದ್ದಾರೆ. ಪ್ರತಾಪ್ ಸಿಂಹ ಅವರು ಮೈಸೂರಿನ ಉದ್ಧಾರಕ್ಕೆ ಒಂದು ದಿನವೂ ಮಾತನಾಡಿಲ್ಲ. ಕೇವಲ ಕಿಡಿ ಹಚ್ಚುವ ಬಗ್ಗೆ ಮಾತನಾಡುತ್ತಾರೆ. ಬಸ್ ಶೆಲ್ಟರ್ ಹೊಡೆಸುತ್ತೀರಾ, ಹೊಡೆಸಿ ನಾವು ಬಂದು ಅದನ್ನು ನಿಲ್ಲಿಸುವುದಿಲ್ಲ, ಕಾಂಗ್ರೆಸ್ ಪಕ್ಷದವರು ಬಂದು ನಿಂತು ನೋಡುತ್ತೇವೆ. ನಿಮಗೆ ಧೈರ್ಯ ತಾಕತ್ತು-ಧಮ್ಮು ಇದ್ದರೆ ಅದನ್ನು ಹೊಡೆಸಿ. ಕೇವಲ ಪ್ರಚಾರಕ್ಕಾಗಿ ಮಾತನಾಡುವುದನ್ನು ಬಿಡಿ. ನಿಮ್ಮ ಯೋಗ್ಯತೆಗೆ ಕೇಂದ್ರದಿಂದ 5 ಕೋಟಿ ರೂ.ಗಳನ್ನಾದರೂ ತಂದಿದ್ದರೆ ಮಾತನಾಡಿ’ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.

‘ಸಿದ್ದರಾಮಯ್ಯ, ಮಹದೇವ್ ಪ್ರಸಾದ್, ಆಸ್ಕರ್ ಫನಾರ್ಂಡೀಸ್ ಅವರ ಕೊಡುಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಆಗುತ್ತಿದೆ. ಇದರಲ್ಲಿ 100 ಕೋಟಿ ರೂ.ಕಮಿಷನ್ ಪಡೆದಿದ್ದೀರಿ ಎಂದು ಮಂಡ್ಯದಲ್ಲಿ ಆರೋಪ ಮಾಡಿದ್ದಾರೆ. ಈ ಬಗ್ಗೆ ನೀವು ಉತ್ತರವೇ ಕೊಟ್ಟಿಲ್ಲ. ನಿಮ್ಮ ಸಂಸದ ನಿಧಿಯನ್ನು ಬಿಡದೇ ತಿನ್ನುತ್ತಿದ್ದೀರಿ. ನಿಮ್ಮ ಯೋಗ್ಯತೆ ಏನು ಎಂದು ನೋಡಿಕೊಳ್ಳಿ. ಸಿದ್ದರಾಮಯ್ಯನವರ ವಿರುದ್ಧ ಟೀಕೆ ಮಾಡಲು ಆರೆಸ್ಸೆಸ್ ನವರು ತರಬೇತಿ ನೀಡಿ ಕಳುಹಿಸುತ್ತಿದ್ದಾರೆ’ ಎಂದು ಅವರು ದೂರಿದರು.

share
Next Story
X