Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡಿಗರ ಸಾಧನೆಗಳನ್ನು ಗುರುತಿಸಬೇಕು:...

ಕನ್ನಡಿಗರ ಸಾಧನೆಗಳನ್ನು ಗುರುತಿಸಬೇಕು: ಸಿಎಂ ಬೊಮ್ಮಾಯಿ

ಪರಿಷತ್ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ

17 Nov 2022 10:58 PM IST
share
ಕನ್ನಡಿಗರ ಸಾಧನೆಗಳನ್ನು ಗುರುತಿಸಬೇಕು: ಸಿಎಂ ಬೊಮ್ಮಾಯಿ
ಪರಿಷತ್ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ

ಬೆಂಗಳೂರು, ನ.17: ಕನ್ನಡ ಸಾಹಿತ್ಯ ಸಂಸ್ಕೃತಿಯಲ್ಲಿ ಕನ್ನಡಿಗರು ದೊಡ್ಡ ಸಾಧನೆಗಳನ್ನು ಮಾಡಿದ್ದು, ಅದನ್ನು ಗುರುತಿಸುವ ಕೆಲಸ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು. ದೂರದ ಯಾವುದೇ ದೇಶದಲ್ಲಿ ಸಾಧನೆ ಮಾಡಿದವರನ್ನು ಗುರುತಿಸುವ ನಾವು ಕನ್ನಡಕ್ಕಾಗಿ ಕೆಲಸ ಮಾಡಿದವರನ್ನು ಗುರುತಿಸುವ ಕೆಲಸ ಮಾಡಬೇಕಿದೆ. ಕನ್ನಡದ ಬಗ್ಗೆ ಸ್ವಾಭಿಮಾನ ಇದ್ದಾಗ ಈ ಬಾಷೆಗೆ ಧಕ್ಕೆ ಬರುವುದಿಲ್ಲ ಎಂದರು.

ಇಡೀ ಸೃಷ್ಟಿಯನ್ನು ಎತ್ತಿ ಹಿಡಿದು ತನ್ನ ಆತ್ಮಚೈತನ್ಯ ಕೊಟ್ಟು ಕಾಪಾಡುತ್ತಾಳೆ. ಯಾರ ಕಾಲದಲ್ಲಿ ಏನು ಆಗಬೇಕೊ ಅದು ಆಗುತ್ತದೆ. ಭುವನೇಶ್ವರಿ ಪುತ್ತಳಿ ಮಹೇಶ ಜೊಶಿ ಯವರ ಕಡೆಯಿಂದ ಆಗಿದೆ ಎಂದು ಹೇಳಿದರು.

ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಕನ್ನಡವೂ ಒಂದು. ಕನ್ನಡ ದೇವರ ಲಿಪಿ ಅಂತ ಕರೆಯಲಾಗುತ್ತದೆ. ಕನ್ನಡ ಭಾಷೆ ಶ್ರೀಮಂತವಾಗಲು ಕಾರಣವೆಂದರೆ ಅದು ಬದುಕಿಗೆ ಬಹಳ ಹತ್ತಿರವಾಗಿದೆ. ಭಾವನೆಗಳಿಂದ ತುಂಬಿರುವ ಭಾಷೆಯಾಗಿದೆ. ಕನ್ನಡಕ್ಕೆ ಯಾವತ್ತೂ ಆಪತ್ತು ಬಂದಿಲ್ಲ. ಎಲ್ಲಿಯವರೆಗೂ ಸೂರ್ಯಚಂದ್ರರು ಇರುತ್ತಾರೊ ಅಲ್ಲಿಯವರೆಗೆ ಕನ್ನಡಕ್ಕೆ ಯಾವುದೇ ಆತಂಕ ಇಲ್ಲ ಎಂದರು. 

ಕನ್ನಡದ ಬಗ್ಗೆ ಜಾಗೃತಿ ಮೂಡಿಸಿ ಏಕೀಕರಣದ ಹೊರಾಟ ಮಾಡದಿದ್ದರೆ ನಾವು ಒಂದಾಗುತ್ತಿರಲಿಲ್ಲ. ಅಂದಾನಪ್ಪ ದೊಡ್ಡ ಮೇಟಿ, ಅದರಗುಂಚಿ ಶಂಕರಗೌಡರು ಉಪವಾಸ ಕುಳಿತುಕೊಳ್ಳದಿದ್ದರೆ ಇಂದು ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ ಎಂದರು.

ನ್ಯಾ. ಶಿವರಾಜ್ ಪಾಟೀಲರು ರಾಜಸ್ತಾನ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸಮಾಡಿದ್ದಾರೆ. ಅವರನ್ನು ರಾಜಸ್ತಾನದ ಜನರು ನೆನೆಸಿಕೊಳ್ಳುತ್ತಾರೆ. ಅನೇಕ ಕನ್ನಡಿಗರ ಸೇವೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದರು.

ಕನ್ನಡಕ್ಕೆ ಪ್ರಾಶಸ್ತ್ಯ ನೀಡುವ ವಿಧೇಯಕ: ಬೆಳಗಾವಿ ಅಧಿವೇಶನದಲ್ಲಿ ಕನ್ನಡಕ್ಕೆ ಪ್ರಾಶಸ್ತ್ಯ ನೀಡುವ ವಿಧೇಯಕ ಮಂಡನೆ ಮಾಡಲಾಗುವುದು. ಈ ಬಗ್ಗೆ ಚರ್ಚೆ ಮಾಡಿ ಅನುಮೋದನೆ ಮಾಡುತ್ತೇವೆ. ಅದು ಎಲ್ಲ ರೀತಿಯಲ್ಲಿ ಕಾರ್ಯಗತ ಮಾಡುವ ಕೆಲಸ ಮಾಡುತ್ತೇವೆ. ಸರಕಾರ ಸಂಘ ಸಂಸ್ಥೆಗಳ ಮನದಾಳದ ಮಾತುಗಳು ಅದರಲ್ಲಿ ಬರುವಂತೆ ನೋಡಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿ, ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ, ಮಣಿಪಾಲ್ ಮಿಡಿಯಾ ಸಂಸ್ಥೆಯ ಸಂಧ್ಯಾ ಪೈ, ಫರ್ನಿನಾಂಡ್ ಕಿಟೆಲ್ ವಂಶಸ್ಥರಾದ ಅಲ್ಮೊಂಡ್ ಕಿಟೆಲ್ ಮತ್ತಿತರರು ಹಾಜರಿದ್ದರು.  

ಕನ್ನಡದಲ್ಲಿಯೂ ವಿಜ್ಞಾನ ಬೆಳೆದಿದೆ : ದೇಶದ ಗಡಿ ಮೀರಿ ವಿಜ್ಞಾನ ತಂತ್ರಜ್ಞಾನ ಬೆಳೆದಿದೆ. ಅಷ್ಟೇ ಅಲ್ಲ ನಮ್ಮ ಕನ್ನಡದಲ್ಲಿಯೂ ವಿಜ್ಞಾನ ತಂತ್ರಜ್ಞಾನ ಬೆಳೆದಿದೆ. ಅದಕ್ಕೆ ಶಕ್ತಿ ನೀಡುವ ಕೆಲಸ ಮಾಡಬೇಕು. ಸಾಹಿತ್ಯ, ಸಂಸ್ಕೃತಿ ಮತ್ತು ಸಂಗೀತದಿಂದ ಭಾಷೆ ಬೆಳೆಯುತ್ತದೆ. ನಮ್ಮ ಸಂಸ್ಕøತಿ ಬಹಳ ಶ್ರೇಷ್ಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

share
Next Story
X