Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ED ಮುಖ್ಯಸ್ಥರ ಅಧಿಕಾರಾವಧಿ ಮೂರನೇ ಬಾರಿ...

ED ಮುಖ್ಯಸ್ಥರ ಅಧಿಕಾರಾವಧಿ ಮೂರನೇ ಬಾರಿ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ

18 Nov 2022 8:02 AM IST
share
ED ಮುಖ್ಯಸ್ಥರ ಅಧಿಕಾರಾವಧಿ ಮೂರನೇ ಬಾರಿ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ

ಹೊಸದಿಲ್ಲಿ: ಕಾನೂನು ಜಾರಿ ನಿರ್ದೇಶನಾಲಯದ (Enforcement Directorate) ಮುಖ್ಯಸ್ಥ ಎಸ್.ಕೆ.ಮಿಶ್ರಾ (SK Mishra) ಅವರ ಅಧಿಕಾರಾವಧಿಯನ್ನು ಮೂರನೇ ಬಾರಿ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ndtv.com ವರದಿ ಮಾಡಿದೆ.

ಎಸ್.ಕೆ.ಮಿಶ್ರಾ ಅವರ ಅಧಿಕಾರಾವಧಿ ಮತ್ತೆ ಒಂದು ವರ್ಷಕ್ಕೆ ವಿಸ್ತರಣೆಯಾಗಿದ್ದು, ಇದು ಅವರ ಉದ್ಯೋಗದಲ್ಲಿ ಮೂರನೇ ವಿಸ್ತರಣೆಯಾಗಿದೆ. ಮುಂದಿನ ವರ್ಷ ಇವರು ಈ ಹುದ್ದೆಯಲ್ಲಿ ಐದು ವರ್ಷವನ್ನು ಪೂರೈಸಲಿದ್ದಾರೆ.

ಮಿಶ್ರಾ ಅವರು 2020ರಲ್ಲಿ ಈ ಹುದ್ದೆಯಲ್ಲಿ ಸೇವಾವಧಿ ವಿಸ್ತರಣೆ ಪಡೆದ ಮೊಟ್ಟಮೊದಲ ಅಧಿಕಾರಿ ಎನಿಸಿಕೊಂಡಿದ್ದರು. ತನಿಖಾ ಏಜೆನ್ಸಿಗಳ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಿಸುವ ಸಂಬಂಧ ಕೇಂದ್ರ ಸರ್ಕಾರ ಎಕ್ಸಿಕ್ಯೂಟಿವ್ ಆರ್ಡರ್ ಮೂಲಕ ಇವರ ಅಧಿಕಾರಾವಧಿಯನ್ನು ಎರಡನೇ ಬಾರಿ ವಿಸ್ತರಿಸಲಾಗಿತ್ತು. ವಿಸ್ತರಣೆಗೆ ಮುನ್ನ ಕೇಂದ್ರೀಯ ಏಜೆನ್ಸಿಗಳ ಮುಖ್ಯಸ್ಥರ ಹುದ್ದೆಗೆ ಎರಡು ವರ್ಷಗಳ ಅಧಿಕಾರಾವಧಿ ಇತ್ತು. ಈ ಸುಗ್ರೀವಾಜ್ಞೆ ಮೂಲಕ ಈ ಹುದ್ದೆಯಲ್ಲಿ ಐದು ವರ್ಷಗಳ ವರೆಗೆ ಮುಂದುವರಿಯಲು ಅವಕಾಶ ಇರುತ್ತದೆ.

ಈ ಸುಗ್ರೀವಾಜ್ಞೆ ಹೊರಡಿಸಿದ ಮರುದಿನ ನಿವೃತ್ತರಾಗಬೇಕಿದ್ದ ಮಿಶ್ರಾ ಅವರ ಅಧಿಕಾರಾವಧಿಯನ್ನು 2022ರ ನವೆಂಬರ್ 18ರವರೆಗೆ ವಿಸ್ತರಿಸಲಾಗಿತ್ತು. 2020ರ ನವೆಂಬರ್ 13ರಂದು ಮೊದಲ ಬಾರಿಗೆ ಇವರ ಅಧಿಕಾರಾವಧಿ ವಿಸ್ತರಿಸಲಾಗಿತ್ತು ಹಾಗೂ ಇದನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು. ಸಿವಿಸಿ ಕಾಯ್ದೆ ಅನ್ವಯ ಅಧಿಕಾರಾವಧಿ ಎರಡು ವರ್ಷಕ್ಕೆ ಸೀಮಿತವಲ್ಲ. ವಿಸ್ತರಣೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿತ್ತು.

ತನಿಖಾ ಏಜೆನ್ಸಿಗಳ ಮುಖ್ಯಸ್ಥರ ಹುದ್ದೆಗಳ ಅಧಿಕಾರಾವಧಿ ವಿಸ್ತರಿಸುವ ನಿಯಮಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಸರ್ಕಾರದ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುವ ಅಧಿಕಾರಿಗಳಿಗೆ ನೀಡುವ ಉಡುಗೊರೆ ಇದು ಎಂದು ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ವ್ಯಂಗ್ಯವಾಡಿವೆ. ಈ ಬಗ್ಗೆ ndtv.com ವರದಿ ಮಾಡಿದೆ. 

share
Next Story
X