Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ನ.21ರಿಂದ ಭತ್ತ ಖರೀದಿ ನೋಂದಣಿ...

​ನ.21ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಪ್ರಾರಂಭ: ಉಡುಪಿ ಡಿಸಿ ಕೂರ್ಮಾರಾವ್

18 Nov 2022 9:11 PM IST
share
​ನ.21ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಪ್ರಾರಂಭ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ, ನ.18: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ.ಗೆ 2040ರೂ. ಮತ್ತು ಗ್ರೇಡ್ ಎ ಭತ್ತಕ್ಕೆ 2060ರೂ. ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದರೊಂದಿಗೆ ಸ್ಥಳೀಯ ತಳಿಗಳ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಲು ಆದೇಶವಾಗಿದ್ದು, ಈ ಮೂಲಕ ರೈತನಿಂದ ಖರೀದಿಸುವ ಪ್ರತಿ ಕ್ವಿಂ. ಭತ್ತಕ್ಕೆ ಒಟ್ಟು 2540 ರೂ.ನಿಗದಿಯಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬೆಳೆಯಲಾಗುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ, ಅಭಿಲಾಷ ಮತ್ತು ಎಂಓ4 ಭತ್ತದ ತಳಿಗಳನ್ನು ಜಿಲ್ಲೆಯ ರೈತರಿಂದ ಖರೀದಿಸಿ, ಅದನ್ನು ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 16 ಕ್ವಿಂ.ನಂತೆ ಪ್ರತಿ ರೈತರಿಂದ ಗರಿಷ್ಠ 40ಕ್ವಿಂ. ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.  

ನ.21 ರಿಂದ ಒಂದು ತಿಂಗಳು ರೈತರ ನೋಂದಣಿ ಕಾರ್ಯವನ್ನು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕೃಷಿ ಮಾರುಕಟ್ಟೆ ಸಮಿತಿಯ ಎಪಿಎಂಸಿ ಯಾರ್ಡ್‌ಗಳಲ್ಲಿ, ಕಾಪು, ಬ್ರಹ್ಮಾವರ, ಕೋಟ, ಬೈಂದೂರು ಹಾಗೂ ಅಜೆಕಾರು ರೈತ ಸಂಪರ್ಕ ಕೇಂದ್ರಗಳಲ್ಲಿ, ಕುಂದಾಪುರ ತಾಲೂಕು ವಂಡ್ಸೆ ವಿಎಸ್‌ಎಸ್‌ಎನ್ ಹಾಗೂ ಹೆಬ್ರಿ ತಾಲೂಕು ಕಚೇರಿಯಲ್ಲಿ ಕೈಗೊಳ್ಳಲಾಗುವುದು. ಡಿಸೆಂಬರ್ 1ರಿಂದ 2023ರ ಫೆಬ್ರವರಿ 28ರವರೆಗೆ ಭತ್ತ ಖರೀದಿ ಕಾರ್ಯ ನಡೆಯಲಿದೆ.

ಜಿಲ್ಲೆಯ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರುಟ್ಸ್ ದತ್ತಾಂಶದಲ್ಲಿ ಸೇರ್ಪಡೆಗೊಂಡು ಮತ್ತು ಸೇರ್ಪಡೆ ಗೊಂಡಿರುವ ಬಗ್ಗೆ ಫ್ರುಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯೊಂದಿಗೆ, ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೋಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು.

ಕೃಷಿ ಇಲಾಖೆಯ ಗುಣಮಟ್ಟ ಪರೀಕ್ಷಕರು ಸರಕಾರ ನಿಗದಿಪಡಿಸಿರುವ ಮಾನದಂಡದಂತೆ ಎಫ್‌ಎಕ್ಯೂ ಗುಣಮಟ್ಟ ಹೊಂದಿರುವ ಭತ್ತವನ್ನು ಪರಿಶೀಲಿಸಿ, ಖರೀದಿಸಲು ಕ್ರಮ ಕೈಗೊಳ್ಳಲಿದ್ದಾರೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
Next Story
X