Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸುಪ್ರೀಂನ ಎಲ್ಲ ಪೀಠಗಳಿಂದ ಪ್ರತಿದಿನ 10...

"ಸುಪ್ರೀಂನ ಎಲ್ಲ ಪೀಠಗಳಿಂದ ಪ್ರತಿದಿನ 10 ವೈವಾಹಿಕ ವರ್ಗಾವಣೆ ಪ್ರಕರಣಗಳು, 10 ಜಾಮೀನು ಅರ್ಜಿಗಳ ವಿಚಾರಣೆ"

ಸಿಜೆಐ ಡಿ.ವೈ.ಚಂದ್ರಚೂಡ್

18 Nov 2022 9:20 PM IST
share
ಸುಪ್ರೀಂನ ಎಲ್ಲ ಪೀಠಗಳಿಂದ ಪ್ರತಿದಿನ 10 ವೈವಾಹಿಕ ವರ್ಗಾವಣೆ ಪ್ರಕರಣಗಳು, 10 ಜಾಮೀನು ಅರ್ಜಿಗಳ ವಿಚಾರಣೆ
ಸಿಜೆಐ ಡಿ.ವೈ.ಚಂದ್ರಚೂಡ್

ಹೊಸದಿಲ್ಲಿ, ನ.18: ಪ್ರಕರಣಗಳು ಬಾಕಿಯಾಗುವುದನ್ನು ಕಡಿಮೆಗೊಳಿಸುವ ಪ್ರಯತ್ನವಾಗಿ ಸುಪ್ರೀಂ ಕೋರ್ಟ್ನ ಎಲ್ಲ 13 ಪೀಠಗಳು ಪ್ರತಿ ದಿನ ತಲಾ 10 ವೈವಾಹಿಕ ವಿವಾದಗಳಿಗೆ ಸಂಬಂಧಿಸಿದ ವರ್ಗಾವಣೆ ಅರ್ಜಿಗಳು ಮತ್ತು ಅಷ್ಟೇ ಸಂಖ್ಯೆಯ ಜಾಮೀನು ಅರ್ಜಿಗಳ ವಿಚಾರಣೆ ನಡೆಸಲಿವೆ ಎಂದು ಭಾರತದ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಅವರು ಶುಕ್ರವಾರ ಪ್ರಕಟಿಸಿದರು.

ಸರ್ವೋಚ್ಚ ನ್ಯಾಯಾಲಯದ ಎಲ್ಲ ನ್ಯಾಯಾಧೀಶರ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಚಳಿಗಾಲದ ರಜೆಗೆ ಮುನ್ನ ಇಂತಹ ಎಲ್ಲ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು  ಎಂದು ಕಲಾಪಗಳ ಆರಂಭದಲ್ಲಿ ನ್ಯಾ.ಚಂದ್ರಚೂಡ್ ತಿಳಿಸಿದರು.

ಪ್ರಸಕ್ತ ಕಕ್ಷಿದಾರರು ತಮ್ಮ ಇಷ್ಟದ ಸ್ಥಳಗಳಿಗೆ ಪ್ರಕರಣಗಳ ವರ್ಗಾವಣೆಯನ್ನು ಬಯಸಿರುವ ವೈವಾಹಿಕ ವಿವಾದಗಳಿಗೆ ಸಂಬಂಧಿಸಿದ 3,000 ಅರ್ಜಿಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿಯಿವೆ ಎಂದು ತಿಳಿಸಿದ ನ್ಯಾ.ಚಂದ್ರಚೂಡ್ ನೇತೃತ್ವದ ಪೀಠವು,ಪ್ರತಿ ಪೀಠವು ಪ್ರತಿ ದಿನ 10 ವರ್ಗಾವಣೆ ಪ್ರಕರಣಗಳನ್ನು ಕೈಗೆತ್ತಿಕೊಂಡರೆ ಎಲ್ಲ 13 ಪೀಠಗಳು ದಿನಕ್ಕೆ 130 ಮತ್ತು ವಾರಕ್ಕೆ 650 ಪ್ರಕರಣಗಳನ್ನು ನಿರ್ಧರಿಸಲು ಸಾಧ್ಯವಾಗುತ್ತದೆ. ಹೀಗಾಗಿ ಚಳಿಗಾಲದ ರಜೆಗಳಿಗೆ ಮುನ್ನ ಐದು ವಾರಗಳ ಅಂತ್ಯದಲ್ಲಿ ಎಲ್ಲ ವರ್ಗಾವಣೆ ಅರ್ಜಿಗಳು ಇತ್ಯರ್ಥಗೊಳ್ಳುತ್ತವೆ ಎಂದು ಹೇಳಿತು.

ಪೀಠಗಳು ಪ್ರತಿ ದಿನ ಜಾಮೀನು ಮತ್ತು ವರ್ಗಾವಣೆಯ 20 ಅರ್ಜಿಗಳನ್ನು ನಿರ್ವಹಿಸಿದ ಬಳಿಕ ಇತರ ಪ್ರಕರಣಗಳನ್ನು ಕೈಗೆತ್ತಿಕೊಳ್ಳುತ್ತವೆ ಎಂದು ತಿಳಿಸಿದ ನ್ಯಾ.ಚಂದ್ರಚೂಡ್ ಅವರು,ತಡರಾತ್ರಿಯವರೆಗೂ ಪ್ರಕರಣಗಳ ಪರಿಶೀಲನೆಯ ಅನಿವಾರ್ಯತೆಯನ್ನು ಎದುರಿಸುತ್ತಿರುವ ನ್ಯಾಯಾಧೀಶರ ಮೇಲಿನ ಹೊರೆಯನ್ನು ತಗ್ಗಿಸಲು ಪೂರಕ ಪಟ್ಟಿಯಲ್ಲಿ ಕೊನೆಯ ಘಳಿಗೆಯಲ್ಲಿ ಸೇರಿಸಲಾಗುವ ಪ್ರಕರಣಗಳ ಸಂಖ್ಯೆಯನ್ನು ಕಡಿತಗೊಳಿಸಲು ತಾನು ನಿರ್ಧರಿಸಿದ್ದೇನೆ ಎಂದು ಹೇಳಿದರು.

share
Next Story
X