Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವ್ಲಾಖಾ ಗೃಹ ಬಂಧನ: ಎನ್ಐಎಗೆ ಸುಪ್ರೀಂ...

ನವ್ಲಾಖಾ ಗೃಹ ಬಂಧನ: ಎನ್ಐಎಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

18 Nov 2022 10:20 PM IST
share
ನವ್ಲಾಖಾ ಗೃಹ ಬಂಧನ: ಎನ್ಐಎಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ಹೊಸದಿಲ್ಲಿ, ನ.18: ಪ್ರಸ್ತುತ ತಲೋಜಾ ಜೈಲಿನಲ್ಲಿರುವ ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಹಾಗೂ ಸಾಮಾಜಿಕ ಕಾರ್ಯಕರ್ತ ಗೌತಮ ನವ್ಲಾಖಾ (70) ತನ್ನ ಆರೋಗ್ಯದ ಕುರಿತು ‘ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದರು’ ಎಂಬ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ವಾದವನ್ನು ಶುಕ್ರವಾರ ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯವು,24 ಗಂಟೆಗಳಲ್ಲಿ ಅವರು ಆಯ್ಕೆ ಮಾಡಿರುವ ಸ್ಥಳದಲ್ಲಿ ಗೃಹಬಂಧನಕ್ಕಾಗಿ ಅವರನ್ನು ಸ್ಥಳಾಂತರಿಸುವಂತೆ ಆದೇಶಿಸಿದೆ.

ಎನ್ಐಎ ಅನ್ನು ಕಟುವಾದ ಶಬ್ದಗಳಲ್ಲಿ ತರಾಟೆಗೆತ್ತಿಕೊಂಡ ನ್ಯಾಯಾಧೀಶರಾದ ಕೆ.ಎಂ.ಜೋಸೆಫ್ ಮತ್ತು ಹೃಷಿಕೇಶ ರಾಯ್ ಅವರ ಪೀಠವು ನವ್ಲಾಖಾರನ್ನು ಜೈಲಿನ ಬದಲು ಗೃಹಬಂಧನದಲ್ಲಿರಿಸುವಂತೆ 2022, ನ.10ರ ನ್ಯಾಯಾಲಯದ ಆದೇಶವನ್ನು ಹಿಂದೆಗೆದುಕೊಳ್ಳುವಂತೆ ಕೋರಿ ಅದು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತು.
ಗೃಹಬಂಧನಕ್ಕಾಗಿ ಈ ಮೊದಲು ವಿಧಿಸಲಾಗಿದ್ದ ಷರತ್ತುಗಳ ಜೊತೆಗೆ ನಿರ್ಗಮನ ದ್ವಾರದತ್ತ ತೆರಳುವ ಅಡಿಗೆ ಕೋಣೆಯ ಬಾಗಿಲುಗಳು ಮತ್ತು ಗ್ರಿಲ್ ಗೆ ಬೀಗಮುದ್ರೆ ಹಾಕಲು ನ್ಯಾಯಾಲಯವು ಎನ್ಐಎಗೆ ಅನುಮತಿ ನೀಡಿತು.

ಆದೇಶಕ್ಕೆ ಎನ್ಐಎ ವಿರೋಧ ಕುರಿತಂತೆ ನ್ಯಾ.ರಾಯ್ ಅವರು, ‘ನಾವು ಈ ದೃಷ್ಟಿಕೋನವನ್ನು ತಳೆಯುತ್ತಿದ್ದೇವೆ. 70ರ ಹರೆಯದ ಅನಾರೋಗ್ಯಪೀಡಿತ ವೃದ್ಧರ ಮೇಲೆ ಕಣ್ಣಿರಿಸಲು ನಿಮಗೆ ಸಾಧ್ಯವಿಲ್ಲ. 70 ಹರೆಯದ ವೃದ್ಧರನ್ನು ದಿಗ್ಬಂಧನದಲ್ಲಿರಿಸಲು ಸಾಧ್ಯವಿಲ್ಲವೆಂದು ಸಾಲಿಸಿಟರ್ ಜನರಲ್ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳುತ್ತಿದ್ದಾರೆ. ಸರಕಾರದ ಎಲ್ಲ ಬಲವನ್ನು ಹೊಂದಿಯೂ 70ರ ಹರೆಯದ ಅನಾರೋಗ್ಯಪೀಡಿತ ವ್ಯಕ್ತಿಯನ್ನು ಗೃಹಬಂಧನದಲ್ಲಿರಿಸಲು ನಿಮಗೆ ಸಾಧ್ಯವಾಗುತ್ತಿಲ್ಲ ’ ಎಂದು ಕಿಡಿಕಾರಿದರು.

ನವ್ಲಾಖಾ ತನ್ನ ಗೃಹಬಂಧನಕ್ಕಾಗಿ ಸಿಪಿಐ ಕಚೇರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ತಿಳಿಸಿದಾಗ, ಸಿಪಿಐ ಭಾರತದ ಮಾನ್ಯತೆ ಹೊಂದಿರುವ ರಾಜಕೀಯ ಪಕ್ಷವಾಗಿದೆ ಎಂದು ಬೆಟ್ಟು ಮಾಡಿದ ನ್ಯಾ.ಜೋಸೆಫ್,ಇದರಲ್ಲಿ ಸಮಸ್ಯೆಯೇನಿದೆ ಎಂದು ಪ್ರಶ್ನಿಸಿದರು. 

‘ಇದು ನಿಮಗೆ ಆಘಾತವನ್ನುಂಟು ಮಾಡದಿದ್ದರೆ ನಾನು ಹೇಳುವುದು ಏನಿದೆ ’ ಎಂದು ಮೆಹ್ತಾ ಉತ್ತರಿಸಿದರು. ಮಹಾರಾಷ್ಟ್ರದ ಭೀಮಾ-ಕೋರೆಗಾಂವ್ ಗ್ರಾಮದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನವ್ಲಾಖಾ ಎಪ್ರಿಲ್ 2020ರಿಂದಲೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

ಎನ್ಐಎ ಸೋಮವಾರದವರೆಗೆ ಕಾಲಾವಕಾಶ ಕೋರಿದಾಗ ಕ್ರುದ್ಧರಾದ ನ್ಯಾ.ಜೋಸೆಫ್, ‘ಪ್ರಕರಣವನ್ನು ವಿಳಂಬಿಸಲು ನಿಮ್ಮ ಪ್ರಯತ್ನಗಳು ನಮಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ? ಯಾವ ಉದ್ದೇಶಕ್ಕಾಗಿ ನಾವು ಸೋಮವಾರಕ್ಕೆ ಮುಂದೂಡಬೇಕು? 24 ಗಂಟೆಗಳಲ್ಲಿ ನವ್ಲಾಖಾರನ್ನು ಗೃಹಬಂಧನಕ್ಕೆ ಸ್ಥಳಾಂತರಿಸಬೇಕು,ನಾವು ಆದೇಶವನ್ನು ಹೊರಡಿಸುತ್ತಿದ್ದೇವೆ’ ಎಂದು ಹೇಳಿದರು.

share
Next Story
X