Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿಯೇ 6.69 ಲಕ್ಷ ಮತದಾರರ...

ಬೆಂಗಳೂರಿನಲ್ಲಿಯೇ 6.69 ಲಕ್ಷ ಮತದಾರರ ಹೆಸರು ರದ್ದು..!

18 Nov 2022 10:22 PM IST
share
ಬೆಂಗಳೂರಿನಲ್ಲಿಯೇ 6.69 ಲಕ್ಷ ಮತದಾರರ ಹೆಸರು ರದ್ದು..!

ಬೆಂಗಳೂರು (Bengaluru) , ನ.18: ಮತದಾರರ ಮಾಹಿತಿ ಕಳವು ಪ್ರಕರಣದ ರೂವಾರಿ ಎನ್ನಲಾದ ಚಿಲುವೆ ಸಂಸ್ಥೆಯ ಅಕ್ರಮ ಬಗೆದಷ್ಟು ಬಯಲಿಗೆ ಬರುತ್ತಿರುವ ನಡುವೆ ಬರೀ ಬೆಂಗಳೂರಿನಲ್ಲಿಯೇ 6.69 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.

ಈ ಹಿಂದೆ 243 ವಾರ್ಡ್‍ಗಳ ಚುನಾವಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ವೇಳೆ ಕೆಲವರು ಸಮೀಕ್ಷೆ ಹೆಸರಿನಲ್ಲಿ ಮನೆ ಮನೆಗೂ ತೆರಳಿ ಮಾಹಿತಿ ಕಲೆಹಾಕಿದ್ದು ಮಾತ್ರವಲ್ಲದೆ, ಒಟ್ಟು 6,69,652 ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಅದು ಅಲ್ಲದೆ, ಕ್ಷುಲ್ಲಕ ಕಾರಣಗಳನ್ನು ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಹಿಂದೆ ಚಿಲುಮೆ ಸಂಸ್ಥೆಯ ಕೈವಾಡ ಇದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಎಲ್ಲಿ ಎಷ್ಟು ಮತದಾರರು?: ಕೆಲ ಮಾಹಿತಿಗಳ ಪ್ರಕಾರ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ 21,968 ಮತದಾರರನ್ನು ಪಟ್ಟಿಯಿಂದ ಕೈಬಿಟ್ಟರೆ, ಕೆ.ಆರ್.ಪುರಂ ಕ್ಷೇತ್ರದಿಂದ 39,763, ಬ್ಯಾಟರಾಯನಪುರ 30,757 ಮತದಾರರ ಹೆಸರೇ ಇಲ್ಲದಂತೆ ಆಗಿದೆ.

ಅದೇ ರೀತಿ, ದಾಸರಹಳ್ಳಿ 35,086, ಯಶವಂತಪುರ 35,829, ಆರ್.ಆರ್.ನಗರ 33,009, ಮಹಾಲಕ್ಷ್ಮೀ ಲೇಔಟ್ 20,404, ಮಲ್ಲೇಶ್ವರಂ 11,788, ಹೆಬ್ಬಾಳ್ 20,039, ಪುಲಕೇಶಿನಗರ 22,196, ಸರ್ವಜ್ಞ ನಗರ 28,691, ಸಿವಿ ರಾಮನ್ ನಗರ 21,457, ಶಿವಾಜಿನಗರ 14,679, ಶಾಂತಿನಗರ 20,386, ಗಾಂಧಿನಗರ 16,465.

ಇದನ್ನೂ ಓದಿ: ಮತದಾರರ ಮಾಹಿತಿ ಕಳವು ಪ್ರಕರಣ: ಚಿಲುಮೆ ಸಂಸ್ಥೆ ಕಚೇರಿ ಮೇಲೆ ದಾಳಿ, ನಾಲ್ವರು ವಶಕ್ಕೆ

ರಾಜಾಜಿನಗರ 12,757, ಗೋವಿಂದರಾಜ್ ನಗರ 20,067, ವಿಜಯನಗರ 28,562, ಚಾಮರಾಜಪೇಟೆ 19,304, ಚಿಕ್ಕಪೇಟೆ 16,231, ಬಸವನಗುಡಿ 18,838, ಪದ್ಮನಾಭ ನಗರ 17,435, ಬಿಟಿಎಂಲೇಔಟ್ 16,141, ಜಯನಗರ 13,061, ಮಹಾದೇವಪುರ 33,376, ಬೊಮ್ಮನಹಳ್ಳಿ 31,157, ಬೆಂಗಳೂರು ಸೌತ್ 45,927, ಆನೇಕಲ್ 24,279 ಮತದಾರರ ಹೆಸರನ್ನು ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ.

► 6.69 ಲಕ್ಷ ಮತದಾರರ ಹೆಸರು ರದ್ದು: ಪರಿಶೀಲನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 6.69 ಲಕ್ಷ ಮತದಾರರ ಹೆಸರು ರದ್ದು ಮಾಡಿರುವ ಆರೋಪ ಪ್ರಕರಣ ಸಂಬಂಧ ಪರಿಶಳನೆ ನಡೆಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ವೈಯಕ್ತಿಕ ಮಾಹಿತಿ ಪಡೆದು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ  ಈಗಾಗಲೇ ಪೊಲೀಸ್ ಠಾಣೆಗಳಿಗೆ ನಾವು ದೂರು ನೀಡಿದ್ದೇವೆ. ಇನ್ನೂ, ನಗರ ಜಿಲ್ಲಾಧಿಕಾರಿ ನೀಡಿರುವ ವರದಿಯನ್ನು ಪೊಲೀಸರಿಗೆ ನಾವು ಸಲ್ಲಿಸಿದ್ದೇವೆ ಎಂದರು.

ಮತದಾರರ ನೊಂದಣಾಧಿಕಾರಿಗಳು ಸೇರಿ ಇತರ ಅಧಿಕಾರಿಗಳು ಸಂಸ್ಥೆ ಸಿಬ್ಬಂದಿಗೆ ಗುರುತು ಚೀಟಿ ನೀಡಿರವುದು ತನಿಖೆಯಲ್ಲಿ ಕಂಡುಬಂದರೆ ಮುಲಾಜಿಲ್ಲದೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಚೆನ್ನಾಗಿ ನಡೆಯಬೇಕೆಂಬ ಹಿನ್ನೆಲೆಯಲ್ಲಿ ಈ ಹಿಂದೆ ಚಿಲುಮೆ ಸಂಸ್ಥೆ ಮಾಡಿರುವ ಕೆಲಸ ಆಧಾರದ ಮೇಲೆ ಅನುಮತಿ ನೀಡಲಾಗಿದೆ. ಖಾಸಗಿ ಮತದಾರರ ಮಾಹಿತಿ ಸಂಗ್ರಹಿಸಿರುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಇದರ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಬಳಿಕ ಗೊತ್ತಾಗಿದೆ. ಅಲ್ಲದೆ,  ಒಂದು ವೇಳೆ ಖಾಸಗಿಯಾಗಿ ಮತದಾರರ ದತ್ತಾಂಶ ಸಂಗ್ರಹಿಸಿದ್ದಾರೆ ಅಥವಾ ಇಲ್ಲವೋ ಎಂಬುದರ ಬಗ್ಗೆ ಸಂಸ್ಥೆ ವಿರುದ್ಧ ತನಿಖೆ ನಡೆಸುವಂತೆ ಪ್ರಾದೇಶಿಕ ಆಯುಕ್ತರು ಈಗಾಗಲೇ ಆದೇಶಿಸಿದ್ದಾರೆ ಎಂದು ವಿವರಿಸಿದರು.

share
Next Story
X