Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವದಲ್ಲಿ ಸಾಮರಸ್ಯ, ದೇಶದ...

ವಿಶ್ವದಲ್ಲಿ ಸಾಮರಸ್ಯ, ದೇಶದ ಅಭಿವೃದ್ಧಿಗೆ ಕೊಡುಗೆಯನ್ನು ನೀಡಿ: ವಿದ್ಯಾರ್ಥಿಗಳಿಗೆ ಸಲಹೆಗಾರ ಡಾ.ಸತೀಶ್ ರೆಡ್ಡಿ ಕರೆ

19 Nov 2022 7:03 PM IST
share
ವಿಶ್ವದಲ್ಲಿ ಸಾಮರಸ್ಯ, ದೇಶದ ಅಭಿವೃದ್ಧಿಗೆ ಕೊಡುಗೆಯನ್ನು ನೀಡಿ: ವಿದ್ಯಾರ್ಥಿಗಳಿಗೆ ಸಲಹೆಗಾರ ಡಾ.ಸತೀಶ್ ರೆಡ್ಡಿ ಕರೆ

ಮಣಿಪಾಲ: ವಿಶ್ವದಲ್ಲಿ ಸಾಮರಸ್ಯ ಸ್ಥಾಪನೆ ಹಾಗೂ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡುವಂತೆ ದೇಶದ ಯುವ ಜನತೆಗೆ ಕೇಂದ್ರ ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರ ಡಾ.ಜಿ.ಸತೀಶ್ ರೆಡ್ಡಿ ಕರೆ ನೀಡಿದ್ದಾರೆ.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ)ನ 30ನೇ ಘಟಿಕೋತ್ಸವದ ಎರಡನೇ ದಿನದಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪದವಿ ಪಡೆದ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತಿದ್ದರು.

ಭವಿಷ್ಯದ ರಕ್ಷಣಾ ತಂತ್ರಜ್ಞಾನದ ಕುರಿತು ಮಾತನಾಡಿದ ಡಾ.ಸತೀಶ್ ರೆಡ್ಡಿ,  ಇನ್ನು ಮುಂದೆ ಇವುಗಳನ್ನು ಭಾರತದಲ್ಲೇ ರೂಪಿಸಿ, ವಿನ್ಯಾಸವನ್ನು ಅಂತಿಮಗೊಳಿಸಿ, ಅಭಿವೃದ್ಧಿ ಪಡಿಸಿ, ಪರೀಕ್ಷೆಗೊಳಪಡಿಸಿ ಎಲ್ಲವನ್ನೂ ಭಾರತದಲ್ಲೇ ತಯಾರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.

ಪ್ರಸ್ತುತ ಭಾರತದ ರಕ್ಷಣಾ ಸ್ಟಾರ್ಟ್‌ಅಪ್‌ನ ಸ್ಥಿತಿ-ಗತಿಯನ್ನು ವಿವರಿಸಿದ ಡಾ.ರೆಡ್ಡಿ, ಸರಕಾರದ ತಂತ್ರಜ್ಞಾನ ಅಭಿವೃದ್ಧಿ ನಿಧಿ (ಟಿಡಿಎಫ್), ‘ಡೇರ್ ಟು ಡ್ರೀಮ್’ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಇವುಗಳು ರಕ್ಷಣಾ ವಿಷಯಕ್ಕೆ ಸಂಬಂಧಿಸಿದಂತೆ ಯುವ ಪ್ರತಿಭೆಗಳನ್ನು ಒಳಗೊಳಿಸುವ ವಿವಿಧ ಕಾರ್ಯಕ್ರಮಗಳಾಗಿವೆ ಎಂದರು.

ಈ ನಿಟ್ಟಿನಲ್ಲಿ ದೇಶದ ವಿದ್ಯಾಸಂಸ್ಥೆಗಳು ಸಂಶೋಧನೆ ಹಾಗೂ ಉದ್ಯಮಶೀಲತೆಯತ್ತ  ವಿದ್ಯಾರ್ಥಿಗಳು ಹೆಚ್ಚೆಚ್ಚು ಆಕರ್ಷಿತರಾಗುವಂತೆ ಒತ್ತು ನೀಡಬೇಕು. ಸಂಶೋದನೆಗೆ ಆದ್ಯತೆ ನೀಡುವಂತೆ ಜ್ಞಾನದ ವಿನಿಮಯಕ್ಕೆ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.

ಹೊಸ ಆವಿಷ್ಕಾರಗಳು ಬದುಕಿನ ಎಲ್ಲಾ ರಂಗಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಹಾಗೂ ಕೈಗಾರಿಕೆ ೪:೦ಗಳು ತಂತ್ರಜ್ಞಾನದಲ್ಲಿ ಸ್ಥಾನ ಪಡೆಯುತ್ತಿವೆ. ಇವುಗಳನ್ನು ನಮ್ಮ ದೈನಂದಿನ ಬದುಕಿನ  ಉನ್ನತೀಕರಣಕ್ಕೆ ಮೆಟ್ಟಿಲಾಗಿಸಿಕೊಳ್ಳುವುದು ನಮ್ಮ ಗುರಿಯಾಗಿರಬೇಕು. ದೇಶವನ್ನು ಬಲಿಷ್ಠವಾಗಿ ರೂಪಿಸುವಲ್ಲಿ ನಮ್ಮ ಯುವಜನಾಂಗ ಖಂಡಿತ ಯಶಸ್ವಿಯಾಗುತ್ತದೆ ಎಂದು ತಮಗೆ ವಿಶ್ವಾಸವಿದೆ ಎಂದು ಡಾ.ಸತೀಶ್ ರೆಡ್ಡಿ ನುಡಿದರು.

ಕಾರ್ಯಕ್ರಮದಲ್ಲಿ ಮಾಹೆ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಮಾಹೆ ಟ್ರಸ್ಟ್‌ನ ಅಧ್ಯಕ್ಷ  ಡಾ.ರಂಜನ್ ಆರ್.ಪೈ, ಮಾಹೆ ಕುಲಪತಿ ಲೆ.ಜ. (ಡಾ) ಎಂ.ಡಿ.ವೆಂಕಟೇಶ್, ಪ್ರೊ ವೈಸ್ ಚಾನ್ಸಲರ್‌ಗಳಾದ ಡಾ.ವೆಂಕಟೇಶ್ ಪ್ರಭು, ಡಾ.ದಿಲೀಪ್ ಜಿ.ನಾಯಕ್, ಡಾ.ಪ್ರಜ್ಞಾ ರಾವ್, ರಿಜಿಸ್ಟ್ರಾರ್‌ಗಳಾದ ಡಾ. ನಾರಾಯಣ ಸಭಾಹಿತ್, ಡಾ.ವಿನೋದ್ ವಿ.ಥಾಮಸ್ ಉಪಸ್ಥಿತರಿದ್ದರು.

ಚಿನ್ನದ ಪದಕ ವಿಜೇತರು: ಘಟಿಕೋತ್ಸವದ ಎರಡನೇ ದಿನದಂದು ಡಾ.ಟಿ.ಎಂ.ಎ.ಪೈ ಸ್ಮಾರಕ ಚಿನ್ನದ ಪದಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು. ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವೆಟ್ಸಾ ವೈಷ್ಣವಿ,  ಪಿಸಿಪಿಎಸ್‌ನ ಜೆನಿಲ್ಡಾ ಜಾಸ್ಮಿನ್ ಮೆಥಾಯಸ್, ಮಣಿಪಾಲ ಸ್ಕೂಲ್ ಆಫ್ ಆರ್ಕಿಟೆಕ್ಟ್‌ನ ಅರ್ಚನಾ ಶಿವಪ್ರಕಾಶ್, ಪ್ರಸನ್ನ ಸ್ಕೂಲ್ ಆಫ್‌ಪಬ್ಲಿಕ್ ಹೆಲ್ತ್‌ನ  ಜೊಸ್ಸಿಲ್ ಜೋತ್ಸ್ನಾ ಜೋಸೆಫ್ ನಜ್ರತ್ ಹಾಗೂ ಮಣಿಪಾಲ ಡೆಂಟಲ್ ಸಾಯನ್ಸ್‌ನ ರೂಪ್ಸಾ ತಾರಪ್ದಾರ್.

share
Next Story
X