Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. RBI ಅನುಮತಿ ಪಡೆಯದೆ ಚುನಾವಣಾ ಬಾಂಡ್...

RBI ಅನುಮತಿ ಪಡೆಯದೆ ಚುನಾವಣಾ ಬಾಂಡ್ ಯೋಜನೆಗೆ ತಿದ್ದುಪಡಿ, ಚು.ಆಯೋಗಕ್ಕೆ ಮಾತ್ರ ಮಾಹಿತಿ

ಆರ್ಟಿಐ ಅರ್ಜಿಯಿಂದ ಬಹಿರಂಗ

20 Nov 2022 5:06 PM IST
share
RBI ಅನುಮತಿ ಪಡೆಯದೆ ಚುನಾವಣಾ ಬಾಂಡ್ ಯೋಜನೆಗೆ ತಿದ್ದುಪಡಿ, ಚು.ಆಯೋಗಕ್ಕೆ ಮಾತ್ರ ಮಾಹಿತಿ
ಆರ್ಟಿಐ ಅರ್ಜಿಯಿಂದ ಬಹಿರಂಗ

ಹೊಸದಿಲ್ಲಿ,ನ.20: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಬಾಂಡ್ ಗಳ  ಮಾರಾಟಕ್ಕೆ ಹೆಚ್ಚುವರಿ ಅವಕಾಶವನ್ನು ಒದಗಿಸಿರುವ ಚುನಾವಣಾ ಬಾಂಡ್ ಯೋಜನೆಗೆ ತಿದ್ದುಪಡಿಯ ಕುರಿತು ಕೇಂದ್ರ ಸರಕಾರವು ಆರ್ಬಿಐ (RBI) ಜೊತೆ ಸಮಾಲೋಚಿಸಿಯೇ ಇರಲಿಲ್ಲ ಮತ್ತು ಚುನಾವಣಾ ಆಯೋಗಕ್ಕೆ ಮಾತ್ರ ಮಾಹಿತಿಯನ್ನು ನೀಡಿತ್ತು ಎಂಬ ಆಘಾತಕಾರಿ ಅಂಶವನ್ನು ಆರ್ಟಿಐ (RTI) ಅರ್ಜಿಗೆ ಲಭಿಸಿರುವ ಉತ್ತರವು ಬಹಿರಂಗಗೊಳಿಸಿದೆ.

ಆರ್ಬಿಐ (RBI) ಕಾಯ್ದೆ,1934ರ ಕಲಂ 31ರಡಿ ತನಗೆ ಪ್ರಾಪ್ತ ಅಧಿಕಾರವನ್ನು ಬಳಸಿಕೊಂಡು ಮೂಲ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರಕಾರವು ಅಧಿಸೂಚಿಸಿತ್ತು ಎಂಬ ವಾಸ್ತವದ ಹೊರತಾಗಿಯೂ ಈ ಬೆಳವಣಿಗೆ ನಡೆದಿದೆ.

ವಿತ್ತ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಗಳ ವರ್ಷದಲ್ಲಿ ಚುನಾವಣಾ ಬಾಂಡ್ಗಳ ಮಾರಾಟಕ್ಕೆ 15 ದಿನಗಳ ಹೆಚ್ಚುವರಿ ಅವಧಿಯನ್ನು ಒದಗಿಸಲು ಯೋಜನೆಯ ತಿದ್ದುಪಡಿಗಾಗಿ ನ.7ರಂದು ಅಧಿಸೂಚನೆಯನ್ನು ಹೊರಡಿಸಿತ್ತು.

ಸಾಮಾನ್ಯವಾಗಿ ಚುನಾವಣಾ ಬಾಂಡ್ ಗಳನ್ನು ಜನವರಿ,ಎಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ತಲಾ ಹತ್ತು ದಿನಗಳ ಅವಧಿಗೆ ಮಾರಾಟ ಮಾಡಲಾಗುತ್ತದೆ. ಮೂಲ ಯೋಜನೆಯು ಲೋಕಸಭಾ ಚುನಾವಣೆಗಳು ನಡೆಯುವ ವರ್ಷದಲ್ಲಿ ಸರಕಾರವು ನಿರ್ದಿಷ್ಟ ಪಡಿಸಿರುವಂತೆ 30 ದಿನಗಳ ಹೆಚ್ಚುವರಿ ಅವಧಿಯನ್ನು ಒದಗಿಸಿತ್ತು.

ಈಗಿನ ತಿದ್ದುಪಡಿಗಳು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆಗಳು ನಡೆಯುವ ವರ್ಷಗಳಲ್ಲಿ ಬಾಂಡ್ಗಳ ಮಾರಾಟಕ್ಕೆ ಹೆಚ್ಚುವರಿಯಾಗಿ 15 ದಿನಗಳನ್ನು ಒದಗಿಸಿವೆ.

ನ.7ರ ಅಧಿಸೂಚನೆಯ ಹಿನ್ನೆಲೆಯಲ್ಲಿ ಆರ್ಟಿಐ ಕಾರ್ಯಕರ್ತ ಕಮೊಡೋರ್(ನಿ) ಲೋಕೇಶ ಕೆ.ಬಾತ್ರಾ ಅವರು ನ.9ರಂದು ಆರ್ಟಿಐ ಅರ್ಜಿಯನ್ನು ಸಲ್ಲಿಸಿದ್ದರು. ‘ಚುನಾವಣಾ ಬಾಂಡ್ ತಿದ್ದುಪಡಿ ಯೋಜನೆ 2022 ’ ಮತ್ತು ಅಧಿಸೂಚನೆಗೆ ಸಂಬಂಧಿಸಿದ ವಿತ್ತ ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಕಡತಗಳ ವಿಷಯ,ಹೆಸರು ಮತ್ತು ಉಲ್ಲೇಖ ಸಂಖ್ಯೆಗಳನ್ನು ಬಾತ್ರಾ ತನ್ನ ಅರ್ಜಿಯಲ್ಲಿ ಕೋರಿದ್ದರು.

ಉತ್ತರದಲ್ಲಿ ಬಾತ್ರಾ ಅವರಿಗೆ ಲಭ್ಯವಾಗಿರುವ ದಾಖಲೆಗಳು ಸರಕಾರವು ಚುನಾವಣಾ ಬಾಂಡ್ ಯೋಜನೆಗೆ ತಿದ್ದುಪಡಿ ಕುರಿತು ಆರ್ಬಿಐ ಜೊತೆಗೆ ಸಮಾಲೋಚಿಸಿದಂತಿಲ್ಲ ಮತ್ತು ಬೆಳವಣಿಗೆಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾತ್ರ ಮಾಹಿತಿ ನೀಡಿತ್ತು ಎನ್ನುವುದನ್ನು ಬಹಿರಂಗಗೊಳಿಸಿವೆ.

ಚುನಾವಣಾ ಬಾಂಡ್ ಯೋಜನೆಯ ಅಧಿಸೂಚನೆಯನ್ನು ಆರ್ಬಿಐ ಕಾಯ್ದೆಯ ನಿಬಂಧನೆಗಳನ್ನು ಉಲ್ಲೇಖಿಸಿ ಹೊರಡಿಸಲಾಗಿತ್ತಾದರೆ,ಅಧಿಸೂಚನೆಗೆ ತಿದ್ದುಪಡಿಯನ್ನು ಮಾಡುವಾಗ ಆರ್ಬಿಐ ಅನ್ನು ಪ್ರಕ್ರಿಯೆಯಿಂದ ಹೊರಗಿಡಲಾಗಿತ್ತು ಎನ್ನುವುದನ್ನು ಲಭ್ಯ ದಾಖಲೆಗಳು ಸ್ಪಷ್ಟ ಪಡಿಸಿವೆ ಎಂದು ಬಾತ್ರಾ ತಿಳಿಸಿದರು.
 
2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಕೇಂದ್ರ ಸರಕಾರವು ಚುನಾವಣಾ ಬಾಂಡ್ಗಳ ಮಾರಾಟಕ್ಕಾಗಿ ದಿನಗಳ ಸಂಖ್ಯೆಯನ್ನು ನಿರಂಕುಶವಾಗಿ ಹೆಚ್ಚಿಸಿದ್ದಾಗ ಅನುಮತಿಸಲಾದ ಅವಧಿಯನ್ನು ಮೀರಿ ಬಾಂಡ್ಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ತಾಕೀತು ಮಾಡಿತ್ತು ಎನ್ನುವುದನ್ನೂ ದಾಖಲೆಗಳು ತೋರಿಸಿವೆ.
ತಿದ್ದುಪಡಿ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿಯನ್ನಷ್ಟೇ ನೀಡಲಾಗಿತ್ತು,ಆದರೆ ಅದರ ಒಪ್ಪಿಗೆಯನ್ನೆಂದಿಗೂ ಪಡೆದುಕೊಂಡಿರಲಿಲ್ಲ ಎನ್ನುವುದನ್ನೂ ದಾಖಲೆಗಳು ಬೆಟ್ಟು ಮಾಡಿವೆ.‌

ಕೃಪೆ: Thewire.in

share
Next Story
X