Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿವಾಜಿ ಕುರಿತು ವಿವಾದದ ನಡುವೆ ಏಕನಾಥ...

ಶಿವಾಜಿ ಕುರಿತು ವಿವಾದದ ನಡುವೆ ಏಕನಾಥ ಶಿಂಧೆ ‘ಸ್ವಾಭಿಮಾನ ’ವನ್ನು ಕೆಣಕಿದ ಸಂಜಯ್ ರಾವುತ್

20 Nov 2022 9:49 PM IST
share
ಶಿವಾಜಿ ಕುರಿತು ವಿವಾದದ ನಡುವೆ ಏಕನಾಥ ಶಿಂಧೆ ‘ಸ್ವಾಭಿಮಾನ ’ವನ್ನು ಕೆಣಕಿದ ಸಂಜಯ್  ರಾವುತ್

ಮುಂಬೈ,ನ.20: ಛತ್ರಪತಿ ಶಿವಾಜಿ ಮಹಾರಾಜರ ಕುರಿತು ‘ಹಳೆಯ ಐಕಾನ್ (ಆದರ್ಶ)’ ಎಂಬ ಹೇಳಿಕೆಗಾಗಿ ಮಹಾರಾಷ್ಟ್ರದ ರಾಜ್ಯಪಾಲ ಭಗತಸಿಂಗ್ ಕೋಶ್ಯಾರಿ ಅವರನ್ನು ವಜಾಗೊಳಿಸುವಂತೆ ಶಿವಸೇನೆ (ಉದ್ಧವ ಠಾಕ್ರೆ ಬಣ) ನಾಯಕ ಸಂಜಯ ರಾವುತ್ ರವಿವಾರ ಆಗ್ರಹಿಸಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆಯವರ ರಾಜೀನಾಮೆಗೂ ಅವರು ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ರಾವುತ್,ಉದ್ಧವ ಠಾಕ್ರೆ ವಿರುದ್ಧ ಬಂಡೇಳುವಾಗ ಶಿಂದೆ ಉಲ್ಲೇಖಿಸಿದ್ದ ‘ಸ್ವಾಭಿಮಾನ’ ಅವರಲ್ಲಿದೆಯೇ ಎಂದು ಕೆಣಕಿದರು.

ಕೋಶ್ಯಾರಿ ಅವರು ಶನಿವಾರ ಶಿವಾಜಿ ಮಹಾರಾಜರನ್ನು ‘ಹಳೆಯ ಐಕಾನ್ ’ಎಂದು ಬಣ್ಣಿಸುವ ಮೂಲಕ ವಿವಾದವನ್ನು ಸೃಷ್ಟಿಸಿದ್ದರು.

ಈ ವಿಷಯದಲ್ಲಿ ಮೌನವಾಗಿರುವುದಕ್ಕಾಗಿ ಮಹಾರಾಷ್ಟ್ರ ಸರಕಾರವನ್ನು ತರಾಟೆಗೆತ್ತಿಕೊಂಡ ರಾವುತ್,ರಾಜ್ಯಪಾಲರು ಒಂದೇ ವರ್ಷದಲ್ಲಿ ನಾಲ್ಕು ಸಲ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ. ಆದರೂ ಸರಕಾರವು ವೌನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಶಿವಾಜಿ ಮಹಾರಾಜರನ್ನು ಆದರ್ಶ ಪುರುಷ ಎಂದು ಪರಿಗಣಿಸಿದ್ದಾರೆ ಮತ್ತು ಅವರ ಅಧಿಕೃತ ವಕ್ತಾರರು ಶಿವಾಜಿ ಮಹಾರಾಜರು ಐದು ಸಲ ಔರಂಗಜೇಬ್‌ನ ಕ್ಷಮೆಯನ್ನು ಯಾಚಿಸಿದ್ದರು ಎಂದು ಹೇಳಿದ್ದಾರೆ. ಇದು ಬಿಜೆಪಿಯ ಅಧಿಕೃತ ನಿಲುವೇ? ಬಿಜೆಪಿಯು ಮಹಾರಾಷ್ಟ್ರದ ಕ್ಷಮೆಯನ್ನು ಯಾಚಿಸಬೇಕು ಮತ್ತು ತಕ್ಷಣ ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಹೇಳಿದರು.

ಬಿಜೆಪಿಯು ಶಿವಾಜಿ ಮಹಾರಾಜರನ್ನು ಬಹಿರಂಗವಾಗಿ ಅವಮಾನಿಸಿದೆ ಎಂದು ಆರೋಪಿಸಿದ ಅವರು,ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವಂತೆ ಶಿಂದೆಯವರನ್ನು ಆಗ್ರಹಿಸಿದರು.

ಸ್ವಾಭಿಮಾನದ ಘೋಷಣೆಯನ್ನು ನೀಡಿದ್ದ,ಶಿವಸೇನೆಯನ್ನು ಒಡೆದು ಬಿಜೆಪಿಯೊಂದಿಗೆ ಸರಕಾರವನ್ನು ರಚಿಸಿದ ಮುಖ್ಯಮಂತ್ರಿಗಳ ಸ್ವಾಭಿಮಾನ ಈಗ ಎಲ್ಲಿ ಹೋಗಿದೆ? ಅವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳಿಗೆ ಶಿವಾಜಿ ಮಹಾರಾಜರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಅವರನ್ನು ಅವಮಾನಿಸಿರುವ ಬಿಜೆಪಿಯೊಂದಿಗೆ ಸರಕಾರದಲ್ಲೇಕೆ ಇದ್ದಾರೆ ಎಂದು ರಾವುತ್ ಪ್ರಶ್ನಿಸಿದರು.

ಶನಿವಾರ ಬಿಜೆಪಿಯನ್ನು ಟೀಕಿಸಿದ್ದ ರಾವುತ್,ಅದು ಸಾವರ್ಕರ್ ಕುರಿತು ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಪ್ರತಿಭಟಿಸುತ್ತಿದೆ. ಈಗ ಅದು ಶಿವಾಜಿ ಮಹಾರಾಜರ ವಿರುದ್ಧ ಹೇಳಿಕೆ ಹೊರಬಿದ್ದ ರಾಜಭವನದ ವಿರುದ್ಧ ಪ್ರತಿಭಟಿಸಬೇಕು ಎಂದು ಹೇಳಿದ್ದರು.

ಶನಿವಾರ ಔರಂಗಾಬಾದ್‌ನ ಡಾ.ಬಾಬಾಸಾಹೇಬ ಅಂಬೇಡ್ಕರ್ ಮರಾಠವಾಡಾ ವಿವಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೋಶ್ಯಾರಿ,ಶಿವಾಜಿ ಮಹಾರಾಜರು ಹಳೆಯ ಐಕಾನ್ ಆಗಿದ್ದಾರೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್‌ರಿಂದ ಹಿಡಿದು ನಿತಿನ್ ಗಡ್ಕರಿವರೆಗೆ ಹಲವರಲ್ಲಿ ‘ಹೊಸ ಐಕಾನ್ ’ಗಳನ್ನು ಕಾಣಬಹುದು ಎಂದು ಹೇಳಿದ್ದರು.

ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿರುವ ಉದ್ಧವ ಠಾಕ್ರೆ ಬಣದ ವಕ್ತಾರ ಆನಂದ ದುಬೆ,‘ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ಆರಾಧ್ಯ ದೈವ ಮಾತ್ರವಲ್ಲ,ಅವರು ನಮ್ಮ ಸ್ಫೂರ್ತಿಯ ಮೂಲವೂ ಆಗಿದ್ದಾರೆ. ಅವರು ಯಾವಾಗಲೂ ನಮ್ಮೆಲ್ಲರಿಗೆ ಆದರ್ಶವಾಗಿರುತ್ತಾರೆ. ರಾಜ್ಯಪಾಲರ ಹೇಳಿಕೆಗಳ ಪ್ರಕಾರ ಶ್ರೀರಾಮ ಮತ್ತು ಶ್ರೀಕೃಷ್ಣ ಕೂಡ ಈಗ ‘ಹಳೆಯ ಐಕಾನ್ ’ ಗಳಾಗಿದ್ದಾರೆ. ನಾವು ಪೂಜಿಸಲು ಹೊಸ ದೇವರುಗಳನ್ನು ಹುಡುಕಬೇಕೇ ಎಂದು ಪ್ರಶ್ನಿಸಿದ್ದಾರೆ.

share
Next Story
X