ಲಿಂಗನಮಕ್ಕಿ: ಸೋದರತ್ತೆಯ ಸಾವಿನ ಸುದ್ದಿ ಕೇಳಿ ಅಳಿಯ ಹೃದಯಾಘಾತದಿಂದ ಮೃತ್ಯು
ಸಾಗರ, ನ.21: ಸೋದರತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ತಾಲೂಕಿನ ಲಿಂಗನಮಕ್ಕಿಯಲ್ಲಿ ರವಿವಾರ ನಡೆದಿದೆ.
ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ.
ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ.
ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ ಗುಲ್ಫತ್ ಸಿಂಗ್ ಅವರಿಗೆ ತಿಳಿಸಿದ್ದಾರೆ. ಲಿಂಗನಮಕ್ಕಿಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದ ಗುಲ್ಫತ್ ಸಿಂಗ್ ಈ ವಿಚಾರ ತಿಳಿಯುತ್ತಿದ್ದಂತೆ ಕುಸಿದು ಬಿದ್ದರೆನ್ನಲಾಗಿದೆ. ಹೃದಯಾಘಾತಕ್ಕೊಳಗಾದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
Next Story