Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾಕ್ ನ ಕುರ್ದಿಷ್ ನೆಲೆಯ ವಿರುದ್ಧ...

ಇರಾಕ್ ನ ಕುರ್ದಿಷ್ ನೆಲೆಯ ವಿರುದ್ಧ ಇರಾನ್ ವಾಯುದಾಳಿ

21 Nov 2022 10:19 PM IST
share
ಇರಾಕ್ ನ  ಕುರ್ದಿಷ್ ನೆಲೆಯ ವಿರುದ್ಧ ಇರಾನ್ ವಾಯುದಾಳಿ

ಟೆಹ್ರಾನ್, ನ.21: ನೆರೆಯ ಇರಾಕ್(Iraq)  ನಲ್ಲಿರುವ ಕುರ್ದಿಸ್ತಾನ ಮೂಲದ ಕುರ್ದಿಷ್ (Kurdish)ವಿರೋಧ ಗುಂಪುಗಳ ವಿರುದ್ಧ ಇರಾನ್ ರವಿವಾರ ಹೊಸದಾಗಿ ವಾಯುದಾಳಿ ಆರಂಭಿಸಿದೆ ಎಂದು ವರದಿಯಾಗಿದೆ.

ಇರಾನ್ ನ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ (Revolutionary Guard Corprs)ಪಡೆ ಮತ್ತೊಮ್ಮೆ ಕುರ್ದಿಷ್ ಗುಂಪಿನ ಮೇಲೆ ಬಾಂಬ್ ನ ಸುರಿಮಳೆಗರೆದಿದ್ದಾರೆ ಎಂದು ಇರಾಕಿ ಕುರ್ದಿಸ್ತಾನದ ಭಯೋತ್ಪಾದನೆ ನಿಗ್ರಹ ಘಟಕ ಹೇಳಿದೆ. ಇರಾಕಿ ಕುರ್ದಿಸ್ತಾನದ ರಾಜಧಾನಿ ಅರ್ಬಿಲ್ ಬಳಿಯ ಕೋಯಾ (Koya)ಮತ್ತು ಜೆಜ್ನಿಕಾನ್ ನಗರ(City of Jezhnikon)ವನ್ನು ಗುರಿಯಾಗಿಸಿ ಇರಾನ್ ಕ್ಷಿಪಣಿ ಹಾಗೂ ಆತ್ಮಹತ್ಯಾ ಡ್ರೋನ್ ದಾಳಿ ನಡೆಸಿದೆ. 

ಇರಾನಿ ಕುರ್ದಿಸ್ತಾನದಲ್ಲಿ ಈಗ ನಡೆಯುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸಲು ಇರಾನ್ನ ಭಯೋತ್ಪಾದಕ ಆಡಳಿತ ವಿಫಲಗೊಂಡ ಸಂದರ್ಭದಲ್ಲೇ ಈ ವಿವೇಚನಾರಹಿತ ದಾಳಿ ನಡೆದಿದೆ  ಎಂದು ಡೆಮೊಕ್ರಟಿಕ್ ಪಾರ್ಟಿ ಆಫ್ ಇರಾನಿಯನ್ ಕುರ್ದಿಸ್ತಾನ್(ಪಿಡಿಕೆಐ)ನ ಹೇಳಿಕೆ ತಿಳಿಸಿದೆ.

ಉತ್ತರ ಇರಾಕ್ ನಲ್ಲಿರುವ ನಮ್ಮ ಪ್ರಧಾನ ಕಚೇರಿಯ ಮೇಲೆ ಮತ್ತೊಮ್ಮೆ ಇಸ್ಲಾಮಿಕ್ ಆಡಳಿತ ದಾಳಿ ನಡೆಸಿದೆ. ಯಾವುದೇ ನಷ್ಟ ಅಥವಾ ಹಾನಿಯ ಬಗ್ಗೆ ತಕ್ಷಣಕ್ಕೆ ಮಾಹಿತಿಯಿಲ್ಲ. ಈ ರೀತಿಯ ದಾಳಿಗೆ ನಾವು ಎಚ್ಚರಿಕೆಯಿಂದ ಸನ್ನದ್ಧರಾಗುತ್ತಿದ್ದೇವೆ ಎಂದು ಇರಾನಿಯನ್ ಕುರ್ದಿಶ್ ರಾಷ್ಟ್ರೀಯತಾವಾದಿ ಗುಂಪು `ಕೊಮಾಲ' (``young'')ಟ್ವೀಟ್ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಮಿಲಿಟರಿ ಕಾರ್ಯಾಚರಣೆಯ ಉಸ್ತುವಾರಿ ವಹಿಸಿರುವ ಅಮೆರಿಕದ ಸೆಂಟ್ರಲ್ ಕಮಾಂಡ್ ಇರಾನ್ನ ದಾಳಿಯನ್ನು ಖಂಡಿಸಿದೆ.

 ಗಡಿದಾಟಿ ಇರಾನ್ ನಡೆಸಿರುವ ಕ್ಷಿಪಣಿ ಹಾಗೂ ಡ್ರೋನ್ ದಾಳಿಯನ್ನು ಖಂಡಿಸುತ್ತೇವೆ. ಇಂತಹ ಕಾನೂನುಬಾಹಿರ ಮತ್ತು ವಿವೇಚನಾ ರಹಿತ ದಾಳಿಗಳು ನಾಗರಿಕರಿಗೆ ಹೆಚ್ಚಿನ ಅಪಾಯ ತರುತ್ತದೆ ಮತ್ತು ಇರಾಕ್ನ ಸಾರ್ವಭೌಮತ್ವದ ಉಲ್ಲಂಘನೆಯಾಗಿದೆ. 

ಜತೆಗೆ, ಇರಾಕ್ ಹಾಗೂ ಮಧ್ಯಪ್ರಾಚ್ಯದಲ್ಲಿ ಕಷ್ಟಪಟ್ಟು ಸಾಧಿಸಿದ ಭದ್ರತೆ ಮತ್ತು ಸ್ಥಿರತೆಯನ್ನು ಗಂಡಾಂತರಕ್ಕೆ ಸಿಲುಕಿಸುತ್ತದೆ ಎಂದು ಅಮೆರಿಕದ ಕಮಾಂಡರ್ ಮೈಕಲ್ ಕುರಿಲ್ಲಾ ಹೇಳಿದ್ದಾರೆ. ಇರಾಕಿ ಕುರ್ದಿಸ್ತಾನದಲ್ಲಿರುವ ಇರಾನ್ನ ಮೂರು ವಿರೋಧ ಪಕ್ಷಗಳನ್ನು ಗುರಿಯಾಗಿಸಿ ಇರಾನ್ ವಾಯುದಾಳಿ ನಡೆಸಿದೆ ಎಂದು ಇರಾಕ್ನ ಸರಕಾರಿ ಸ್ವಾಮ್ಯದ ಸುದ್ಧಿಸಂಸ್ಥೆ ಐಎನ್ಎ ವರದಿ ಮಾಡಿದೆ.

share
Next Story
X