Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರೆಸೇನಾಪಡೆ ಯೋಧರ ಕಡೆಗಣನೆ: ಡಿ.13ರಂದು...

ಅರೆಸೇನಾಪಡೆ ಯೋಧರ ಕಡೆಗಣನೆ: ಡಿ.13ರಂದು ಬೆಂಗಳೂರು ಚಲೋ ಹೋರಾಟ ನಡೆಸಲು ನಿರ್ಧಾರ

22 Nov 2022 4:04 PM IST
share
ಅರೆಸೇನಾಪಡೆ ಯೋಧರ ಕಡೆಗಣನೆ: ಡಿ.13ರಂದು ಬೆಂಗಳೂರು ಚಲೋ ಹೋರಾಟ ನಡೆಸಲು ನಿರ್ಧಾರ

ಮಡಿಕೇರಿ,ನ.22: ಕೇಂದ್ರ ಮತ್ತು ರಾಜ್ಯ ಸರಕಾರ ಅರೆಸೇನಾಪಡೆ ಯೋಧರು ಹಾಗೂ ಮಾಜಿ ಯೋಧರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟ, ಡಿ.13ರಂದು ಬೆಂಗಳೂರು ಚಲೋ ಹೋರಾಟದ ಮೂಲಕ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ನಿರ್ಧರಿಸಿರುವುದಾಗಿ ತಿಳಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖರು ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು.

ಡಿ.13ರಂದು ಸಂಸತ್ ಭವನದ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸುವ ಮೂಲಕ ಸಂಸದರು ಹಾಗೂ ರಾಜಕೀಯ ಮುಖಂಡರುಗಳನ್ನು ಸಿಆರ್‌ಪಿಎಫ್ ಯೋಧರು ರಕ್ಷಿಸಿದ್ದರು. ಅಲ್ಲದೆ ಅನೇಕ ಯೋಧರು ಸಾಹಸ ಮೆರೆದು ಹುತಾತ್ಮರಾಗಿದ್ದಾರೆ. ಇದನ್ನು ಸರ್ಕಾರಕ್ಕೆ ನೆನಪು ಮಾಡಿಕೊಡುವ ಉದ್ದೇಶದಿಂದ ಡಿ.13ರಂದೇ ಧರಣಿ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ತಿಳಿಸಿದರು.

ಸೇನಾಪಡೆಯ ಮಾಜಿ ಯೋಧರ ಬೇಡಿಕೆಗಳ ಬಗ್ಗೆ ಜಿಲ್ಲಾಡಳಿತ, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಮನವಿಗಳನ್ನು ಕಡೆಗಣಿಸಲಾಗಿದೆ. ಸಂಘದ ಕಚೇರಿ ಮತ್ತು ಕ್ಯಾಂಟೀನ್ ವ್ಯವಸ್ಥೆಗಾಗಿ ಕರ್ಣಂಗೇರಿ ಗ್ರಾಮದ ಸ. ನಂ.10/2ರ 0.20 ಏಕರೆ ಜಾಗವು ಕಳೆದ 10 ವರ್ಷಗಳಿಂದ ಸಂಘದ ಸ್ವಾಧೀನದಲ್ಲಿದೆ. ಎರಡು ಬಾರಿ ಸರ್ವೆ ಮಾಡಿ ವಿಂಗಡಿಸಲಾಗಿದ್ದರೂ ಮಂಜೂರು ಮಾಡದೆ ನಿರ್ಲಕ್ಷ ವಹಿಸಲಾಗಿದೆ. ನಮ್ಮ ನೆರೆ ಜಿಲ್ಲೆ ಹಾಸದಲ್ಲಿ ಕೇವಲ 150 ಸದಸ್ಯರ ಅರೆಸೇನಾಪಡೆ ಮಾಜಿ ಯೋಧರ ಸಂಘಕ್ಕೆ ಅಲ್ಲಿನ ಜಿಲ್ಲಾಡಳಿತ, ಜನ ಪ್ರತಿನಿಧಿಗಳು ಗೌರವ ನೀಡಿ ಜಾಗ ಮಂಜೂರು ಮಾಡಿ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಯೋಧರನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

 ಕೊಡಗು ಅತಿಹೆಚ್ಚು ಅರೆಸೇನಾಪಡೆ ಮಾಜಿ ಯೋಧರು ಹಾಗೂ ಮಹಿಳಾ ಯೋಧರನ್ನು ಹೊಂದಿದ್ದರೂ ಕ್ಯಾಂಟೀನ್ ಮತ್ತು ಆಸ್ಪತ್ರೆಯ ಸೌಲಭ್ಯವನ್ನು ಒದಗಿಸಿಲ್ಲ. ವಸತಿ, ನಿವೇಶನ ಮತ್ತು ಜಮೀನು ಮಂಜೂರಾತಿಗಾಗಿ ಅನೇಕ ಮಾಜಿ ಯೋಧರು ಅರ್ಜಿ ಸಲ್ಲಿಸಿದ್ದರೂ ಇಲ್ಲಿಯವರೆಗೆ ಸ್ಪಂದನೆ ದೊರೆತ್ತಿಲ್ಲ. ಪ್ರತಿವರ್ಷ ಪೊಲೀಸ್ ಹುತಾತ್ಮರ ದಿನ ಆಚರಿಸುತ್ತಿದ್ದು, ಅರೆಸೇನಾಪಡೆ ಮಾಜಿ ಯೋಧರನ್ನು ಕಡೆಗಣಿಸಿ ಸಂಬಂಧಪಡದವರನ್ನು ಆಹ್ವಾನಿಸಿ ಆಚರಣೆ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಸಿಆರ್‌ಪಿಎಫ್ ಯೋಧರ ಬಲಿದಾನವನ್ನು ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿರುವ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಎಂದರು.

ಮಹಾಸಭೆ: ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟದ 10ನೇ ವಾರ್ಷಿಕ ಮಹಾಸಭೆ ನ.25ರಂದು ಮಡಿಕೇರಿಯ ಪೊಲೀಸ್ ‘‘ಮೈತ್ರಿ’’ ಸಮುದಾಯ ಭವನದ ಸಂಭಾಂಗಣದಲ್ಲಿ ನಡೆಯಲಿದೆ. ಅರೆ ಸೇನಾಪಡೆಯ ಮಾಜಿ ಯೋಧರು, ಸೇವಾನಿರತ ಕುಟುಂಬದ ಅವಲಂಬಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಮುಖರು ಮನವಿ ಮಾಡಿದರು.

ಸಂಘದ ಸದಸ್ಯತ್ವವನ್ನು ಪಡೆಯದೆ ಇರುವ ಅರೆಸೇನಾಪಡೆಯ ಮಾಜಿ ಯೋಧರು ಸದಸ್ಯತ್ವವನ್ನು ಪಡೆದುಕೊಂಡು ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದು ಇದೇ ಸಂದರ್ಭ ತಿಳಿಸಿದರು.

ಕೂಟದ ಜಿಲ್ಲಾ ಕಾರ್ಯದರ್ಶಿ ನೂರೇರ ಎಂ.ಭೀಮಯ್ಯ, ನಿರ್ದೇಶಕ ಎ.ಟಿ.ಉತ್ತಯ್ಯ, ಸಲಹೆಗಾರ ಕೆ.ಎಸ್.ಆನಂದ ಹಾಗೂ ಮಡಿಕೇರಿ ತಾಲ್ಲೂಕು ಘಟಕದ ಕಾರ್ಯದರ್ಶಿ ಸಿ.ಜಿ.ಸಿದ್ದಾರ್ಥ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 

share
Next Story
X