Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರತೀ 11 ನಿಮಿಷಗಳಿಗೊಮ್ಮೆ ನಿಕಟ...

ಪ್ರತೀ 11 ನಿಮಿಷಗಳಿಗೊಮ್ಮೆ ನಿಕಟ ಸಂಗಾತಿಯಿಂದ ಮಹಿಳೆ ಹತ್ಯೆಗೊಳಗಾಗುತ್ತಾಳೆ: ವಿಶ್ವಸಂಸ್ಥೆ ಕಳವಳ

22 Nov 2022 9:38 PM IST
share
ಪ್ರತೀ 11 ನಿಮಿಷಗಳಿಗೊಮ್ಮೆ ನಿಕಟ ಸಂಗಾತಿಯಿಂದ ಮಹಿಳೆ ಹತ್ಯೆಗೊಳಗಾಗುತ್ತಾಳೆ: ವಿಶ್ವಸಂಸ್ಥೆ ಕಳವಳ

ವಿಶ್ವಸಂಸ್ಥೆ, ನ.22: ನಿಕಟ ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ  ಪ್ರತೀ 11 ನಿಮಿಷಗಳಿಗೊಮ್ಮೆ ಮಹಿಳೆ ಅಥವಾ ಹುಡುಗಿ ಕೊಲ್ಲಲ್ಪಡುತ್ತಾರೆ ಎಂದು ಪ್ರತಿಪಾದಿಸಿರುವ ವಿಶ್ವಸಂಸ್ಥೆ ಮುಖ್ಯಸ್ಥ ಅಂತೋನಿಯೊ ಗುಟೆರಸ್(Antonio Guterres), ಮಹಿಳೆಯರ ವಿರುದ್ಧದ ಹಿಂಸಾಚಾರವು ವಿಶ್ವದ ಅತ್ಯಂತ ವ್ಯಾಪಕವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ಈ ಪಿಡುಗನ್ನು ನಿಭಾಯಿಸುವ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಸರಕಾರಗಳಿಗೆ ಕರೆ ನೀಡಿದ್ದಾರೆ. ನವೆಂಬರ್ 25ರಂದು ಆಚರಿಸಲಾಗುವ `ಮಹಿಳೆಯರ ವಿರುದ್ಧ ಹಿಂಸಾಚಾರ ನಿರ್ಮೂಲನೆಗಾಗಿ'(``For the Elimination of Violence Against Women'') ಅಂತರಾಷ್ಟ್ರೀಯ ದಿನದ ಹಿನ್ನೆಲೆಯಲ್ಲಿ ಗುಟೆರಸ್ ಈ ಹೇಳಿಕೆ ನೀಡಿದ್ದಾರೆ.

`ಮಹಿಳೆಯರು ಮತ್ತು ಹುಡುಗಿಯರ ವಿರುದ್ಧದ ಹಿಂಸೆಯು ಜಗತ್ತಿನಲ್ಲಿ ಅತ್ಯಂತ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೋವಿಡ್ ಸಾಂಕ್ರಾಮಿಕದಿಂದ ಆರ್ಥಿಕ  ಪ್ರಕ್ಷುಬ್ಧತೆಯವರೆಗೆ ಇತರ ಹಲವು ಒತ್ತಡಗಳು ಅನಿವಾರ್ಯವಾಗಿ ಇನ್ನಷ್ಟು ದೈಹಿಕ ಮತ್ತು ಮಾನಸಿಕ ನಿಂದನೆಗೆ ಕಾರಣವಾಗುತ್ತದೆ. ಜತೆಗೆ, ಸ್ತ್ರೀದ್ವೇಷದ ದ್ವೇಷ ಭಾಷಣ, ಲೈಂಗಿಕ ಕಿರುಕುಳ, ವ್ಯಕ್ತಿತ್ವವನ್ನು ನಿಂದಿಸುವುದು ಇತ್ಯಾದಿ ಅತಿರೇಕದ ಆನ್ಲೈನ್ ಹಿಂಸಾಚಾರವನ್ನು ಮಹಿಳೆಯರು ಮತ್ತು ಹುಡುಗಿಯರು ಎದುರಿಸುತ್ತಾರೆ. ಮನುಕುಲದ ಅರ್ಧದಷ್ಟನ್ನು ಗುರಿಯಾಗಿಸಿಕೊಂಡ ಈ ತಾರತಮ್ಯ, ಹಿಂಸೆ ಮತ್ತು ನಿಂದನೆ ಅತ್ಯಧಿಕ ಮಟ್ಟಕ್ಕೇರಿದೆ. ಇದು ಜೀವನದ ಎಲ್ಲಾ ಹಂತಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಭಾಗವಹಿಸುವಿಕೆಯನ್ನು ಮಿತಿಗೊಳಿಸುತ್ತದೆ, ಅವರ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯವನ್ನು ನಿರಾಕರಿಸುತ್ತದೆ ಮತ್ತು ನಮ್ಮ ಜಗತ್ತಿಗೆ ಅಗತ್ಯವಿರುವ ಸಮಾನ ಆರ್ಥಿಕ ಚೇತರಿಕೆ ಮತ್ತು ಸುಸ್ಥಿರ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ' ಎಂದು ಗುಟೆರಸ್ ಕಳವಳ ವ್ಯಕ್ತಪಡಿಸಿದ್ದಾರೆ.

ಮಹಿಳೆಯರು ಮತ್ತು ಬಾಲಕಿಯರ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸುವ  ಪರಿವರ್ತನಾ ಕ್ರಮದ ಸಮಯ ಇದೀಗ ಬಂದಿದೆ. ಸರಕಾರಗಳು ಈ ಪಿಡುಗನ್ನು ನಿಭಾಯಿಸಲು ರಾಷ್ಟ್ರೀಯ ಕ್ರಿಯಾಯೋಜನೆಯನ್ನು ರೂಪಿಸಿ, ಅದಕ್ಕೆ ಅನುದಾನ ಒದಗಿಸಿ ಅನುಷ್ಟಾನಗೊಳಿಸಬೇಕಾಗಿದೆ. ನಿರ್ಧಾರ ತೆಗೆದುಕೊಳ್ಳುವ ಪ್ರತೀ ಹಂತದ ಪ್ರಕ್ರಿಯೆಯೂ  ತಳ-ಮೂಲ ಮತ್ತು ನಾಗರಿಕ ಸಮಾಜದ ಗುಂಪುಗಳನ್ನು ಒಳಗೊಂಡಿರಬೇಕು ಮತ್ತು ಎಲ್ಲಾ ಕಾನೂನುಗಳೂ ಜಾರಿಯಾಗಿವೆ ಹಾಗೂ ಅವನ್ನು ಪಾಲಿಸಲಾಗುತ್ತದೆ ಎಂದು ಖಾತರಿ ಪಡಿಸಬೇಕು.

ಮಹಿಳೆಯರ ಹಕ್ಕುಗಳಿಗಾಗಿ ಹೋರಾಡುವ ಸಂಸ್ಥೆಗಳಿಗೆ ಹಾಗೂ ಚಳವಳಿಗಳಿಗೆ 2026ರ ಒಳಗೆ ಅನುದಾನವನ್ನು 50%ದಷ್ಟು ಹೆಚ್ಚಿಸಬೇಕು ಎಂದು ಕರೆ ನೀಡಿದ ಅವರು, ಮಹಿಳೆಯರ ಹಕ್ಕುಗಳ ಪರವಾಗಿ ನಿಲ್ಲಲು ಮತ್ತು ಧ್ವನಿಯೆತ್ತಲು, ನಾವೆಲ್ಲಾ ಸ್ತ್ರೀವಾದಿಗಳು ಎಂದು ಘೋಷಿಸಬೇಕೆಂದು ಆಗ್ರಹಿಸಿದರು.

ಈ ವರ್ಷದ ಅಂತರಾಷ್ಟ್ರೀಯ ದಿನದ ವಿಷಯ ` ಒಗ್ಗೂಡಿ: ಮಹಿಳೆಯರು ಮತ್ತು ಹುಡುಗಿಯರ ಮೇಲಿನ  ದೌರ್ಜನ್ಯವನ್ನು ಕೊನೆಗೊಳಿಸಲು ಕ್ರಿಯಾಶೀಲರಾಗಿರಿ' ಎಂದಾಗಿದ್ದು ಇದರರ್ಥ ಬದಲಾವಣೆಗೆ ಕರೆ ನೀಡುವ ಮತ್ತು ಹಿಂಸೆಯಿಂದ ಬದುಕುಳಿದವರನ್ನು ಬೆಂಬಲಿಸುವ ವಿಶ್ವದಾದ್ಯಂತದ ಕಾರ್ಯಕರ್ತರ ಜತೆ ಕೈಜೋಡಿಸುವುದಾಗಿದೆ ಎಂದು ಗುಟೆರಸ್ ಹೇಳಿದ್ದಾರೆ.

ಮಹಿಳೆಯರ ವಿರುದ್ಧದ ಲಿಂಗ ಆಧರಿತ ಹಿಂಸೆಯು ಜಾಗತಿಕ ಲಿಂಗ ಸಮಾನತೆಯನ್ನು ಸಾಧಿಸುವಲ್ಲಿ ಬಹುದೊಡ್ಡ ತೊಡಕಾಗಲಿದೆ ಎಂದು  ಸೆಪ್ಟಂಬರ್ ನಲ್ಲಿ ವಿಶ್ವಸಂಸ್ಥೆಯ ಮಹಿಳೆ ಮತ್ತು ಆರ್ಥಿಕ, ಸಾಮಾಜಿಕ ವ್ಯವಹಾರಗಳ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. 15-49 ವಯಸ್ಸಿನ ಪ್ರತೀ 10 ಮಹಿಳೆಯರು ಮತ್ತು ಹುಡುಗಿಯರಲ್ಲಿ ಒಬ್ಬರು ಹಿಂದಿನ  ವರ್ಷದಲ್ಲಿ ನಿಕಟ ಸಂಗಾತಿಗಳಿಂದ ಲೈಂಗಿಕ ಅಥವಾ ದೈಹಿಕ ಹಿಂಸೆಗೆ ಒಳಗಾಗಿದ್ದಾರೆ ಎಂದು ಲಿಂಗ ಅಂತರ ಸೂಚ್ಯಂಕ 2022ರಲ್ಲಿ ಉಲ್ಲೇಖಿಸಲಾಗಿದೆ.  

share
Next Story
X