Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಕಸದ ರಾಶಿಯಲ್ಲಿ ನೂರಾರು...

ಚಿಕ್ಕಮಗಳೂರು: ಕಸದ ರಾಶಿಯಲ್ಲಿ ನೂರಾರು ಪಡಿತರ ಚೀಟಿ ಪತ್ತೆ!

ಇಲಾಖಾಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

22 Nov 2022 10:25 PM IST
share
ಚಿಕ್ಕಮಗಳೂರು: ಕಸದ ರಾಶಿಯಲ್ಲಿ ನೂರಾರು ಪಡಿತರ ಚೀಟಿ ಪತ್ತೆ!
ಇಲಾಖಾಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

ಚಿಕ್ಕಮಗಳೂರು (Chikkamagaluru), ನ.22: ಪಡಿತರ ಚೀಟಿ ಪಡೆದುಕೊಳ್ಳಲು ಸಾರ್ವಜನಿಕರು ಇನ್ನಿಲ್ಲದ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಡಿತರ ಚೀಟಿಗಳಿಗಾಗಿ ಜನರು ಇಂದಿಗೂ ಕಚೇರಿಗಳಿಗೆ ವರ್ಷಪೂರ್ತಿ ಅಲೆದಾಡಬೇಕಾದ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಪಕ್ಕದ ಕಸದ ರಾಶಿಯಲ್ಲಿ ಸರಕಾರದಿಂದ ಫಲಾನುಭವಿಗಳಿಗೆ ನೀಡಿದ್ದ ನೂರಾರು ಪಡಿತರ ಚೀಟಿಗಳನ್ನು ಎಸೆಯುವ ಮೂಲಕ ಸಂಬಂಧಿಸಿದ ಇಲಾಖೆ ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯವಹಿಸಿದ್ದಾರೆಂದು ಆರೋಪಿಸಲಾಗಿದೆ. 

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಇಲಾಖೆ ಕಚೇರಿ ಪಕ್ಕದಲ್ಲಿ ಕಡೂರು ತಾಲೂಕಿನ ವಿವಿಧ ಗ್ರಾಮಗಳ ಫಲಾನುಭವಿಗಳ ಹೆಸರಿರುವ ಎಪಿಎಲ್, ಬಿಪಿಎಲ್ ಕಾರ್ಡುಗಳನ್ನು ಕಸದ ರಾಶಿಯಲ್ಲಿ ಎಸೆಯಲಾಗಿದೆ. ಕಸದ ರಾಶಿಯಲ್ಲಿ ಪತ್ತೆಯಾಗಿರುವ ಪಡಿತರ ಚೀಟಿಗಳಲ್ಲಿ ಕಡೂರು ತಾಲೂಕಿನ ಫಲಾನುಭವಿಗಳು ಮತ್ತು ಕುಟುಂಬಸ್ಥರ ಹೆಸರು, ನ್ಯಾಯ ಬೆಲೆ ಅಂಗಡಿಗಳ ಹೆಸರು, ವಿವಿಧ ಗ್ರಾಮಗಳ ಹೆಸರಿದ್ದು, ನೂರಕ್ಕೂ ಹೆಚ್ಚು ಪಡಿತರ ಚೀಟಿಗಳು ಪತ್ತೆಯಾಗಿವೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು, ಸಿಬ್ಬಂದಿ ನಕಲಿ ಪಡಿತರ ಚೀಟಿಗಳನ್ನು ಸೃಷ್ಟಿಸುವ ದಂಧೆಯಲ್ಲಿ ತೊಡಗಿರುವ ಬಗ್ಗೆಯೂ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದು, ಕಸದ ರಾಶಿಯಲ್ಲಿ ಪಡಿತರ ಚೀಟಿಗಳನ್ನು ಎಸೆದಿರುವುದು ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿಗೆ ಸಾಕ್ಷಿ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ. ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಿದವರಿಗೆ ಹಂಚಿಕೆ ಮಾಡಲು ಸರಕಾರದ ವತಿಯಿಂದ ನೀಡಿರುವ ಪಡಿತರ ಚೀಟಿಗಳಲ್ಲಿ ದೋಷ ಕಂಡು ಬಂದಿದ್ದರಿಂದ ಅವುಗಳನ್ನು ಎಸೆಯಲಾಗಿದೆ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು ಇದು ನಕಲಿ ಪಡಿತರ ಚೀಟಿಗಳಾಗಿವೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಗತ್ಯವಿಲ್ಲದ ಸರಕಾರಿ ದಾಖಲೆಗಳನ್ನು ಎಲ್ಲೆಂದರಲ್ಲಿ ಎಸೆಯುವಂತಿಲ್ಲ. ಅಗತ್ಯವಿಲ್ಲದ ದಾಖಲಾತಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು. ಆದರೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಮಹತ್ವದ ದಾಖಲಾತಿಯನ್ನು ಹೀಗೆ ಕಸದ ರಾಶಿಯಲ್ಲಿ ಎಸೆಯುವ ಮೂಲಕ ಲೋಪ ಎಸಗಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿ ಕಸದ ರಾಶಿಯಲ್ಲಿ ಎಸೆಯಲಾಗಿರುವ ಪಡಿತರ ಚೀಟಿಗಳು ಅಸಲಿಯೋ, ನಕಲಿಯೋ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು. ದಾಖಲೆಗಳನ್ನು ಕಸದ ರಾಶಿಗೆ ಎಸೆದವರ ಮೇಲೆ ಶಿಸ್ತುಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿರುವ ಸಾರ್ವಜನಿಕರು, ಪಡಿತರ ಚೀಟಿಗಳು ನೈಜ ಫಲಾನುಭವಿಗಳಿಗೆ ಸೇರಿದ್ದಾಗಿದ್ದರೇ ಅವುಗಳನ್ನು ಸಂಬಂಧಿಸಿದವರಿಗೆ ಹಂಚಿಕೆ ಮಾಡಲು ಕ್ರಮವಹಿಸಬೇಕು, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಕಲಿ ಪಡಿತರ ಚೀಟಿ ಸೃಷ್ಟಿಸುತ್ತಿರುವ ಬಗ್ಗೆ ಶಂಕೆ ಇದ್ದು, ಇದಕ್ಕೆ ಜಿಲ್ಲಾಡಳಿತವೇ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

share
Next Story
X