Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಿರ್ಲಕ್ಷ ಧೋರಣೆಗೆ ಮುಂದೆ ಬೆಲೆ...

ನಿರ್ಲಕ್ಷ ಧೋರಣೆಗೆ ಮುಂದೆ ಬೆಲೆ ತೆರಬೇಕಾದೀತು

-ಆರ್.ಬಿ.ಜಿ. ಘಂಟಿ ಅಮೀನಗಡ, ಬಾಗಲಕೋಟೆ-ಆರ್.ಬಿ.ಜಿ. ಘಂಟಿ ಅಮೀನಗಡ, ಬಾಗಲಕೋಟೆ22 Nov 2022 11:53 PM IST
share

ಮಾನ್ಯರೇ,
ಜಾಗತಿಕವಾಗಿ ಹವಾಮಾನ ಬದಲಾವಣೆಗೆ ಕಾರಣವಾಗಿರುವ ವಿಷ ಸೂಸುವ ಅನಿಲಗಳ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ನೀಡಿದ ಎಚ್ಚರಿಕೆಯ ಸಂದೇಶವು ಎಲ್ಲ ದೇಶಗಳ ಬದ್ಧತೆಯನ್ನು ವಿಮರ್ಶಿಸಲು ಅನುವು ಮಾಡಿಕೊಟ್ಟಿದೆ ಎಂದರೆ ತಪ್ಪಾಗದು. ಇಂದು ಜಾಗತಿಕವಾಗಿ ಎಲ್ಲ ದೇಶಗಳು ಇದರ ಕುರಿತು ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದ್ದು, ಅತಿ ಹೆಚ್ಚು ಇಂಗಾಲ ಹೊರ ಸೂಸುವಿಕೆಯಲ್ಲಿ ವಿಶ್ವದ ಜಿ-20 ದೇಶಗಳ ಪಾಲು ಶೇ. 75ರಷ್ಟಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.
ಪರಿಸರ ಮಾಲಿನ್ಯ ತಡೆಯಲು ಶ್ರೀಮಂತ ದೇಶಗಳು ಪರಿಣಾಮಕಾರಿಯಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರದೆ, ನಿರ್ಲಕ್ಷ ಧೋರಣೆ ಅನುಸರಿಸುತ್ತಿರುವುದು ಜಾಗತಿಕವಾಗಿ ದುಷ್ಪರಿಣಾಮ ಬೀರಲು ಕಾರಣವಾಗಿದೆ. ಇದರ ಕುರಿತು ಪರಿಸರಕ್ಕೆ ಸಂಬಂಧಿಸಿದ ‘ಎಮಿಷನ್ ಗ್ಯಾಪ್ ರಿಪೋರ್ಟ್’ನ ಸಮೀಕ್ಷಾ ವರದಿಯಲ್ಲಿ ಗಂಭೀರವಾಗಿ ಉಲ್ಲೇಖಿಸಲಾಗಿದ್ದು, ಇದೇ ಧೋರಣೆ ಮುಂದುವರಿದಲ್ಲಿ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ನಿಯಂತ್ರಿಸುವುದು ಕಠಿಣ ಸವಾಲಾಗುತ್ತದಲ್ಲದೆ, ಇನ್ನು ಕೆಲವೇ ದಶಕಗಳಲ್ಲಿ 2.8 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನದಲ್ಲಿ ಏರಿಕೆ ಕಾಣಲಿದೆ.
ಹೀಗೆ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ 2030 ರ ಹೊತ್ತಿಗೆ ಜಾಗತಿಕ ವಾತಾವರಣದಲ್ಲಿ ಇಂಗಾಲ ಹಾಗೂ ಇನ್ನಿತರ ವಿಷ ಅನಿಲಗಳ ಪ್ರಮಾಣ 5,800 ಕೋಟಿ ಟನ್‌ಗೆ ಏರಿಕೆಯಾಗಲಿದೆ ಎಂದು ಈ ವರದಿಯ ಸಮೀಕ್ಷೆಯು ಅಂದಾಜಿಸಿದ್ದು ಇದು ಅತ್ಯಂತ ಆತಂಕಕಾರಿ, ಕಳವಳಕಾರಿ ಸಂಗತಿಯಾಗಿದೆ.
ಕಳೆದ ವರ್ಷ ಗ್ಲಾಸ್ಕೊದಲ್ಲಿ ನಡೆದಿದ್ದ 26ನೇ ವಿಶ್ವಸಂಸ್ಥೆ ಹವಾಮಾನ ಬದಲಾವಣೆ ಸಮಾವೇಶದಲ್ಲಿ ಜಾಗತಿಕ ಹವಾಮಾನ, ತಾಪಮಾನ ಏರಿಕೆ ತಗ್ಗಿಸುವ ವಿಷಯವೇ ಮಹತ್ವ ಪಡೆದಿತ್ತು. ಇದರ ಕುರಿತು ಸುದೀರ್ಘವಾಗಿ ಸಾಕಷ್ಟು ಚರ್ಚೆ, ಚಿಂತನೆಗಳು ನಡೆದಿದ್ದವು. ಈ ಸಮಾವೇಶದಲ್ಲಿ ಪಾಲ್ಗೊಂಡ ದೇಶಗಳು ಪರಿಸರಕ್ಕೆ ವಿಷಕಾರಿಯಾಗಿರುವ ಇಂಗಾಲ, ಇನ್ನಿತರ ಅನಿಲಗಳ ಪ್ರಮಾಣವನ್ನು 50 ಕೋಟಿ ಟನ್‌ನಷ್ಟು ಕಡಿತ ಮಾಡಲು ಭರವಸೆ ನೀಡಿದ್ದವು. ಆದರೆ ಈ ಭರವಸೆಗಳಂತೆ ಈ ದೇಶಗಳು ನಡೆದುಕೊಳ್ಳದಿರುವುದು, ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಇರುವುದನ್ನು ನೋಡಿದರೆ ಜಗತ್ತಿನ ಭವಿಷ್ಯದ ದಿನಗಳ ಬಗ್ಗೆ ಆತಂಕವಾಗುತ್ತಿದೆ. ಇನ್ನಾದರೂ ಶ್ರೀಮಂತ ದೇಶಗಳು ಸೇರಿ ಎಲ್ಲ ದೇಶಗಳು ವಿಶ್ವಸಂಸ್ಥೆಯ ಸಂದೇಶವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
 

share
-ಆರ್.ಬಿ.ಜಿ. ಘಂಟಿ ಅಮೀನಗಡ, ಬಾಗಲಕೋಟೆ
-ಆರ್.ಬಿ.ಜಿ. ಘಂಟಿ ಅಮೀನಗಡ, ಬಾಗಲಕೋಟೆ
Next Story
X