Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ನಾಯಕಿ ಸೋನಾಲಿ ಪೊಗಾಟ್...

ಬಿಜೆಪಿ ನಾಯಕಿ ಸೋನಾಲಿ ಪೊಗಾಟ್ ಹತ್ಯೆಯಾಗಿದ್ದು ಏಕೆ ಗೊತ್ತೇ ?

23 Nov 2022 8:32 AM IST
share
ಬಿಜೆಪಿ ನಾಯಕಿ ಸೋನಾಲಿ ಪೊಗಾಟ್ ಹತ್ಯೆಯಾಗಿದ್ದು ಏಕೆ ಗೊತ್ತೇ ?

ಹೊಸದಿಲ್ಲಿ: ಮಾಜಿ ನಟಿ ಹಾಗೂ ಹರ್ಯಾಣದ ಬಿಜೆಪಿ ನಾಯಕಿ ಸೋನಾಲಿ ಪೊಗಾಟ್, ಗೋವಾದ ಹೋಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದ ಪ್ರಕರಣವನ್ನು ಕೊನೆಗೂ ಸಿಬಿಐ ಭೇದಿಸಿದೆ.

ಸೋನಾಲಿಯವರ ಆಪ್ತ ಸಹಾಯಕ ಹಾಗೂ ಅತನ ಸ್ನೇಹಿತರು, ಪೊಗಾಟ್ ಅವರ ಆಸ್ತಿ ಕಬಳಿಸುವ ಸಲುವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ವಿವರಿಸಿದೆ. ಪೊಗಾಟ್ ಅವರ ಆಪ್ತಸಹಾಯಕ ಸುಧೀರ್ ಸಂಘವಾನ್ ಮತ್ತು ಸ್ನೇಹಿತರಾದ ಸುಖವೀಂದರ್‌ ನನ್ನು ಈ ಪ್ರಕರಣ ಸಂಬಂಧ ಬಂಧಿಸಲಾಗಿತ್ತು ಎಂದು timesofindia.com ವರದಿ ಮಾಡಿದೆ.

ಆರೋಪಿಗಳ ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನ್ 302 (ಹತ್ಯೆ), ಸೆಕ್ಷನ್ 34 (ಸಮಾನ ಉದ್ದೇಶ) ಮತ್ತು ಸೆಕ್ಷನ್ 36 ಅನ್ವಯ ಆರೋಪ ಹೊರಿಸಲಾಗಿದೆ. ಗೋವಾದ ಮಪೂಸಾ ಜ್ಯುಡೀಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ ಈ ಸಂಬಂಧ 1000 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿದೆ. ಪೊಗಾಟ್ ಅವರ ಸಾವಿಗಿಂತ ಕೆಲ ಗಂಟೆಗಳ ಮೊದಲು ಕೂಡಾ ಎಂಡಿಎಂಎ ಡ್ರಗ್ಸ್ ಸೇವಿಸಲು ಆರೋಪಿಗಳು ಬಲವಂತಪಡಿಸಿದ್ದರು ಎಂದು ವಿವರಿಸಲಾಗಿದೆ.

ಸಾಕ್ಷಿಗಳ ಹೇಳಿಕೆಗಳ ಜತೆಗೆ, ಸಿಬಿಐ ದೆಹಲಿ ತಂಡದ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಯನ್ನೂ ಸಲ್ಲಿಸಿದ್ದಾರೆ. ಅಂಜುನಾ ಬೀಚ್ ಪ್ರದೇಶದ ಜನಪ್ರಿಯ ಶಕ್ ಕರ್ಲೀಸ್ ಬೀಚ್‍ನಲ್ಲಿ ಸಂಘವಾನ್, ಪೊಗಾಟ್ ಅವರ ಗಂಟಲಿಗೆ ಮದ್ಯ ಸುರಿಯುತ್ತಿರುವ ದೃಶ್ಯ ದಾಖಲಾಗಿದೆ. ಈ ಮದ್ಯಪಾನದ ಬಳಿಕ ಅಸ್ವಸ್ಥಗೊಂಡ ನಾಯಕಿ, ಸ್ವಂತವಾಗಿ ನಡೆದುಕೊಂಡು ಹೋಗಲೂ ಶಕ್ತರಿರಲಿಲ್ಲ ಎನ್ನುವುದು ದೃಶ್ಯಾವಳಿಯಲ್ಲಿ ಕಂಡುಬರುತ್ತದೆ.

ಮದ್ಯದಲ್ಲಿ ಎಂಡಿಎಂಎ ಡ್ರಗ್ಸ್ ಸೇರಿಸಿ ಪೊಗಾಟ್‍ಗೆ ನೀಡಲಾಗಿದ್ದು, ಇದರಿಂದಾಗಿ ಅವರು ಎರಡು ಗಂಟೆ ಕಾಲ ಕ್ಲಬ್ ಶೌಚಾಲಯದಲ್ಲೇ ಇರಬೇಕಾಯಿತು. ಅಲ್ಲಿ ನಿರಂತರವಾಗಿ ವಾಂತಿ ಮಾಡಿಕೊಳ್ಳಲಾರಂಭಿಸಿದರು. ಮುಂಜಾನೆ 4.30ರ ಸುಮಾರಿಗೆ ಕ್ಲಬ್‍ನಿಂದ ಆಕೆಯನ್ನು ಕರೆತರುತ್ತಿರುವುದು ಕಂಡುಬಂದಿದೆ.

ಅಲ್ಲಿಂದ ಪೊಗಾಟ್ ಅವರನ್ನು ಗ್ರಾಂಡ್ ಲಿನೋಯ್ ರೆಸಾರ್ಟ್‍ಗೆ ಹಾಗೂ ಬಳಿಕ ಸಂತ ಅಂತೋನಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಗೆ ಸಾಗಿಸುವಾಗಲೇ ಅವರು ಮೃತಪಟ್ಟಿದ್ದರು ಎಂದು ಅರೋಪಪಟ್ಟಿಯಲ್ಲಿ ವಿವರಿಸಲಾಗಿದೆ. ಡಿಸೆಂಬರ್ 5ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ ಎಂದು timesofindia.com ವರದಿ ಮಾಡಿದೆ.

share
Next Story
X