Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇದುವರೆಗೂ ಒಂದು ಪೋನ್ ಮಾಡಿ ಏನಾಯ್ತು ಅಂತ...

ಇದುವರೆಗೂ ಒಂದು ಪೋನ್ ಮಾಡಿ ಏನಾಯ್ತು ಅಂತ ಕೇಳಿಲ್ಲ: ಗೃಹ ಸಚಿವರ ವಿರುದ್ಧ BJP ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ

23 Nov 2022 3:09 PM IST
share
ಇದುವರೆಗೂ ಒಂದು ಪೋನ್ ಮಾಡಿ ಏನಾಯ್ತು ಅಂತ ಕೇಳಿಲ್ಲ: ಗೃಹ ಸಚಿವರ ವಿರುದ್ಧ BJP ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ

ಬೆಂಗಳೂರು, ನ. 23: ‘ನಾನೊಬ್ಬ ದಲಿತ ಶಾಸಕ ಎಂಬ ಕಾರಣದಿಂದ ಕ್ಷೇತ್ರದಲ್ಲಿ ನನ್ನ ಮೇಲೆ ನಡೆದ ಹಲ್ಲೆ ಘಟನೆ ಸಂಬಂಧ ಸೌಜನ್ಯಕ್ಕೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನನ್ನನ್ನು ಈವರೆಗೂ ಮಾತನಾಡಿಸಿಲ್ಲ. ನಾವು(ದಲಿತರು) ಹಲ್ಲೆಗೆ ಒಳಪಡುವರು ಎಂದು ಅವರು ಸುಮ್ಮನೆ ಆಗಿರಬಹುದು’ ಎಂದು ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಇಂದಿಲ್ಲಿ ಗೃಹ ಸಚಿವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಆನೆಯ ದಾಳಿಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಸಾಂತ್ವಾನ ಹೇಳಲು ತೆರಳಿದ್ದೆ. ಇದು ಸಣ್ಣ ಘಟನೆಯಲ್ಲ, ಜನರು ನನಗೆ ದೊಣ್ಣೆ, ಕಲ್ಲುಗಳಿಂದ ಹೊಡೆಯಲು ಬಂದಿದ್ದರು. ಹೀಗಿರುವಾಗ ಇದು ಸಣ್ಣ ಘಟನೆ  ಆಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

‘ನಾನು ದೂರು ಕೊಡಲಿಲ್ಲ. ಕುಮಾರಸ್ವಾಮಿ ಸಾಮಾನ್ಯ ವ್ಯಕ್ತಿಯಲ್ಲ. ನಾನೊಬ್ಬ ಶಾಸಕ. ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದುವರೆಗೂ ನನ್ನನ್ನು ಮಾತನಾಡಿಸುವ ಕೆಲಸ ಮಾಡಿಲ್ಲ. ಕನಿಷ್ಟ ಸೌಜನ್ಯಕ್ಕೂ ಕರೆದು ಏನಾಯ್ತು ಎಂದು ಕೇಳಿಲ್ಲ. ಒಬ್ಬ ಜನಪ್ರತಿನಿಧಿಗಳಿಗೆ ಹೀಗೆ ಆದರೆ ಜನರ ಪರಿಸ್ಥಿತಿ ಎಲ್ಲಿಗೆ ಹೋಗಲಿದೆ’ ಎಂದು ಅವರು ವಾಗ್ದಾಳಿ ನಡೆಸಿದರು.

‘ನಾನು ಆನೆ ಸಾಕಲು ಸಾಧ್ಯವೇ?, ಗೃಹ ಸಚಿವರು ಸಂಪೂರ್ಣವಾಗಿ ನನ್ನ ನಿರ್ಲಕ್ಷ್ಯ ಮಾಡಿದ್ದಾರೆ. ಇದುವರೆಗೂ ಒಂದು ಫೋನ್ ಮಾಡಿ ಏನಾಯಿತು ಎಂದು ಕೇಳಿಲ್ಲ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ಆರೋಗ್ಯದ ಬಗ್ಗೆ ಫೋನ್ ಮಾಡಿ ವಿಚಾರಿಸಿದ್ದಾರೆ. ಆದರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಘಟನೆಯ ಬಗ್ಗೆ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ’ ಎಂದು ಅವರು ದೂರಿದರು.

‘ನನಗೆ ಬಹಳ ತೊಂದರೆ ಆಗಿದೆ, ಕೊಲೆ ಮಾಡಲು ಬಂದವರು, ಹುಚ್ಚುನಾಯಿ ಅಟ್ಟಿಸಿಕೊಂಡು ಬಂದ ರೀತಿಯಲ್ಲಿ ಜನ ನನ್ನನ್ನು ಅಟ್ಟಿಸಿಕೊಂಡು ಬಂದರು. ನಾನು ಅಂದು ಪ್ರಾಣ ಉಳಿಸಿಕೊಂಡಿದ್ದೇ ಹೆಚ್ಚು. ಬಟ್ಟೆ ಹೋದರೆ ಹೋಯ್ತ, ಆದರೆ, ಪ್ರಾಣ ಹೋದ್ರೆ ಏನು ಗತಿ. ನನ್ನ ನೋವು ಏನೆಂದರೆ ನಾನು ನನ್ನ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆರಗ ಜ್ಞಾನೇಂದ್ರ ಅವರು ಇಲ್ಲಿಯ ವರೆಗೆ ನಾನು ಶಾಸಕ ಅಲ್ಲ, ಕನಿಷ್ಟ ನನ್ನ ಸಹೋದ್ಯೋಗಿ ಎಂದೂ ಫೋನ್ ಮಾಡಿಲ್ಲ. ಇವರು ಹೊಡೆಸಿಕೊಳ್ಳುವ ಜನರು’ ಎಂದು ಅವರ ಮನಸ್ಸಿನಲ್ಲಿರಬಹುದು’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

‘ಶಾಸಕ ಸ್ಥಾನದಲ್ಲಿದ್ದು, ಪ್ರತಿಯೊಬ್ಬರನ್ನು ರಕ್ಷಣೆ ಮಾಡುವಂತವರು ಈ ಘಟನೆಯ ಬಗ್ಗೆ ಸುಮ್ಮನೆ ಆಗಿದ್ದು ಬೇಸರವಿದೆ. ನಮಗೆ ಅಧಿಕಾರಿಗಳನ್ನು ಹಾಕಿ ಕೊಡಿ ಎಂದು ಕೇಳಿದ್ದೆ. ಒಬ್ಬ ಗೃಹ ಸಚಿವರಾಗಿ ನನ್ನ ಮಾತನಾಡಿಸಿಲ್ಲ’ ಎಂದು ದೂರಿದ ಅವರು, ‘ನಾನು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮೇಲೆ ಮಾತನಾಡಬೇಕೇ? ಎಂದು ಟೀಕಿಸಿದರು.

------------------------------------------

‘ಆನೆ ದಾಳಿ ನಡೆಯುತ್ತದೆ. ಅದನ್ನು ತಪ್ಪಿಸಲು ಕಷ್ಟಸಾಧ್ಯ. ಆದರೆ, ಕ್ಷೇತ್ರದಲ್ಲಿ ಏನಾದರೂ ಆದರೆ ಶಾಸಕರು ಸಾಂತ್ವನ ಹೇಳಲು ಹೋಗಬಾರದೇ. ಗೃಹ ಸಚಿವರ ನಡವಳಿಕೆ ಸರಿಯಿಲ್ಲ. ರಾಜ್ಯದ ಗೃಹ ಇಲಾಖೆ ಹೊಣೆ ಹೊತ್ತಿರುವವರೇ ನನ್ನ ಪ್ರಾಣ ಹೊಂದರೆ ಯಾರು ಹೊಣೆ’

-ಎಂ.ಪಿ.ಕುಮಾರಸ್ವಾಮಿ ಮೂಡಿಗೆರೆ ಬಿಜೆಪಿ ಶಾಸಕ

share
Next Story
X