Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಸ್ಫೋಟ ಪ್ರಕರಣಕ್ಕೆ ಪೊಲೀಸ್...

ಮಂಗಳೂರು ಸ್ಫೋಟ ಪ್ರಕರಣಕ್ಕೆ ಪೊಲೀಸ್ ಗುಪ್ತಚರ ವಿಭಾಗದ ವೈಫಲ್ಯ ಕಾರಣ: ಕೆಪಿಸಿಸಿ ವಕ್ತಾರ ವಿನಯರಾಜ್ ಆರೋಪ

23 Nov 2022 7:35 PM IST
share
ಮಂಗಳೂರು ಸ್ಫೋಟ ಪ್ರಕರಣಕ್ಕೆ ಪೊಲೀಸ್ ಗುಪ್ತಚರ ವಿಭಾಗದ ವೈಫಲ್ಯ ಕಾರಣ: ಕೆಪಿಸಿಸಿ ವಕ್ತಾರ ವಿನಯರಾಜ್ ಆರೋಪ

ಮಂಗಳೂರು, ನ.23: ರಾ.ಹೆ.75ರ ನಾಗುರಿಯಲ್ಲಿ ಕಳೆದ ಶನಿವಾರ ನಡೆದ ಸ್ಫೋಟ ಪ್ರಕರಣಕ್ಕೆ ರಾಜ್ಯ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿರುವ ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್, ರಾಜ್ಯ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು. ಘಟನೆಯ ಹಿಂದೆ ಇರುವ ಶಕ್ತಿಗಳನ್ನು ನಿಗ್ರಹಿಸಬೇಕು ಮತ್ತು ಯುಎಪಿಎ ಕಾಯ್ದೆಯಡಿ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ವೇಳೆ ಈ ಸ್ಫೋಟವು ಜನನಿಬಿಡ ಪ್ರದೇಶದಲ್ಲಿ ನಡೆದಿದ್ದರೆ ಅಮಾಯಕರು ಮೃತಪಟ್ಟು ಜಿಲ್ಲೆಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಎದುರಿಸಬೇಕಾಗುತ್ತಿತ್ತು. ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆಗೆ ಇದರ ಬಗ್ಗೆ ಯಾವುದೇ ಪೂರ್ವ ಮಾಹಿತಿ ಇಲ್ಲದಿರುವುದು ವಿಪರ್ಯಾಸ ಎಂದರು.

ಆರೋಪಿ ಶಾರಿಕ್ ಬಗ್ಗೆ ಗೃಹ ಇಲಾಖೆಯು ನಿರ್ಲಕ್ಷ್ಯ ವಹಿಸಿದ್ದೇ ಈ ಘಟನೆಗೆ ಕಾರಣವಾಗಿದೆ. 2020ರಲ್ಲಿ ಪ್ರಚೋದಿತ ಗೋಡೆ ಬರಹದ ಪ್ರಮುಖ ಆರೋಪಿಯಾಗಿದ್ದ ಈತನ ಬಗ್ಗೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕಿತ್ತು. ಹೈಕೋರ್ಟ್ ಈತನಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಕ್ಲಪ್ತ ಸಮಯದಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸದೆ ವಿಳಂಬ ನೀತಿ ಅನುಸರಿಸಿದ್ದೇ ಈತನಿಗೆ ವರದಾನವಾಗಿದೆ ಎಂದು ವಿನಯರಾಜ್ ಹೇಳಿದರು.

ಜಾಮೀನು ಸಿಕ್ಕಿದ ಬಳಿಕ ಈತ ತಲೆಮರೆಸಿಕೊಂಡಿದ್ದು, ಬಂಧನದ ವಾರೆಂಟ್ ಹೊರಡಿಸಲಾಗಿತ್ತು. ಈತನನ್ನು ಮತ್ತೆ ಬಂಧಿಸಲು ಮಂಗಳೂರು ಪೊಲೀಸರು ವಿಫಲವಾಗಿದ್ದರು. ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕ ತಿಂಗಳಿಗೊಮ್ಮೆ ಠಾಣೆಗೆ ಕರೆಸಿ ಈತನ ಚಟುವಟಿಕೆ ಬಗ್ಗೆ ಮಾಹಿತಿ ಪಡೆಯಲು ಯಾಕೆ ಪ್ರಯತ್ನಿಸಿಲ್ಲ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅನಿಲ್ ಪೂಜಾರಿ, ಅಪ್ಪಿ, ಶಾಂತಲಾ ಗಟ್ಟಿ, ಮಂಜುಳಾ ನಾಯಕ್, ರಾಕೇಶ್ ದೇವಾಡಿಗ, ನೀರಜ್ ಪಾಲ್ ಉಪಸ್ಥಿತರಿದ್ದರು.

share
Next Story
X