Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರದಲ್ಲಿ ಕಾರ್ಟೂನ್ ಹಬ್ಬ-2022...

ಕುಂದಾಪುರದಲ್ಲಿ ಕಾರ್ಟೂನ್ ಹಬ್ಬ-2022 ಉದ್ಘಾಟನೆ

23 Nov 2022 8:41 PM IST
share
ಕುಂದಾಪುರದಲ್ಲಿ ಕಾರ್ಟೂನ್ ಹಬ್ಬ-2022 ಉದ್ಘಾಟನೆ

ಕುಂದಾಪುರ, ನ. 23: ನಮ್ಮ ಜೀವನದಲ್ಲಿನ ಸಮಸ್ಯೆ, ಸಂಕಷ್ಟ, ಬೇಸರ, ದುಖ: ಸೇರಿದಂತೆ ಯಾವುದೇ ರೀತಿಯ ನೋವನ್ನು ತಣಿಸಿ ನಗುವನ್ನು ತರಿಸುವ ಶಕ್ತಿ ವ್ಯಂಗ್ಯಚಿತ್ರಗಳಿಗೆ ಇವೆ ಎಂದು ಹೊಂಬಾಳೆ ಫಿಲ್ಮ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ ನೇತೃತ್ವದ ಕಾರ್ಟೂನ್ ಬಳಗದ ವತಿಯಿಂದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಆಯೋಜಿಸಲಾದ ಕಾರ್ಟೂನ್ ಹಬ್ಬ-2022 ವನ್ನು ಕ್ಯಾರಿಕೇಚರ್ ಬಿಡಿಸುವ ಮೂಲಕ ಬುಧವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸತೀಶ್ ಆಚಾರ್ಯ ಅವರ ‘ಗೋ ಕೊರೋನಾ ಗೋ’ ಪುಸ್ತಕದ 2ನೇ ಆವೃತ್ತಿ ಬಿಡುಗಡೆಗೊಳಿಸಿದ ಹಿರಿಯ ವ್ಯಂಗ್ಯಚಿತ್ರಗಾರ ಜೇಮ್ಸ್ ವಾಜ್ ಮಾತನಾಡಿ,  ಗೋ ಕೊರೋನಾ ಗೋ ಪ್ರಥಮ ಸಂಚಿಕೆ ಕೊರೋನಕ್ಕೆ ಮೊದಲ ಡೋಸ್ ನೀಡಿದರೆ, ಎರಡನೇ ಆವೃತ್ತಿ ಸಣ್ಣ ಸಣ್ಣ ವೈರಸ್‌ಗಳನ್ನು ಓಡಿಸಿದೆ. ಈ ಎರಡು ಆವೃತ್ತಿಗಳು ವ್ಯಂಗ್ಯ ಚಿತ್ರಕಾರರ ವೃತ್ತಿ ಬದುಕಿಗೆ ಒಳ್ಳೆಯ ಕೈಪಿಡಿಯಾಗಿದೆ ಎಂದು ತಿಳಿಸಿದರು.

ಬರಹಗಾರ ಶಂಕರ ಕೆಂಚನೂರು ಮಾತನಾಡಿ, ಕಾರ್ಟೂನ್‌ಗಳು ಸತ್ಯವನ್ನು ತಮಾಷೆಯಾಗಿ ಹೇಳುವುದರಿಂದ ಮನ ಮುಟ್ಟುತ್ತವೆ. ಸಮಾಜಕ್ಕೆ ಕಟು ಸತ್ಯವನ್ನು ನೀಡುವ ಕೆಲಸವನ್ನು ಕಾರ್ಟೂನ್‌ಗಳು ಮಾಡುತ್ತಿವೆ. ವ್ಯಂಗ್ಯ ಚಿತ್ರಗಳಲ್ಲಿನ ಮೊನಚುಗಳಿಂದಾಗಿ ಮಾಧ್ಯಮಗಳಲ್ಲಿ ಅವಕಾಶ ಕಡಿಮೆಯಾಗುತ್ತಿದ್ದರೂ, ಸಾಮಾಜಿಕ ಜಾಲತಾಣ ಗಳ ಮೂಲಕ ವೇದಿಕೆ ದೊರಕುತಿತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಂ.ದಿನೇಶ್ ಹೆಗ್ಡೆ ಮಾತನಾಡಿ, ಪ್ರಜಾಪ್ರಭುತ್ವದ ಬೆಳವಣಿಗೆಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದ ಹಾಗೂ ನೀಡುತ್ತಿರುವ ಮಾಧ್ಯಮಗಳಲ್ಲಿ ರೇಖೆಗಳ ಮೂಲಕ ಜನರಿಗೆ ಅಗತ್ಯ ಮಾಹಿತಿಯನ್ನು ಬೇಗನೆ ಹಾಗೂ ನೇರವಾಗಿ ನೀಡುವ ಕಾರ್ಯಗಳು ವ್ಯಂಗ್ಯ ಚಿತ್ರಗಳಿಂದ ಆಗುತ್ತಿದೆ. ದೇಶದ ವರ್ತಮಾನದ ಆಗು-ಹೋಗುಗಳನ್ನು ವಿಭಿನ್ನ ಆಯಾಮಗಳಲ್ಲಿ ಅಧ್ಯಯನ ಮಾಡಿ, ವಿಮರ್ಶೆ ಮಾಡಿ, ಜನರ ಮುಂದಿಡುವ ಕೆಲಸಗಳು ವ್ಯಂಗ್ಯಚಿತ್ರಕಾರರಿಂದ ಆಗುತ್ತಿದೆ ಎಂದು ಹೇಳಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯ್ ಎ.ಪಾಯಸ್, ಚಲನಚಿತ್ರ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ, ವ್ಯಂಗ್ಯ ಚಿತ್ರಕಾರರಾದ ರಾಮಕೃಷ್ಣ ಹೇರ್ಳೆ, ಚಂದ್ರಶೇಖರ ಶೆಟ್ಟಿ, ಕೇಶವ್ ಸಸಿಹಿತ್ಲು ಉಪಸ್ಥಿತರಿದ್ದರು. ಕಾರ್ಟೂನ್ ಬಳಗದ ಸತೀಶ್ ಆಚಾರ್ಯ ಸ್ವಾಗತಿಸಿದರು. ಉಪನ್ಯಾಸಕಿ ಪ್ರೀಯಾಂಕ್ ಜೋಸೆಫ್ ಕಾರ್ಯಕ್ರಮ ನಿರೂಪಿಸಿದರು.

share
Next Story
X