Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಚಿನ್ ಪೈಲಟ್‌ಗೆ ಸಿಎಂ ಸ್ಥಾನ ನೀಡದೆ...

ಸಚಿನ್ ಪೈಲಟ್‌ಗೆ ಸಿಎಂ ಸ್ಥಾನ ನೀಡದೆ ಇದ್ದಲ್ಲಿ ರಾಹುಲ್ ಯಾತ್ರೆಗೆ ರಾಜಸ್ಥಾನದಲ್ಲಿ ತಡೆ : ಗುರ್ಜರ್ ನಾಯಕನ ಬೆದರಿಕೆ

ಅಂತರ ಕಾಯ್ದುಕೊಂಡ ಪೈಲಟ್ ಪಾಳಯ

23 Nov 2022 9:35 PM IST
share
ಸಚಿನ್ ಪೈಲಟ್‌ಗೆ ಸಿಎಂ ಸ್ಥಾನ ನೀಡದೆ ಇದ್ದಲ್ಲಿ ರಾಹುಲ್ ಯಾತ್ರೆಗೆ ರಾಜಸ್ಥಾನದಲ್ಲಿ ತಡೆ : ಗುರ್ಜರ್ ನಾಯಕನ ಬೆದರಿಕೆ
ಅಂತರ ಕಾಯ್ದುಕೊಂಡ ಪೈಲಟ್ ಪಾಳಯ

 ಹೊಸದಿಲ್ಲಿ,ನ.23: ಒಂದು ವೇಳೆ ಸಚಿನ್ ಪೈಲಟ್(Sachin is a pilot) ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದೇ ಇದ್ದಲ್ಲಿ ರಾಹುಲ್ ಗಾಂಧಿ(Rahul Gandhi) ನೇತೃತ್ವದ ಭಾರತ್ ಜೋಡೋ (Bharat Jodo)ಯಾತ್ರೆಗೆ ರಾಜಸ್ಥಾನದಲ್ಲಿ ತಡೆ ಒಡ್ಡಲಾಗುವುದೆಂದು ಗುರ್ಜರ್ ಸಮುದಾಯದ ನಾಯಕ ವಿಜಯ್ ಸಿಂಗ್ ಬೈನ್ಸಾಲಾ(Vijay Singh Bainsala) ಬೆದರಿಕೆ ಹಾಕಿದ್ದಾರೆ. ಆದರೆ ಬೈನ್ಸ್‌ಲಾ ಅವರ ಈ ಹೇಳಿಕೆಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಸಚಿನ್ ಪೈಲಟ್‌ಅವರ ಅಪ್ತ ಮೂಲಗಳು ಸ್ಪಷ್ಟಪಡಿಸಿವೆ. ರಾಹುಲ್ ಗಾಂಧಿಯವರ ಯಾತ್ರೆಗೆ ಯಾಕೆ ಅಡ್ಡಿಪಡಿಸಬೇಕು ಎಂದು ಅವು ಪ್ರಶ್ನಿಸಿವೆ.

   ಗುರ್ಜರ್ ನಾಯಕ ವಿಜಯ್ ಸಿಂಗ್ ಬೈನ್ಸಾಲಾ ಅವರು ನೀಡಿದ ವಿಡಿಯೋ ಹೇಳಿಕೆಯೊಂದರಲಿ, ರಾಜಸ್ಥಾನದ ಹಾಲಿ ಸರಕಾರವು ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ್ದು, ಒಂದು ವರ್ಷವಷ್ಟೇ ಬಾಕಿ ಉಳಿದಿದೆ. ಈಗ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕಾಗಿದೆ. ಒಂದು ವೇಳೆ ಅದು ನಡೆದಲ್ಲಿ, ಆಗ ನಿಮಗೆ (ರಾಹುಲ್‌ಗಾಂಧಿ) ಸ್ವಾಗತ. ಇಲ್ಲದೆ ಇದ್ದಲ್ಲಿ ಯಾತ್ರೆಯನ್ನು ವಿರೋಧಿಸುತ್ತೇವೆ ’’ ಎಂದು ಎಚ್ಚರಿಕೆ ನೀಡಿದ್ದರು.

ರಾಜಸ್ಥಾನದ ಮುಖ್ಯಮಂತ್ರಿಗೆ ಹುದ್ದೆಗೆ ಸಚಿವ್ ಪೈಲಟ್ ಅವರನ್ನು ನೇಮಿಸಬೇಕೆಂದು ಬೈನ್ಸಾಲಾ ಆಗ್ರಹಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸಚಿನ್ ಪೈಲಟ್ ಸೇರಿಕೊಳ್ಳುವುದಕ್ಕೆ ಒಂದು ದಿನ ಮೊದಲು ಬೈನ್ಸಾಲಾ ಅವರು ಈ ಬೇಡಿಕೆಯಿಟ್ಟಿದ್ದಾರೆ.

  ರಾಜಸ್ಥಾನದಲ್ಲಿ ಗುರ್ಜರ್ ಮುಖ್ಯಮಂತ್ರಿಯಿಲ್ಲದೇ ಇರುವುದರಿಂದ ಇಡೀ ಸಮುದಾಯವು ಬಾಧಿತವಾಗಿದೆ ಎಂದು ಬೈನ್ಸಾಲಾ ಹೇಳಿದರು.

  ‘‘ಗುರ್ಜರ್ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ದೊರೆಯಬೇಕೆಂಬ ತಮ್ಮ ಬೇಡಿಕೆಯ ಈಡೇರಿಕೆಗಾಗಿ ನಾವು ಎಷ್ಟು ದಿನ ಕಾಯಬೇಕು?. ನಾವು ಯಾಕೆ ಘರ್ಷಣೆ ಅಥವಾ ಸಂಘರ್ಷದೆಡೆಗೆ ಮುಖಮಾಡಬೇಕು?. ನೀವು ಜನತೆಯ ಆಶೋತ್ತರಗಳಿಗೆ ಹಾಗೂ ಆಕಾಂಕ್ಷೆಗಳ ಮೇಲೆ ಸವಾರಿ ಮಾಡುತ್ತಿದ್ದೀರಿ? ’’ ಎಂದು ಗುರ್ಜರ್ ನಾಯಕ ಬೈನ್ಸ್‌ಲಾ ಕಾಂಗ್ರೆಸ್ ವರಿಷ್ಛರನ್ನು ಹೆಸರೆತ್ತದೇ ಹೇಳಿದರು. ಈ ವಿಷಯವು ರಾಹುಲ್ ಅವರನ್ನು ತಲುಪಬೇಕಾಗಿದೆ. ಆದರೆ ಬಹುಶಃ ಅವರಿಗೆ ಇಲ್ಲಿ ಏನಾಗುತ್ತಿದೆಯೆಂದು ತಿಳದಿರಲಾರದು ಎಂದು ಬೈನ್ಸ್‌ಲಾ ಹೇಳಿದರು.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹಾಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹಾಗೂ ಸಚಿನ್ ಪೈಲಟ್ ನಡುವಿನ ತಿಕ್ಕಾಟವು, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರವುಂಟು ಮಾಡುವ ಸಾಧ್ಯತೆಯಿದೆಯೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಿಸಿದ್ದಾರೆ.

share
Next Story
X