Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತದಾರರ ಮಾಹಿತಿ ಕದ್ದ ಪ್ರಕರಣ; ಭಾರತ...

ಮತದಾರರ ಮಾಹಿತಿ ಕದ್ದ ಪ್ರಕರಣ; ಭಾರತ ರಾಜಕಾರಣ ಕಂಡ ವಿದ್ರೋಹಿ ಹಗರಣ: ಪರಿಷತ್ ಸದಸ್ಯ ಟಿ.ಎ.ಶರವಣ

23 Nov 2022 10:42 PM IST
share
ಮತದಾರರ ಮಾಹಿತಿ ಕದ್ದ ಪ್ರಕರಣ; ಭಾರತ ರಾಜಕಾರಣ ಕಂಡ ವಿದ್ರೋಹಿ ಹಗರಣ: ಪರಿಷತ್ ಸದಸ್ಯ ಟಿ.ಎ.ಶರವಣ

ಬೆಂಗಳೂರು, ನ.23: ವೋಟರ್ ಐಡಿ ಮಾಹಿತಿ ಕಳ್ಳತನದ ಕರ್ಮಕಾಂಡವು ಭಾರತ ರಾಜಕಾರಣ ಕಂಡ ವಿದ್ರೋಹಿ ಹಗರಣವಾಗಿದ್ದು, ಇದು ಪ್ರಜಾಸತ್ತೆಯನ್ನೇ ಬುಡಮೇಲು ಮಾಡುವ ನೀಚ ಕೆಲಸ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಕಿಡಿಕಾರಿದ್ದಾರೆ.

ವೋಟರ್ ಐಡಿ ಮಾಹಿತಿ ಕಳ್ಳತನ ಪ್ರಕರಣದ ತನಿಖೆಗೆ ಆಗ್ರಹಿಸಿ ಜೆಡಿಎಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಈ ಹಗರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. 2017ರಿಂದಲೂ ಚಿಲುಮೆ ಸಂಸ್ಥೆಗೆ ಮತದಾನದ ಜಾಗೃತಿ ಹೆಸರಲ್ಲಿ ಮತಪಟ್ಟಿ ಪರಿಷ್ಕರಣೆ ಹೆಸರಲ್ಲಿ ಅವಕಾಶ ಕೊಡಲಾಗಿದೆ. ಬಿಜೆಪಿ ಸರಕಾರ ಬಂದ ನಂತರ ಭೂತ್ ಲೆವೆಲ್ ಆಫೀಸರ್ಸ್ ಎನ್ನುವ ಸರಕಾರಿ ಅಧಿಕಾರಿಗಳ ಸೀಲು ಸಹಿ ಇರುವ ಗುರುತಿನ ಚೀಟಿ ಯಾಕೆ ಕೊಟ್ಟರು? ಎಂದು ಪ್ರಶ್ನಿಸಿದರು.

ಈಗ ಸುಮಾರು 6.7 ಲಕ್ಷ ಮತದಾರರ ಹೆಸರನ್ನು ವಿಶೇಷವಾಗಿ ಪ್ರತಿಪಕ್ಷ ಬೆಂಬಲಿಗರ ಮತದಾರರನ್ನು, ಅದರಲ್ಲೂ ಅಲ್ಪಸಂಖ್ಯಾತ ಮತದಾರರನ್ನು ಮತಪಟ್ಟಿಯಿಂದ ಕೈ ಬಿಡಲಾಗಿದೆ ಎನ್ನುವ ಮಾಹಿತಿ ಬಂದಿದೆ. ಆದರೂ, ಸುಮಾರು 27 ಲಕ್ಷ ಮತಗಳು ಮಾಯವಾಗಿವೆ ಎನ್ನುವುದು ನಮಗೆ ಬಂದಿರುವ ಮಾಹಿತಿ ಆಗಿದೆ. ಹೀಗಾಗಿ, ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುವಿನ ಹಕ್ಕು ಕಸಿಯುವ ಈ ಹಗರಣವನ್ನು ಹೈ ಕೋರ್ಟ್‍ನ ಹಾಲಿ ನ್ಯಾಯಮೂರ್ತಿ ಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದರು.

ಇದು ಒಂದು ಭಾಗವಾದರೆ ಬರೀ ಬಿಬಿಎಂಪಿ ಅಧಿಕಾರಿಗಳು ಅಷ್ಟೇ  ಅಲ್ಲ ಕಂದಾಯ ಇಲಾಖೆಯ ಆಧಿಕಾರಿಗಳು, ಬಿಬಿಎಂಪಿಯ ಉನ್ನತ ಮಟ್ಟದ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಅವರ ವಿರುದ್ಧ ಕ್ರಮ ಯಾಕಿಲ್ಲ. ಸಣ್ಣ ಪುಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಪ್ರಕರಣ ಮುಚ್ಚಿಹಾಕುವ ಸಂಚು ನಡೆದಿದೆ ಎಂದು ಆರೋಪಿಸಿದರು.

ಚಿಲುಮೆ ಸಂಸ್ಥೆ ವಾಣಿಜ್ಯ ಉದ್ದೇಶಕ್ಕೆ ಮಾರಿಕೊಂಡಿದೆ: ಇಲ್ಲಿ ಮತಪಟ್ಟಿ ಪರಿಷ್ಕರಣೆ ಹೆಸರಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಈ ಚಿಲುಮೆ ಸಂಸ್ಥೆ ವಾಣಿಜ್ಯ ಉದ್ದೇಶಕ್ಕೆ ಮಾರಿಕೊಂಡಿದೆ. ಇದೂ ಮತದಾರರ ಗೌಪ್ಯತ ಹಕ್ಕಿಗೆ ಧಕ್ಕೆ ತಂದಿದೆ. ವ್ಯಕ್ತಗತ ಸ್ವಾತಂತ್ರ ಕಾಯಿದೆಯ ಉಲ್ಲಂಘನೆ ಆಗಿದೆ. ಈ ಬಗ್ಗೆ ತನಿಖೆ ನಡೆಯಲಿ ಎಂದು ಶರವಣ ಒತ್ತಾಯಿಸಿದರು.

ಚಿಲುಮೆ ಸಂಸ್ಥೆ ತಾನು ಸಂಗ್ರಹಿಸಿದ ಮಾಹಿತಿಯನ್ನು ಚುನಾವಣೆ ಆಯೋಗ, ಬಿಬಿಎಂಪಿ ಗೆ ನೀಡುವ ಬದಲಾಗಿ ತನ್ನದೇ ಆದ ಡಿಜಿಟಲ್ ಆಪ್ ಗೆ ಲೋಡ್ ಮಾಡಿದ್ದೇಕೆ? ಬಿಜೆಪಿಯ ಕೆಲವು ಪ್ರಭಾವಿ ರಾಜಕಾರಣಿಗಳಿಗೆ ಚುನಾವಣೆ ವೇಳೆ ಮತದಾರರ ವ್ಯಕ್ತಿಗತ ಮಾಹಿತಿ ಮಾರಲು ಈ ಸಂಸ್ಥೆ ವಹಿವಾಟು ನಡೆಸಿದೆ. ಇದರಲ್ಲಿ ಈ ಸರಕಾರದ ಪ್ರಭಾವಿ ಮಂತ್ರಿಗಳು ಶಾಮೀಲಾಗಿದ್ದಾರೆ. ಎದುರಾಳಿ ಪಕ್ಷಗಳ ಮತಗಳನ್ನು ಮತಪಟ್ಟಿ ಯಿಂದ ತೆಗೆದು ಹಾಕಲು ಸಂಸ್ಥೆಯನ್ನ ಬಳಸಲಾಗಿದ್ದು, ಬಿಜೆಪಿಯ ಚುನಾವಣೆ ಅಕ್ರಮ ಆಗಿದೇ ಎಂದು ರಾಜ್ಯ ಸರಕಾರದ ವಿರುದ್ಧ ಟಿ.ಎ.ಶರವಣ ವಾಗ್ದಾಳಿ ನಡೆಸಿದರು.

share
Next Story
X