Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡಾನೆ ದಾಳಿ, ಪೊಲೀಸರಿಂದ ಬಂಧನದ ಭೀತಿ;...

ಕಾಡಾನೆ ದಾಳಿ, ಪೊಲೀಸರಿಂದ ಬಂಧನದ ಭೀತಿ; ಗ್ರಾಮ ತೊರೆಯುತ್ತಿರುವ ಕುಂದೂರು, ಹುಲ್ಲೇಮನೆ ನಿವಾಸಿಗಳು

23 Nov 2022 11:36 PM IST
share
ಕಾಡಾನೆ ದಾಳಿ, ಪೊಲೀಸರಿಂದ ಬಂಧನದ ಭೀತಿ; ಗ್ರಾಮ ತೊರೆಯುತ್ತಿರುವ ಕುಂದೂರು, ಹುಲ್ಲೇಮನೆ ನಿವಾಸಿಗಳು

ಮೂಡಿಗೆರೆ, ನ.23: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ತಾಲೂಕಿನ ಹುಲ್ಲೆಮನೆ, ಕುಂದೂರು ಭಾಗದಲ್ಲಿ 3 ಕಾಡಾನೆಗಳು ಬೀಡು ಬಿಟ್ಟಿದ್ದು, ಕಾಫಿ, ಅಡಿಕೆ, ಬಾಳೆ ತೋಟಗಳನ್ನು ನಾಶ ಮಾಡುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಈ ಮಧ್ಯೆ ಶಾಸಕರ ಮೇಲೆ ಹಲ್ಲೆ ನಡೆಸಿದ ಘಟನೆ ಸಂಬಂಧ ಪೊಲೀಸರು ಆರೋಪಿಗಳಿಗಾಗಿ ಗ್ರಾಮದಲ್ಲಿ ಹುಡುಕಾಟ ಆರಂಭಿಸಿದ್ದು, ಪೊಲೀಸರು ಹಾಗೂ ಕಾಡಾನೆಗಳ ಭಯದಿಂದಾಗಿ ಗ್ರಾಮಸ್ಥರು ಗ್ರಾಮ ತೊರೆಯಲಾರಂಭಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಕುಂದೂರು, ಹುಲ್ಲೇಮನೆ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಸಾಮಾನ್ಯ ಸಂಗತಿ ಎಂಬಂತಾಗಿದ್ದು, ಕಾಡಾನೆಗಳ ಹಾವಳಿಯಿಂದಾಗಿ ಈ ಭಾಗದ ರೈತರು ತಾವು ಬೆವರುಸುರಿಸಿ ಬೆಳೆಸಿದ ಕಾಫಿ, ಅಡಿಕೆ, ಬಾಳೆ ತೋಟಗಳಿಗೆ ನುಗ್ಗಿ ನಾಶ ಮಾಡುತ್ತಿದ್ದು, ಕೆಲವೊಮ್ಮೆ ಕಾಡಾನೆಗಳ ದಾಳಿಗೆ ಗ್ರಾಮಸ್ಥರು ಪ್ರಾಣವನ್ನೂ ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರವಿವಾರ ಬೆಳಗ್ಗೆ ಶೋಭಾ ಎಂಬವರ ಮೇಲೆ ಕಾಡಾನೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಇನ್ನೂ ಹಸಿಯಾಗಿರುವಾಗಲೇ ಇದೇ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಬೀಡು ಬಿಟ್ಟಿದ್ದು, ರಾತ್ರಿ ವೇಳೆ ರೈತರ ಹೊಲ ಗದ್ದೆಗಳಿಗೆ ದಾಳಿ ಮಾಡಿ ಬೆಳೆ ನಾಶ ಮಾಡುತ್ತಿವೆ. ಕುಂದೂರು, ಹುಲ್ಲೆಮನೆ ಗ್ರಾಮದಲ್ಲಿ ಸದ್ಯ ಕಾಫಿ, ಅಡಿಕೆ ಕಟಾವಿನಂತಹ ಕೃಷಿ ಚಟುವಟಿಕೆ ಆರಂಭವಾಗಿದ್ದು, ರೈತರು, ಕೃಷಿ ಕೂಲಿ ಕಾರ್ಮಿಕರು ಕಾಫಿ ತೋಟಗಳಲ್ಲಿ ಹಣ್ಣು ಕಟಾವು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಆದರೆ ಕಾಡಾನೆಗಳ ಭೀತಿಯಿಂದಾಗಿ ಕಾಫಿ ಕಟಾವು ಕೆಲಸ ನನೆಗುದಿಗೆ ಬೀಳುವಂತಾಗಿದೆ.

ಗ್ರಾಮ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ 3 ಕಾಡಾನೆಗಳ ಪೈಕಿ ಶೋಭಾ ಅವರ ಮೇಲೆ ದಾಳಿ ಮಾಡಿರುವ ಕಾಡಾನೆಯೂ ಇರುವ ಶಂಕೆ ಗ್ರಾಮಸ್ಥರದಾಗಿದ್ದು, ಈ ಆನೆಯ ಭೀತಿಯಿಂದಾಗಿ ಗ್ರಾಮಸ್ಥರು ಮನೆಗಳಿಂದ ಹೊರ ಬಾರದಂತಾಗಿದೆ. ರಾತ್ರಿ ವೇಳೆಯಂತೂ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸುತ್ತಿದ್ದು, ಕೆಲ ಗ್ರಾಮಸ್ಥರು ಕಾಡಾನೆಗಳ ಭೀತಿಯಿಂದಾಗಿ ಗ್ರಾಮವನ್ನೇ ತೊರೆಯುತ್ತಿದ್ದಾರೆಂದು ತಿಳಿದು ಬಂದಿದೆ.
ಈ ಮಧ್ಯೆ ಕಳೆದ ರವಿವಾರ ಸಂಜೆ ಕಾಡಾನೆ ದಾಳಿ ಸ್ಥಳಕ್ಕೆ ತೆರಳಿದ್ದ ವೇಳೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ಸೇರಿದಂತೆ ಪೊಲೀಸರು ಸರಕಾರಿ ನೌಕರರ ಮೇಲೆ ಹಲ್ಲೆ, ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಹಾಗೂ ಸರಕಾರಿ ಆಸ್ತಿಪಾಸ್ತಿ ನಷ್ಟ ಪ್ರಕರಣದಡಿಯಲ್ಲಿ ಈಗಾಗಲೇ 8 ಮಂದಿ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದು, ಪೊಲೀಸರು ಮಂಗಳವಾರ ರಾತ್ರಿಯೂ ಬಂಧನ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಮೇಲೆ ಪೊಲೀಸರು ಗ್ರಾಮಸ್ಥರ ಮನೆಮನೆಗಳಿಗೆ ಭೇಟಿ ನೀಡಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಹುಲ್ಲೆಮನೆ, ಬೈರಗದ್ದೆ, ತಳವಾರ, ಕುಂಡ್ರ, ಕಣಗದ್ದೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಅನೇಕರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗುವ ಭೀತಿಯಿಂದಲೂ ಗ್ರಾಮಸ್ಥರು ಗ್ರಾಮ ತೊರೆಯಲಾರಂಭಿಸಿದ್ದಾರೆಂದು ತಿಳಿದು ಬಂದಿದೆ. ಗ್ರಾಮದ ಮಹಿಳೆಯರು ಮನೆಯಲ್ಲಿ ಗಂಡಸರಿಲ್ಲದ ಕಾರಣಕ್ಕೆ ಬೇರೆ ಊರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗಳಿಗೆ ತೆರಳುತ್ತಿದ್ದಾರೆನ್ನಲಾಗುತ್ತಿದೆ. ಪರಿಣಾಮ ಕುಂದೂರು, ಹುಲ್ಲೆಮನೆ ಗ್ರಾಮದಲ್ಲಿ ಸದ್ಯ ಸ್ಮಶಾನಮೌನ ಆವರಿಸಿದೆ.

ರವಿವಾರ ಶಾಸಕರ ಮೇಲೆ ಹಲ್ಲೆ ನಡೆದ ಘಟನೆ ಸಂಬಂಧ ಗ್ರಾಮಸ್ಥರು, ಮುಖಂಡರು ಶಾಸಕ ಕುಮಾರಸ್ವಾಮಿ ಅವರ ಬಳಿ ಕ್ಷಮೆಯಾಚಿಸಿದ್ದಾರೆ. ಪೊಲೀಸರು ಬಂಧಿಸಿರುವ ಗ್ರಾಮಸ್ಥರು ಉದ್ದೇಶಪೂರ್ವಕವಾಗಿ ಗಲಭೆ ನಡೆಸಿದ್ದಲ್ಲ, ಗ್ರಾಮಸ್ಥರು ಪದೇಪದೇ ಕಾಡಾನೆ ದಾಳಿಗೆ ತುತ್ತಾಗುತ್ತಿರುವ ಪರಿಣಾಮ ಆಕ್ರೋಶಗೊಂಡು ಉದ್ವಿಗ್ನರಾಗಿದ್ದಾರೆ. ಬಂಧಿತರನ್ನು ಬಿಡುಗಡೆ ಮಾಡಬೇಕು ಎಂದು ಅಂಗಲಾಚಿದ್ದಾರೆ. ಆದರೂ ಪೊಲೀಸರು ಮಾತ್ರ ಘಟನೆಯಲ್ಲಿ ಭಾಗಿಯಾದವರ ಬಂಧನಕ್ಕೆ ಬಲೆ ಬೀಸಿದ್ದು, ಇದರಿಂದಾಗಿ ಇಡೀ ಗ್ರಾಮಸ್ಥರು ಒಂದೆಡೆ ಪೊಲೀಸರ ಭೀತಿ, ಮತ್ತೊಂದೆಡೆ ಕಾಡಾನೆಗಳ ಆತಂಕದಿಂದಾಗಿ ಊರು ಬಿಡುವಂತಾಗಿದೆ. ಗ್ರಾಮಸ್ಥರ ಈ ಆತಂಕ ದೂರ ಮಾಡಲು ಜನಪ್ರತಿನಿಧಿಗಳು ಮುಂದಾಗಬೇಕಿದೆ.

ಇದನ್ನೂ ಓದಿ: ಬೆಂಗಳೂರಿನ ಮೇಲ್ಸೇತುವೆಯಲ್ಲಿ ನಟ್ಟು, ಬೋಲ್ಟು ಸಡಿಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

share
Next Story
X