Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಸರ್ಪಗಾವಲಿನಲ್ಲಿ "ಟಿಪ್ಪು...

ಪೊಲೀಸ್ ಸರ್ಪಗಾವಲಿನಲ್ಲಿ "ಟಿಪ್ಪು ನಿಜಕನಸುಗಳು" ನಾಟಕ ಪ್ರದರ್ಶನಗೊಂಡಿರುವುದು ರಂಗಾಯಣಕ್ಕೆ ಮಾಡಿದ ಅಪಮಾನ: ಜನಾರ್ಧನ್

24 Nov 2022 1:53 PM IST
share
ಪೊಲೀಸ್ ಸರ್ಪಗಾವಲಿನಲ್ಲಿ ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನಗೊಂಡಿರುವುದು ರಂಗಾಯಣಕ್ಕೆ ಮಾಡಿದ ಅಪಮಾನ: ಜನಾರ್ಧನ್

ಮೈಸೂರು: ನಾಟಕ ಎಂಬುದು ಸಾಂಸ್ಕೃತಿಕ ಹಿರಿಮೆಯನ್ನು ಹೆಚ್ಚಿಸುವಂತಹದು. ಆದರೆ ಟಿಪ್ಪು ನಿಜಕನಸುಗಳು ನಾಟಕವನ್ನು  ಪೊಲೀಸ್ ಸರ್ಪಗಾವಲಿನಲ್ಲಿ ನಡೆಸುವ ಮೂಲಕ ಇಡೀ ಸಾಂಸ್ಕೃತಿಕ ಲೋಕವೇ ತಲೆತಗ್ಗಿಸುವಂತೆ ಮಾಡಿ ರಂಗಾಯಣಕ್ಕೆ ಮಾಡಿದ ಅಪಮಾನ, ಇಂತಹ ಘಟನೆ ದೇಶದ ಯಾವ ರಂಗಾಯಣದ ಇತಿಹಾಸದಲ್ಲೂ ನಡೆದಿಲ್ಲ ಎಂದು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಜನ್ನಿ) ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಟಕ ಎಂಬುದು ಸತ್ಯವನ್ನು ಹೇಳುವಂತಹದು. ಅಂತಹ ನಾಟಕಗಳನ್ನು ಪ್ರದರ್ಶಿಸುವ ಮೂಲಕ ರಂಗಭೂಮಿ ಮತ್ತು ಕಲಾವಿದರ ಗೌರವ ಹೆಚ್ಚಿಸುವಂತೆ ಆಗಬೇಕು. ಆದರೆ ಈಗಿನ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಟಿಪ್ಪು ನಿಜಕನಸುಗಳು ನಾಟಕವನ್ನು ಬರೆದು ಬರೀ ಸುಳ್ಳಗಳನ್ನೇ ಪ್ರದರ್ಶನ ಮಾಡುತ್ತಿರುವುದು ರಂಗಾಯಣದ ದುರ್ದೈವ. ಟಿಪ್ಪು ಕನಸಗಳನ್ನು ಕಂಡಿದ್ದ ಎಂದರೆ  ನಂಬ ಬಹುದು, ಆದರೆ, ಟಿಪ್ಪು ನಿಜಕನಸುಗಳು ಗೊತ್ತಾಗುವುದು ಆತನೊಂದಿಗೆ ಸಂಸಾರ ಮಾಡಿದ್ದರೆ ಮಾತ್ರ. ಈ ಹಿಂದೆ ರಂಗಾಯಣವನ್ನು ಕಾರಂತರು,  ಪ್ರಸನ್ನ, ಚಿದಂಬರ ರಾವ್ ಜಂಬೆ, ಸಿ.ಬಸವಲಿಂಯ್ಯ ಮತ್ತು ನಾನು ಸೇರಿದಂತೆ ಅನೇಕರು ಶ್ರಮ ಪಟ್ಟು ಕಟ್ಟಿದ್ದಾರೆ. ಅಂತಹ ರಂಗಾಯಣ ಇಂದು ತನ್ನ ಘನತೆಯನ್ನು ಕಳೆದುಕೊಳ್ಳುತ್ತಿರುವುದು ಮನಸ್ಸಿಗೆ ನೋವುಂಟು ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಒಂದು ನಾಟಕ ಮಾಡಿದರೆ. ಪ್ರೇಕ್ಷಕರನ್ನು ಹಾತೊರೆಯುವಂಗಿರಬೇಕು. ಅದು ಬಿಟ್ಟು ನಾಟಕ ನೋಡಲು ಬರುವವರನ್ನು ಎಲ್ಲಿಂದ ಬಂದೆ. ಹೇಗೆ ಬಂದೆ ಎಂದು ಪೊಲೀಸರ ಮೂಲಕ ಪರಿಶೀಲಿಸಿ ಆವರಣದೊಳಗೆ ಕಳುಹಿಸುವುದಲ್ಲ, ಇವರಿಗೆ ನಿಜವಾಗಲು ತಮ್ಮ ನಾಟಕ ಸರಿಯಾಗಿದೆ ಎನ್ನುವುದಾದರೆ ಪರ ವಿರೋಧ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ನಾನು ರಂಗಾಯಣದ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ.‌ ನನ್ನ ಅವಧಿಯಲ್ಲಿ ಮುಖ್ಯಮಂತ್ರಿಗಳು ನಾಟಕ ನೋಡಲು ರಂಗಾಯಣಕ್ಕೆ ಬಂದಿದ್ದರು. ಆಗ ಪೊಲೀಸರು ಭದ್ರತೆ ದೃಷ್ಟಿಯಿಂದ ರಂಗಾಯಣದ ಆವರಣದಲ್ಲಿ ಬೀಡುಬಿಟ್ಟಿದ್ದರು. ಆಗ ಇದು ಸಾಂಸ್ಕೃತಿಕ ಲೋಕ ಇಲ್ಲಿ ಪೊಲೀಸರ ಅಗತ್ಯವಿಲ್ಲ ಎಂದಾಗ ಅವರು ಪೊಲೀಸರನ್ನು ಅಲ್ಲಿಂದ ವಾಪಸ್ ಕರೆದುಕೊಂಡು ಹೋದರು. ರಂಗಾಯಣದಂತಹ ಪವಿತ್ರ ಭೂಮಿಯಲ್ಲಿ ಪ್ರೇಕ್ಷಕರಿಗೆ  ಪೊಲೀಸರನ್ನು ಜೊತೆಗೆ ಇಟ್ಟು ನಾಟಕ ನೋಡಿಸುವ ದುರಂತ ನಿಜಕ್ಕೂ ನಾಚಿಕೆಗೇಡು.‌ ಇಂತಹ ವ್ಯವಸ್ಥೆಯನ್ನು ರಂಗಾಯಣಕ್ಕೂ ಎಳೆದು ತಂದರಲ್ಲ ಎಂದು ನೋವಾಗುತ್ತಿದೆ ಎಂದರು.

share
Next Story
X