Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದುಬೈಯಿಂದ ಮಂಗಳೂರಿಗೆ ಬಂದಿಳಿದ ಸುಮಾರು...

ದುಬೈಯಿಂದ ಮಂಗಳೂರಿಗೆ ಬಂದಿಳಿದ ಸುಮಾರು 90 ಪ್ರಯಾಣಿಕರ ಲಗೇಜ್‌ ವಿಮಾನ ನಿಲ್ದಾಣದಲ್ಲಿ 'ನಾಪತ್ತೆ': ಆರೋಪ

24 Nov 2022 5:01 PM IST
share
ದುಬೈಯಿಂದ ಮಂಗಳೂರಿಗೆ ಬಂದಿಳಿದ ಸುಮಾರು 90 ಪ್ರಯಾಣಿಕರ ಲಗೇಜ್‌ ವಿಮಾನ ನಿಲ್ದಾಣದಲ್ಲಿ ನಾಪತ್ತೆ: ಆರೋಪ

ಮಂಗಳೂರು(Mangaluru): ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru International Airport) ಮಂಗಳವಾರ ಆಗಮಿಸಿದ ಸುಮಾರು 90 ಮಂದಿ ಪ್ರಯಾಣಿಕರು ತಮ್ಮ ಲಗೇಜ್ 'ನಾಪತ್ತೆ'ಯಾಗಿದೆ ಎಂದು ದೂರಿದ್ದಾರೆ.

ಸ್ಪೈಸ್‌ಜೆಟ್ (SpiceJet) ವಿಮಾನದಲ್ಲಿ ಬಂದ ಪ್ರಯಾಣಿಕರಿಗೆ ನಂತರ ಅವರ ಲಗೇಜ್‌ಗಳು ಸರಕುಗಳ ಮೂಲಕ ಒಂದೆರಡು ದಿನಗಳ ನಂತರ ಬರುತ್ತವೆ ಅದನ್ನು ಅವರ ಮನೆಗಳಿಗೆ ತಲುಪಿಸಲಾಗುವುದು ಎಂದು ಏರ್‌ಲೈನ್‌ ತಿಳಿಸಿತ್ತು. ಹಾಗೂ ಈ ಪ್ರಕ್ರಿಯೆಗಳಿಗಾಗಿ ಮಂಗಳೂರು ವಿಮಾನ ನಿಲ್ದಾಣದ ಏರ್‌ಲೈನ್ ಕೌಂಟರ್‌ನಲ್ಲಿ ಫಾರ್ಮ್‌ಗಳು ಮತ್ತು ವಿಳಾಸಗಳನ್ನು ಭರ್ತಿ ಮಾಡಲು ಅವರಿಗೆ ಸೂಚಿಸಲಾಗಿತ್ತು ಎನ್ನಲಾಗಿದೆ.

ಆದರೆ ಅಂತಹ ಯಾವುದೇ ವ್ಯವಸ್ಥೆಗಳ ಬಗ್ಗೆ ಮುಂಚಿತವಾಗಿ ನಮಗೆ ತಿಳಿಸಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. "ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ನಂತರವೇ ನಮಗೆ ಈ ಬಗ್ಗೆ ತಿಳಿಸಲಾಯಿತು." ಎಂದು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ‘ವಾರ್ತಾ ಭಾರತಿ’ಗೆ ತಿಳಿಸಿದ್ದಾರೆ.

"ವಿಮಾನವು ದುಬೈನಿಂದ ಸ್ಥಳೀಯ ಸಮಯ 4:20 ಕ್ಕೆ ಟೇಕ್ ಆಫ್ ಆಗಬೇಕಿತ್ತು ಆದರೆ ನಿಗದಿತ ಸಮಯಕ್ಕಿಂತ ಮೂರು ಗಂಟೆಗಳ ನಂತರ ಅದು ಟೇಕ್ ಆಫ್ ಆಗಿತ್ತು. ಟೇಕ್ ಆಫ್ ಆಗುವ ಮೊದಲು ನಮ್ಮನ್ನು ಸುಮಾರು ಎರಡು ಗಂಟೆಗಳ ಕಾಲ ವಿಮಾನದಲ್ಲಿ ಕಾಯುವಂತೆ ಮಾಡಲಾಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು ಮತ್ತು ಅವರಲ್ಲಿ 90 ಮಂದಿ ಮಾತ್ರ ತಮ್ಮ ಲಗೇಜ್ ಅನ್ನು ವಿಮಾನದಲ್ಲಿ ಲೋಡ್ ಮಾಡಿದರು. ಇತರರ ಲಗೇಜ್ ಅನ್ನು ಲೋಡ್ ಮಾಡಲಾಗಿಲ್ಲ ಮತ್ತು ಬದಲಿಗೆ 2-3 ದಿನಗಳ ನಂತರ ಅವರ ಲಗೇಜ್ ಅನ್ನು ಪಡೆಯುವುದಾಗಿ ತಿಳಿಸಲಾಯಿತು” ಎಂದು ವಿಮಾನದಲ್ಲಿದ್ದ ಭಟ್ಕಳ ನಿವಾಸಿ ಸೈಯದ್ ಶಾದಾಬ್ ತಿಳಿಸಿದ್ದಾರೆ.

 ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರು ಲಗೇಜ್ ಶುಲ್ಕ ಸೇರಿದಂತೆ ಸಂಪೂರ್ಣ ಶುಲ್ಕ ಮತ್ತು ಟಿಕೆಟ್ ದರವನ್ನು ಭರಿಸಿದ್ದರೂ ತಮ್ಮ ಲಗೇಜ್ ಅನ್ನು ಸರಕು ಸಾಗಣೆಯ ವಿಮಾನಗಳಲ್ಲಿ ತುಂಬಿಸಿದ್ದಕ್ಕಾಗಿ ವಿಮಾನಯಾನ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಸಾಮಾನು ಸರಂಜಾಮುಗಳು ಖಾದ್ಯ ಮತ್ತು ಹಾಳಾಗುವ ವಸ್ತುಗಳನ್ನು ಹೊಂದಿದ್ದು ಅದು 2-3 ದಿನಗಳ ನಂತರ ಬಂದರೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹಲವರು ಹೇಳಿಕೊಂಡಿದ್ದಾರೆ. ಅಲ್ಲದೆ, ತಮ್ಮ ಟಿಕೆಟ್ ದರವನ್ನು ಮರುಪಾವತಿಸುವಂತೆ ಅವರು ಒತ್ತಾಯಿಸಿದ್ದಾರೆ. 

ಈ ವಿಷಯದ ಬಗ್ಗೆ ಅಧಿಕೃತ ಪ್ರತಿಕ್ರಿಯೆಗಾಗಿ ವಾರ್ತಾ ಭಾರತಿ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ಪ್ರಯತ್ನಿಸಿದೆ ಆದರೆ ವಿಮಾನಯಾನ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. (ಪ್ರತಿಕ್ರಿಯೆ ಬಂದ ತಕ್ಷಣ ಅದನ್ನು ಇಲ್ಲಿ ಸೇರಿಸಲಾಗುವುದು)

ಇದನ್ನೂ ಓದಿ: ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಮನ್ಸ್ ನೀಡಿದ ಕೋರ್ಟ್

share
Next Story
X