ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
![ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ](https://www.varthabharati.in/sites/default/files/images/articles/2022/11/24/357575-1669299711.jpg)
ಮಡಿಕೇರಿ ನ.24 : ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಂಟಿಕೊಪ್ಪದ ಎಮ್ಮೆಗುಂಡಿ ಸಮೀಪ ವರದಿಯಾಗಿದೆ.
ಸುಂಟಿಕೊಪ್ಪದ ಉಲುಗುಲಿ ರಸ್ತೆಯ ನಿವಾಸಿ, ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಧು(36) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
'ನನ್ನ ಸಾವಿಗೆ ನಾನೇ ಕಾರಣ' ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story