Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯಮಂತ್ರಿ ಕಚೇರಿಯಿಂದ BJP...

ಮುಖ್ಯಮಂತ್ರಿ ಕಚೇರಿಯಿಂದ BJP ಕಾರ್ಯಕರ್ತರಿಗೆ ವೇತನ ಪಾವತಿ: ಸುಧೀರ್ ಕುಮಾರ್ ಮುರೊಳ್ಳಿ ಆರೋಪ

ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‍ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಕ್ತಾರ

24 Nov 2022 8:31 PM IST
share
ಮುಖ್ಯಮಂತ್ರಿ ಕಚೇರಿಯಿಂದ BJP ಕಾರ್ಯಕರ್ತರಿಗೆ ವೇತನ ಪಾವತಿ: ಸುಧೀರ್ ಕುಮಾರ್ ಮುರೊಳ್ಳಿ ಆರೋಪ
ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‍ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಕ್ತಾರ

ಕೊಪ್ಪ, ನ.24: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಆಪ್ತರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಸರಕಾರಿ ವೇತನ ಕೊಡಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಈ ಸಂಬಂಧ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ.

ಗುರುವಾರ ಪಟ್ಟಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಹಾಗೂ ಹಾಲಿ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಅವರು ತಮ್ಮ ಸರಕಾರಿ ಕಚೇರಿಯನ್ನು ದುರುಪಯೋಪಡಿಸಿಕೊಂಡಿದ್ದು, ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಿಎಂ ಕಚೇರಿಯಿಂದ ಸಂಬಳ ಕೊಡಿಸುತ್ತಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ.

ಇತ್ತೀಚೆಗೆ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರು ಅಕ್ರಮವಾಗಿ ಜಮೀನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಾನಂದ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಈ ವ್ಯಕ್ತಿ ಶಾಸಕ ಜೀವರಾಜ್ ಅವರ ಕಾರು ಚಾಲಕನಾಗಿದ್ದು, ಜೀವರಾಜ್ ಅವರ ಕಚೇರಿ ಸಿಬ್ಬಂದಿಯಾಗಿ ಸರಕಾರಿ ಸಂಬಳವನ್ನೂ ತೆಗೆದುಕೊಳ್ಳುತ್ತಿದ್ದಾರೆ ಎಂದ ಅವರು, ಶಾಸಕ ರಾಜೇಗೌಡ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲು ಜೀವರಾಜ್ ಅವರು ತಮ್ಮ ಕಾರು ಚಾಲಕನನ್ನು ಬಳಸಿಕೊಂಡಿದ್ದಾರೆ. ಶಾಸಕ ರಾಜೇಗೌಡ ಅವರು ವಿಜಯಾನಂದರಿಗೆ ಆಮಿಷವೊಡ್ಡಿ ದೂರು ಕೊಡಿಸಿದ್ದಾರೆ. ಜೀವರಾಜ್ ಅವರ ಮಗ ಬೆಂಗಳೂರಿನಲ್ಲೇ ಇದ್ದು ಆತನ ಬಳಿಯಿಂದಲೇ ದೂರು ಕೊಡಿಸುವ ಧೈರ್ಯ ಏಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದರು.

ವಿಜಯಾನಂದ ಅವರು ಜೀವರಾಜ್ ಕಚೇರಿ ಸಿಬ್ಬಂದಿ ಮಾತ್ರವಲ್ಲದೇ ಕೊಪ್ಪ ತಾಲೂಕಿನ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯೂ ಆಗಿದ್ದಾರೆ. ಇಂತಹ ವ್ಯಕ್ತಿಯನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಸರಕಾರಿ ಹುದ್ದೆ ಕೊಟ್ಟು ಸಿಎಂ ಕಚೇರಿಯಿಂದ ಸಂಬಳ ಕೊಡಿಸಿರುವುದು ದಾಖಲೆಗಳಿಂದ ತಿಳಿದು ಬಂದಿದೆ. ಈ ಮೂಲಕ ಜೀವರಾಜ್ ಅವರು ತಮ್ಮ ಕಚೇರಿ ಸಿಬ್ಬಂದಿಯನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಜೀವರಾಜ್ ಆಪ್ತ ವಿಜಯಾನಂದ್ ಮಾತ್ರವಲ್ಲದೇ ಕೊಪ್ಪ ತಾಲೂಕಿನ ಕೆಲ ಗ್ರಾಪಂ ಸದಸ್ಯರಿಯನ್ನೂ ತನ್ನ ಕಚೇರಿ ಸಿಬ್ಬಂದಿ ಎಂಬಂತೆ ದಾಖಲೆಗಳಲ್ಲಿ ತೋರಿಸಿ ಅವರಿಗೂ ಸಹ ಸಿಎಂ ಕಚೇರಿಯಿಂದ ಸಂಬಳ ಕೊಡಿಸಿದ್ದಾರೆಂದು ಆರೋಪಿಸಿದ ಸುಧೀರ್‍ಕುಮಾರ್, ಪುಣ್ಯಪಾಲ್ ಎಂಬ ಬಿಜೆಪಿಯ ಬಾಡಿಗೆ ಭಾಷಣಗಾನಿಗೂ ಮಾಜಿ ಶಾಸಕ ಜೀವರಾಜ್ 31,500 ರೂ. ಮಸಿಕ ಸಂಬಳ ನಿಗದಿ ಮಾಡಿರುವುದು ದಾಖಲೆಗಳಲ್ಲಿದೆ. ಅಲ್ಲದೇ ಕೊಪ್ಪ ಗ್ರಾಮಾಂತರ ವಿಭಾಗದ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯೆ ಹಾಗೂ ಕೊಪ್ಪ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ, ಬಿಜೆಪಿ ಯುವಮೋರ್ಚಾದ ಶೃತಿ ಎಂ.ಸಿ ಎಂಬವರಿಗೂ ಕೂಡ ಆಪ್ತ ಸಹಾಯಕಿ ಎಂದು ತೋರಿಸಿ 31, 500 ರೂ. ಮಾಸಿಕ ಸಂಬಳ ನೀಡಲು ಜೀವರಾಜ್ ಸಹಕರಿಸಿದ್ದಾರೆ. ಅಲ್ಲದೇ ಕೊಪ್ಪ ಪಪಂ ಮಾಜಿ ಸದಸ್ಯೆ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ವಾಣಿ ಸತೀಶ್ ಹೆಗ್ಡೆ ಎಂಬವರಿಗೂ 17,500 ರೂ. ಮಾಸಿಕ ಸರಕಾರಿ ಸಂಬಳ ನಿಗದಿ ಮಾಡಿದ್ದಾರೆ ಎಂದು ಸುಧೀರ್ ಕುಮಾರ್ ದಾಖಲೆಗಳ ಸಹಿತ ಆರೋಪಿಸಿ ವಾಗ್ದಾಳಿ ನಡೆಸಿದರು.

ಕೊಪ್ಪ ತಾಲೂಕಿನಲ್ಲಿ ಸಾಕಷ್ಟು ನಿರುದ್ಯೋಗಿಗಳಿದ್ದಾರೆ. ಆದರೂ ಅವರಿಗೆ ಕೆಲಸ ಕೊಡಿಸದೇ ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡುವ ಬಿಜೆಪಿ ಕಾರ್ಯಕರ್ತರಿಗೆ ತಮ್ಮ ಕಚೇರಿಯಲ್ಲಿ ಕೆಲಸ ಕೊಡಿಸಿರುವುದು ಅಧಿಕಾರ ದುರುಪಯೋಗವಲ್ಲದೇ ಮತ್ತೇನೆಂದು ಪ್ರಶ್ನಿಸಿದ ಅವರು, ತಮ್ಮ ಕಚೇರಿ ಸಿಬ್ಬಂದಿಯನ್ನೇ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಮಾಜಿ ಶಾಸಕ, ಹಾಲಿ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿ ಕಾರ್ಯಕರ್ತರಿಗೆ ಸಿಎಂ ಕಚೇರಿಯಿಂದಲೇ ಸಂಬಳ ನೀಡುವಂತಹ ಭ್ರಷ್ಟಾಚಾರ ಮಾಡಿದ್ದಾರೆ. ಈ ಸಂಬಂಧ ದಾಖಲೆಗಳಿದ್ದು, ಸಿಎಂ ಬೊಮ್ಮಾಯಿ ಅವರಿಗೆ ತಾಕತ್, ಧಮ್ ಇದ್ದಲ್ಲಿ ತಮ್ಮ ಆಪ್ತ ಕಾರ್ಯದರ್ಶಿ ಜೀವರಾಜ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸವಾಲು ಹಾಕಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕುಕ್ಕುಡಿಗೆ ರವೀಂದ್ರ, ಅನ್ನಪೂರ್ಣ ನರೇಶ್, ಬರ್ಕತ್ ಆಲಿ, ಹೆಚ್.ಎಸ್ ಇನೇಶ್, ನುಗ್ಗಿ ಮಂಜುನಾಥ್, ನವೀನ್ ಮಾವಿನಕಟ್ಟೆ ಮುಂತಾದವರಿದ್ದರು.

----------------------------------------------------

''ಶಾಸಕ ರಾಜೇಗೌಡ ಅವರ ಮೇಲೆ ಜೀವರಾಜ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದ ಸಂಗತಿ. ರಾಜೇಗೌಡ ಅವರು ಆಸ್ತಿ ಖರೀದಿ, ತೆರಿಗೆ ವಂಚನೆ ಮಾಡಿದ್ದಾರೆಂಬ ಆರೋಪ ಆಧಾರರಹಿತ ಆರೋಪವಾಗಿದೆ. ಶಾಸಕ ರಾಜೇಗೌಡ ಅವರು ಯಾವುದೇ ಅಕ್ರಮ ಎಸಗಿಲ್ಲ. ಕ್ರಮಬದ್ಧವಾಗಿಯೇ ಆಸ್ತಿ ಖರೀದಿ ಮಾಡಿದ್ದು, ಈ ಸಂಬಂಧ ಎಲ್ಲ ದಾಖಲೆಗಳೂ ಅವರ ಬಳಿ ಇವೆ.''

- ಸುಧೀರ್ ಕುಮಾರ್ ಮುರೊಳ್ಳಿ
 

share
Next Story
X