Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಸಾಂಕ್ರಾಮಿಕ ರೋಗ ನಿಯಂತ್ರಣ ತರಬೇತಿ...

ಅಸಾಂಕ್ರಾಮಿಕ ರೋಗ ನಿಯಂತ್ರಣ ತರಬೇತಿ ಶಿಬಿರ

24 Nov 2022 8:54 PM IST
share
ಅಸಾಂಕ್ರಾಮಿಕ ರೋಗ ನಿಯಂತ್ರಣ ತರಬೇತಿ ಶಿಬಿರ

ಮಣಿಪಾಲ : ಜಿಲ್ಲಾ ಸರ್ವೇಕ್ಷಣಾ ಘಟಕ, ಅಸಾಂಕ್ರಾಮಿಕ ರೋಗ ತಡೆ ಘಟಕ ಹಾಗೂ ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಉಡುಪಿ ಜಿಲ್ಲೆಯ ಅಸಾಂಕ್ರಾಮಿಕ ರೋಗಗಲ ತಡೆಗಟ್ಟುವ ಹಾಗೂ ನಿಯಂತ್ರಣದ ಕುರಿತಂತೆ ಮೂರು ದಿನಗಳ ಕಾರ್ಯಾಗಾರವೊಂದು ಬುಧವಾರ ಮಾಹೆಯ ಇಂಟರ್ಯಾಕ್ಟ್ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಸಾಂಕ್ರಾಮಿಕ ಕಾಯಿಲೆಗಳ ಅಪಾಯಕಾರಿ ಅಂಶ ಹಾಗೂ ಕಾಯಿಲೆ ನಿರ್ವಹಣೆ ಬಗ್ಗೆ ಪ್ರತಿ ಮನೆ ಮನೆಗೂ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕು ಎಂದರು. 

ಕೆಎಂಸಿಯ ಡೀನ್ ಡಾ. ಶರತ್ ಕೆ ರಾವ್ ಮಾತನಾಡಿ ಸಮಾಜಕ್ಕೆ ಹತ್ತಿರ ಇರುವ  ವೈದ್ಯಕೀಯ ತಂಡಗಳಿಂದ ಈ ಅಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಾದ್ಯ. ರೋಗವನ್ನು ಶೀಘ್ರ ಪತ್ತೆ ಹಚ್ಚಿ ನಿರ್ವಹಣೆ ಬಗ್ಗೆ ಕಳಕಳಿ ಅಗತ್ಯ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಶಾಸ್ತ್ರಿ ಮಾತನಾಡಿ ತರಬೇತಿ ಹೊಂದಿದ ಸೇವೆಯು ಪ್ರತಿಯೊಬ್ಬ ನಾಗರಿಕನಿಗೂ ನಗು ಮುಖದೊಂದಿಗೆ ಸಿಗುವಂತಾಗಲಿ ಎಂದು ಹಾರೈಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾತನಾಡಿ, ಸಮುದಾಯ ಆರೋಗ್ಯ ವಿಭಾಗ ಮತ್ತು ಸರಕಾರದ ಆರೋಗ್ಯ ಇಲಾಖೆಗಳ ನಡುವಿನ ಪರಸ್ಪರ ಸಹಕಾರದಿಂದ ಈ ಆಸಾಂಕ್ರಾಮಿಕ ರೋಗವನ್ನು ಖಂಡಿತವಾಗಿಯೂ ನಿಯಂತ್ರಿಸಬಹುದು ಎಂದರು.

ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಹಾಗೂ ಈ ಶಿಬಿರದ ಸಂಯೋಜಕ ಡಾ.ಅಶ್ವಿನಿ ಕುಮಾರ್ ಮಾತನಾಡಿ, ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಸಿರುವ 300 ಕ್ಕೂ ಅಧಿಕ ತರಬೇತಿ ಹೊಂದಿದ ವೈದ್ಯರು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು, ಪ್ರಯೋಗ ತಂತ್ರಜ್ಞರು, ಫಿಸಿಯೋಥೆರಪಿಸ್ಟ್‌ಗಳು, ಆಪ್ತಸಮಾಲೋಚಕರು ತಂಡತಂಡಗಳಲ್ಲಿ ಕೆಲಸ ಮಾಡಿ, ಜಿಲ್ಲೆಯಲ್ಲಿ  ಹೆಚ್ಚುತ್ತಿರುವ ಅಸಾಂಕ್ರಾಮಿಕ ಕಾಯಿಲೆಗಳಾದ ಕ್ಯಾನ್ಸರ್, ಹೃದಯ, ರಕ್ತನಾಳ ಸಂಬಂಧಿ ಕಾಯಿಲೆಗಳು, ಡಯಾಬಿಟಿಸ್‌ನ್ನು  ನಿಯಂತ್ರಣಕ್ಕೆ ತರಲು ಸಾದ್ಯ ಎಂದು ಒತ್ತಿ ಹೇಳಿದರು.

ಸಮುದಾಯ ವೈದ್ಯಕೀಯ ವಿಭಾಗದ ಡಾ.ರಂಜಿತಾ ಶೆಟ್ಟಿ ವಂದಿಸಿದರೆ, ಡಾ.ಅಫ್ರೋಜ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಸರ್ವೆಕ್ಷಣಾ ಕಚೇರಿಯ ಡಾ.ಅಂಜಲಿ ಕಾರ್ಯಕ್ರಮ ಸಂಯೋಜಿಸಿದರು.

share
Next Story
X