Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಸಿಇಆರ್‌ಟಿ ಪಠ್ಯದಲ್ಲಿ ಹಿಂಸಾತ್ಮಕ...

ಎನ್‌ಸಿಇಆರ್‌ಟಿ ಪಠ್ಯದಲ್ಲಿ ಹಿಂಸಾತ್ಮಕ ಪೌರುಷಕ್ಕೆ ಸಮರ್ಥನೆ: ದಿಲ್ಲಿ ಮಕ್ಕಳ ಹಕ್ಕುಗಳ ಆಯೋಗ ಆರೋಪ

24 Nov 2022 10:30 PM IST
share
ಎನ್‌ಸಿಇಆರ್‌ಟಿ ಪಠ್ಯದಲ್ಲಿ ಹಿಂಸಾತ್ಮಕ ಪೌರುಷಕ್ಕೆ ಸಮರ್ಥನೆ: ದಿಲ್ಲಿ ಮಕ್ಕಳ ಹಕ್ಕುಗಳ ಆಯೋಗ ಆರೋಪ

ಹೊಸದಿಲ್ಲಿ,: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ) ಪಠ್ಯಪುಸ್ತಕಗಳಲ್ಲೊಂದರಲ್ಲಿರುವ ‘ಹಿಂಸಾತ್ಮಕ ಪೌರುಷ’('Violent Manhood')ವನ್ನು ಸಮರ್ಥಿಸುವ ಅಧ್ಯಾಯವನ್ನು ತೆಗೆದುಹಾಕಬೇಕೆಂದು ದಿಲ್ಲಿ ಮಕ್ಕಳ ಹಕ್ಕು(Delhi Children's Rights)ಗಳ ಆಯೋಗವು ಗುರುವಾರ ಆಗ್ರಹಿಸಿದೆ.

 9ನೇ ತರಗತಿಯ ಎನ್‌ಸಿಆರ್‌ಟಿಇನ ಇಂಗ್ಲೀಷ್ ಪಠ್ಯಪುಸ್ತಕದಲ್ಲಿರುವ ‘ ದಿ ಲಿಟಲ್ ಗರ್ಲ್’('The Little Girl') ಪಾಠದಲ್ಲಿ ಮಹಿಳೆಯರನ್ನು ರೂಢಿಗತ ಮನಸ್ಥಿತಿಯೊಂದಿಗೆ ಚಿತ್ರಿಸಲಾಗಿದೆ ಹಾಗೂ ಗೃಹ ಹಿಂಸೆಯನ್ನು ಒಪ್ಪಿಕೊಳ್ಳುವಂತೆ ಮಕ್ಕಳಿಗೆ ಬೋಧಿಸುತ್ತದೆ ಎಂದು ದಿಲ್ಲಿ ಮುಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಅನುರಾಗ ಕುಂಡು ಎನ್‌ಸಿಇಆರ್‌ಟಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ದಿ ಲಿಟ್ಲ್ ಗರ್ಲ್ ಪಾಠವು ತನ್ನ ತಂದೆಯ ನಿರಂತರವಾಗಿ ಭಯಪಡುವ ಬಾಲಕಿ ಕೆಝಿಯಾ(Keziah)ಳ ಕುರಿತಾದ ಕಥಾವಸ್ತುವನ್ನು ಹೊಂದಿದೆ ಎಂದು ಕುಂಡು ಪತ್ರದಲ್ಲಿ ತಿಳಿಸಿದ್ದಾರೆ.

 ಬಾಲಕಿಯ ತಂದೆಯು ಕೋಪಿಷ್ಠ, ದೈಹಿಕವಾಗಿ ಬಲಿಷ್ಠ, ಹಿಂಸಾಪ್ರವೃತ್ತಿಯವ ಹಾಗೂ ದಂಡಿಸುವ ಸ್ವಭಾವವುಳ್ಳವ ಎಂದು ಪಾಠದಲ್ಲಿ ಉಲ್ಲೇಖಿಸಲಾಗಿದೆ ಎಂದು ಆಕೆ ಹೇಳಿದ್ದಾರೆ.ಈ ಬಗ್ಗೆ ಆಯೋಗವು ಹಲವಾರು ಲಿಂಗ ಸಮಾನತೆ ತಜ್ಞರನ್ನು ಸಮಾಲೋಚಿಸಿದ್ದು, ಅವರು ಈ ಅಧ್ಯಾಯವು ಅತ್ಯಂತ ಸಮಸ್ಯೆಯಿಂದ ಕೂಡಿದ್ದಾಗಿದೆಯೆಂದು ಅಭಿಪ್ರಾಯಿಸಿರುವುದಾಗಿ ಕುಂಡು ತಿಳಿಸಿದ್ದಾರೆ.

ಬಾಲಕಿಯ ಕೆಝಿಯಾಳ ಅಜ್ಜಿ ಹಾಗೂ ತಾಯಿ ಅವರು ಸೌಮ್ಯ, ವಿನಮ್ರ ಸ್ವಭಾವದವರು ಹಾಗೂ ದೌರ್ಜನ್ಯ ಹಾಗೂ ಪುರುಷಪ್ರಾಧಾನ್ಯಕ್ಕೆ ಅವಕಾಶ ಮಾಡಿಕೊಡುವವರಾಗಿದ್ದಾರೆ. ತಂದೆಯ ದೌರ್ಜನ್ಯದ ಹೊರತಾಗಿಯೂ ಆತನ ಸೇವೆ ಮಾಡುವ ಮೂಲಕ ಒಳ್ಳೆಯ ಬಾಲಕಿಯಾಗಿರಬೇಕೆಂದು ಅವರು ಬೋಧಿಸುತ್ತಾರೆ . ತಾಯಿಯು ಮನೆಯಲ್ಲಿ ವಿಶ್ರಾಂತಿ ಪಡೆಯುವುದೇ ಇಲ್ಲ, ಮನೆಗೆಲಸಗಳನ್ನು ಮಾಡುತ್ತಲೇ ಇರುವವಳು ಎಂಬಂತೆ ಪಾಠದಲ್ಲಿ ಬಿಂಬಿಸಲಾಗಿದೆ’’ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ಮಕ್ಕಳನ್ನು ಅತ್ಯಂತ ಪ್ರಗತಿರವಾದ ಚಿಂತನೆಗಳನ್ನು ಪರಿಚಯಿಸಬೇಕಾಗಿದೆ ಎಂದವರು ಪ್ರತಿಪಾದಿಸಿದ್ದಾರೆ.

share
Next Story
X