Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಟಿ.ಡಿ.ರಾಜೇಗೌಡ ವಿರುದ್ದ ಅಕ್ರಮ...

ಶಾಸಕ ಟಿ.ಡಿ.ರಾಜೇಗೌಡ ವಿರುದ್ದ ಅಕ್ರಮ ಆಸ್ತಿ ಖರೀದಿ ಆರೋಪ: 'ಕೆಫೆ ಕಾಫಿ ಡೇ' ಮಾಳವಿಕಾ ಹೆಗ್ಡೆ ಸ್ಪಷ್ಟನೆ ಏನು?

25 Nov 2022 5:40 PM IST
share
ಶಾಸಕ ಟಿ.ಡಿ.ರಾಜೇಗೌಡ ವಿರುದ್ದ ಅಕ್ರಮ ಆಸ್ತಿ ಖರೀದಿ ಆರೋಪ: ಕೆಫೆ ಕಾಫಿ ಡೇ ಮಾಳವಿಕಾ ಹೆಗ್ಡೆ ಸ್ಪಷ್ಟನೆ ಏನು?

ಬೆಂಗಳೂರು, ನ. 25: ‘ಬ್ಯಾಂಕಿನ ಸಾಲ ತೀರಿಸಲು ಆಸ್ತಿ ಮಾರಾಟ ಮಾಡುತ್ತಿದ್ದು, ಆ ಪೈಕಿ ನಮ್ಮ ಒಡೆತನದ ಸ್ಥಿರ ಆಸ್ತಿಯನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಖರೀದಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಮೋಸ ಅಥವಾ ಅವ್ಯವಹಾರದ ಪ್ರಶ್ನೆಯೇ ಇಲ್ಲ' ಎಂದು 'ಕೆಫೆ ಕಾಫಿ ಡೇ' ಮಾಲಕ ದಿ. ಸಿದ್ದಾರ್ಥ ಹೆಗ್ಡೆ ಅವರ ಪತ್ನಿ ಮಾಳವಿಕಾ ಹೆಗ್ಡೆ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟನೆಯೊಂದನ್ನು ನೀಡಿರುವ ಅವರು, ‘ಅಕ್ರಮವಾಗಿ ಆಸ್ತಿ ಖರೀದಿ ಮಾಡಿದ್ದಾರೆಂದು ಶಾಸಕ ರಾಜೇಗೌಡ ಅವರ ವಿರುದ್ಧದ ಆರೋಪ ಸತ್ಯಕ್ಕೆ ದೂರ. ನಮ್ಮ ಹಾಗೂ ರಾಜೇಗೌಡರ ಕುಟುಂಬದ ಬಾಂಧವ್ಯ ನಾಲ್ಕು ದಶಕಗಳಿಂದ ಇದೆ. ಆದುದರಿಂದ ಈ ವ್ಯವಹಾರದಲ್ಲಿ ಯಾವುದೇ ರೀತಿಯ ಮೋಸಕ್ಕೆ ಅವಕಾಶವಿಲ್ಲ’ ಎಂದು ವಿವರಣೆ ನೀಡಿದ್ದಾರೆ.

ಶಾಸಕ ಟಿ.ಡಿ.ರಾಜೇಗೌಡ ವಿರುದ್ಧದ ಆರೋಪ ಏನು?:  ಜಿಲ್ಲೆಯ ಶೃಂಗೇರಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ಕಳೆದ ಚುನಾವಣೆ ಸಂದರ್ಭ ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಕಡಿಮೆ ಆದಾಯ ಘೋಷಿಸಿದ್ದು, ಸದ್ಯ ಅವರು ಸುಮಾರು 200 ಕೋ. ರೂ. ಮೌಲ್ಯದ ಜಮೀನು ಖರೀದಿಸಿದ್ದಾರೆ. ಶಾಸಕ ರಾಜೇಗೌಡ ಅವರು ತಮ್ಮ ಅಧಿಕಾರವಧಿಯಲ್ಲಿ ಕ್ಷೇತ್ರದಾದ್ಯಂತ ವಿವಿಧ ಸರಕಾರಿ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿ ಈ ಜಮೀನು ಖರೀದಿಸಿರುವ ಶಂಕೆ ಇದೆ. ಈ ಅಸ್ತಿ ಖರೀದಿ ಸಂಬಂಧ ಲೋಕಾಯುಕ್ತ ಸಂಸ್ಥೆಗೆ ಕೊಪ್ಪ ತಾಲೂಕಿನ ವಿಜಯಾನಂದ ಎಂಬವರು ದೂರು ನೀಡಿದ್ದು, ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರ ವಿರುದ್ಧ ಕೂಡಲೇ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ಆರೋಪ ಮಾಡಿದ್ದರು. 

ಇದೇ ವಿಚಾರಕ್ಕೆ ಸಂಬಂಧಿಸಿ ರಾಜೇಗೌಡರ ವಿರುದ್ಧ ವಕೀಲರಾದ ವಿಜಯಾನಂದ ಎಂಬುವವರು ಲೋಕಾಯುಕ್ತಕ್ಕೆ ದೂರನ್ನೂ ನೀಡಿದ್ದರು.

ಇದೀಗ ಕಾಫಿ ಡೇ ಮಾಲಕ ದಿ. ಸಿದ್ದಾರ್ಥ ಹೆಗ್ಡೆ ಅವರ ಪತ್ನಿ ಮಾಳವಿಕಾ ಹೆಗ್ಡೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 

share
Next Story
X