Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೊಂಡಗುಂಡಿ ರಸ್ತೆಯಿಂದ...

ಹೊಂಡಗುಂಡಿ ರಸ್ತೆಯಿಂದ ಅಂಬ್ಯುಲೆನ್ಸ್‌ನಲ್ಲಿಯೇ ಹೆತ್ತ ಮಹಿಳೆ !

ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯ ಅವ್ಯವಸ್ಥೆ ವಿರೋಧಿಸಿ ಅಣಕು ಪ್ರತಿಭಟನೆ

25 Nov 2022 6:36 PM IST
share
ಹೊಂಡಗುಂಡಿ ರಸ್ತೆಯಿಂದ ಅಂಬ್ಯುಲೆನ್ಸ್‌ನಲ್ಲಿಯೇ ಹೆತ್ತ ಮಹಿಳೆ !
ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯ ಅವ್ಯವಸ್ಥೆ ವಿರೋಧಿಸಿ ಅಣಕು ಪ್ರತಿಭಟನೆ

ಉಡುಪಿ : ಹೊಂಡ ಗುಂಡಿ ರಸ್ತೆಯಲ್ಲಿ ಎದ್ದು ಬಿದ್ದು ಬಂದ ಅಂಬುಲೆನ್ಸ್‌ನಲ್ಲಿ ಗರ್ಭಿಣಿ ಮಹಿಳೆ ಹೆರಿಗೆ ನೋವು ತಾಳಲಾರದೆ ಐವರು ಮಕ್ಕಳಿಗೆ ಜನ್ಮ ನೀಡಿದರು...
ಇದು ಉಡುಪಿ ಜಿಲ್ಲಾ ನಾಗರಿಕ ಸಮಿತಿ ವತಿಯಿಂದ ಇಂದ್ರಾಳಿ ಸೇತುವೆ ಯಿಂದ ರೈಲ್ವೆ ನಿಲ್ದಾಣವರೆಗಿನ ಜಾರ್ಜ್ ಫೆರ್ನಾಂಡಿಸ್ ರಸ್ತೆಯ ಅವ್ಯವಸ್ಥೆ ವಿರೋಧಿಸಿ ವಿನೂತನ ರೀತಿಯಲ್ಲಿ ನಡೆಸಿದ ಅಣಕು ಪ್ರತಿಭಟನೆ.

ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದ ಅಂಬ್ಯುಲೆನ್ಸ್ ಹೊಂಡ ಗುಂಡಿಗಳಿಗೆ ಬಿದ್ದ ಪರಿಣಾಮ ಅದರಲ್ಲಿದ್ದ ಗರ್ಭಿಣಿ ಅಂಬ್ಯುಲೆನ್ಸ್‌ನಲ್ಲಿಯೇ ಐದು ಮಕ್ಕಳಿಗೆ ಜನ್ಮ ನೀಡುತ್ತಾರೆ. ಈ ರೀತಿಯಾಗಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯ ಅವ್ಯವಸ್ಥೆಯನ್ನು ಜನರ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ರಾಜು ಗರ್ಭಿಣಿಯಾಗಿ ಮತ್ತು ಹರೀಶ್ ಗಭಿರ್ಣಿಯ ಮನೆಯವ ರಾಗಿ ಅಣಕು ಪ್ರದರ್ಶನದಲ್ಲಿ ನಟಿಸಿದರು. ಈ ಹೋರಾಟದಲ್ಲಿ ರೈಲ್ವೆ ನಿಲ್ದಾಣದ ರಿಕ್ಷಾ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಕೂಡ ಕೈಜೋಡಿಸಿದರು.

‘ಉಡುಪಿ ಇಂದ್ರಾಳಿ ಸೇತುವೆಯಿಂದ ರೈಲ್ವೆ ನಿಲ್ದಾಣದವರೆಗಿನ ಜಾರ್ಜ್ ಫೆರ್ನಾಂಡಿಸ್ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಕಳೆದ ಎರಡು ವರ್ಷಗಳಿಂದ ಪ್ರಯಾಣಿಕರು ಹಿಂಸೆ ಅನುಭವಿಸುತ್ತಿದ್ದಾರೆ. ಈ ಪ್ರಮುಖ ರಸ್ತೆ ಇನ್ನು ದುರಸ್ತಿ ಕಾಣದಿರುವುದು ದುರಂತ. ರೈಲಿನಲ್ಲಿ ಬರುವ ರೋಗಿಗಳು, ಗರ್ಭಿಣಿಯರು ಸೇರಿದಂತೆ ವಿವಿಧ ರೀತಿಯ ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ ಎಂದು ನಿತ್ಯಾನಂದ ಒಳಕಾಡು ದೂರಿದರು.

ಈ ಬಗ್ಗೆ ನಗರಸಭೆ, ಶಾಸಕರಿಗೆ ಹಲವು ಬಾರಿ ಮನವಿ ಕೊಟ್ಟರು ಸಮಸ್ಯೆ ಬಗೆಹರಿದಿಲ್ಲ. ಇಲ್ಲಿನ ವಾಹನ ಚಾಲಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿರು ಹೈಮಾಸ್ಟ್ ದೀಪ ಕೆಲಸ ಮಾಡುತ್ತಿಲ್ಲ. ರಸ್ತೆ ಬದಿಯಲ್ಲಿ ಗೀಡ ಗಂಟಿಗಳು ಬೆಳೆದು ರಸ್ತೆಯಲ್ಲಿ ನಡೆಯಲು ಹೆದರಿಕೆ ಆಗುತ್ತದೆ. ಕಳ್ಳರ ಹಾವಳಿ ಕೂಡ ಇದೆ. ಇದರಿಂದ ಬೇಸತ್ತು ಸರಕಾರದ ಗಮನ ಸೆಳೆಯಲು ಈ ರೀತಿಯ ಅಣಕು ಪ್ರದರ್ಶನ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ನಗರಸಭೆ, ಲೋಕೋಪಯೋಗಿ ಇಲಾಖೆಯವರು ಕೂಡಲೇ ದುರಸ್ತಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

"ಇಂದ್ರಾಳಿ ರೈಲ್ವೆ ನಿಲ್ದಾಣದ ರಸ್ತೆ ದುರಸ್ತಿ ಕಾಣದೆ ಹಲವು ವರ್ಷಗಳೇ ಕಳೆದಿವೆ. ಈ ಹೊಂಡಗಳಿಗೆ ಬಿದ್ದು ನಮ್ಮ ರಿಕ್ಷಾಗಳ ಬಿಡಿಭಾಗಗಳು ಹಾನಿಯಾಗುತ್ತಿದೆ. ಇದರಿಂದ ನಾವು ಅಪಾರ ನಷ್ಟ ಅನುಭವಿಸುತ್ತಿದ್ದೇವೆ. ಅದರ ಜೊತೆ ಪ್ರಯಾಣಿಕ ರಿಗೆ ಸೊಂಟ, ಕೈಕಾಲು ನೋವುಗಳು ಕಾಣಿಸಿಕೊಳ್ಳುತ್ತಿವೆ. ಆದುದರಿಂದ ಈ ರಸ್ತೆಯನ್ನು ಆದಷ್ಟು ಬೇಗ ದುರಸ್ತಿ ಮಾಡಬೇಕು".

-ಅಬ್ದುಲ್ ಖಾದರ್, ಹಿರಿಯ ರಿಕ್ಷಾ ಚಾಲಕರು

"ಈ ರಸ್ತೆ ದುರಸ್ತಿ ಮಾಡುವಂತೆ ಸಂಬಂಧ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ರಿಕ್ಷಾ, ಟ್ಯಾಕ್ಸಿ ಮಾತ್ರವಲ್ಲ ಈ ರಸ್ತೆಯಲ್ಲಿ ಪ್ರತಿದಿನ ಸಂಚರಿಸುವ ನೂರಾರು ವಾಹನಗಳಿಗೆ ಹೊಂಡ ಗುಂಡಿಗಳಿಂದ ಅನಾನುಕೂಲವಾಗಿದೆ. ಮಣಿಪಾಲ ಆಸ್ಪತ್ರೆಗೆ ಹೋಗಲು ಪ್ರತಿದಿನ ಹೃದಯ ಸಂಬಂಧಿ ರೋಗಿಗಳು ಹಾಗೂ ಗರ್ಭಿಣಿಯರು ಇದೇ ರೈಲ್ವೆ ನಿಲ್ದಾಣದಲ್ಲಿ ಬಂದು ಇಳಿಯುತ್ತಾರೆ. ಇವರು ಟ್ಯಾಕ್ಸಿ, ರಿಕ್ಷಾದಲ್ಲಿ ಪ್ರಯಾಣಿಸು ವಾಗ ನಮಗೆ ಹೆದರಿಕೆ ಆಗುತ್ತದೆ. ಒಂದು ಹೊಂಡ ತಪ್ಪಿಸಲು ಹೋಗಿ ನಾಲ್ಕು  ಹೊಂಡಕ್ಕೆ ಬೀಳುತ್ತೇವೆ.

-ವಲೇರಿಯನ್ ಡಿಸೋಜ, ಅಧ್ಯಕ್ಷರು, ಟ್ಯಾಕ್ಸಿಮೆನ್ ಚಾಲಕ ಮಾಲಕರ ಅಸೋಸಿಯೇಶನ್

share
Next Story
X