Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ...

ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಗಂಭೀರ ಚಿಂತನೆ: ಸಿಎಂ ಬೊಮ್ಮಾಯಿ

25 Nov 2022 7:19 PM IST
share
ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಗಂಭೀರ ಚಿಂತನೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ, ನ.25:  ''ಏಕರೂಪ ನಾಗರಿಕ ಸಂಹಿತೆ(ಯುಸಿಸಿ ) ಬಗ್ಗೆ ದೀನ ದಯಾಳರ ಕಾಲದಿಂದಲೂ ನಾವು ಹೇಳಿಕೊಂಡು ಬರುತ್ತಿದ್ದೇವೆ. ಇದರ ಬಗ್ಗೆ ಈಗ ರಾಜ್ಯಸರ್ಕಾರ ಗಟ್ಟಿ ಚಿಂತನೆ ಮಾಡುತ್ತಿದೆ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 

ಬಿಜೆಪಿ ಪಕ್ಷವು ಕಿಮ್ಮನೆ ಗಾಲ್ಫ್ ರೆಸಾರ್ಟ್‌ನಲ್ಲಿ ಆಯೋಜಿಸಿರುವ ಮೂರು ದಿನಗಳ ರಾಜ್ಯ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿದ ಅವರು,  'ಕಾಂಗ್ರೆಸ್ ನವರು ದಾಸ್ಯ ಸಂಸ್ಕೃತಿ ಯವರು. ತಾವೂ ಮಾಡುವುದಿಲ್ಲ ಬೇರೆಯವರಿಗೂ ಮಾಡಲು ಬಿಡುವುದಿಲ್ಲ.ಜನರು  ಶಿಕ್ಷಣ ಪಡೆಯುವುದು ಕಾಂಗ್ರೆಸ್ ಗೆ ಇಷ್ಟವಿಲ್ಲ. ಅವರಿಗೆ ಉಳಿದವರು ದಾಸ್ಯದಲ್ಲೇ ಇರಬೇಕು ಎನ್ನುವ ಮನಸ್ಥಿತಿ' ಎಂದು ಟೀಕಿಸಿದ್ದಾರೆ. 

''ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ  ಪಕ್ಷ ಬಿಜೆಪಿ.ಸಿದ್ದಾಂತ, ಮೌಲ್ಯಗಳಿಗೆ ಬಿಜೆಪಿ ಯಾವತ್ತೂ ಕಾಂಪ್ರಮೈಸ್ ಆಗುವುದಿಲ್ಲ. ಮೊದಲು ದೇಶ, ನಂತರ ಪಕ್ಷ ಎಂಬ ಧ್ಯೇಯವನ್ನು  ಬಿಜೆಪಿ ಪಕ್ಷ ಹೊಂದಿದೆ'' ಎಂದರು.

''ಬಿಜೆಪಿ ಬಗ್ಗೆ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಜನರಿಗೆ ಬಿಜೆಪಿ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಸಂವಿಧಾನದ ಆಶಯ ಈಡೇರಿಸುವುದು ಬಿಜೆಪಿ ಆದ್ಯತೆ ಎಂದ ಅವರು, ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಹೇಗೆ ನಡೆದುಕೊಂಡಿತ್ತು ಎಂಬುದು ಈಗ ಇತಿಹಾಸ. ಈಗ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ. ಅವರಿಗೆ ಅಧಿಕಾರವೇ ಮಖ್ಯ. ಕಾಂಗ್ರೆಸ್ ತನ್ನ ಸಿದ್ದಾಂತ, ನೀತಿಗೆ ಅಂಟಿಕೊಂಡು ರಾಜಕಾರಣ ಮಾಡಿಲ್ಲ'' ಎಂದು ಹೇಳಿದರು.

''ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಅನೇಕ ಜನಪರ ಕೆಲಸ ಮಾಡಿದೆ. ನರೇಂದ್ರ ಮೋದಿ ಸರ್ಕಾರ ಕೂಡ ಉಜ್ವಲ ಯೋಜನೆ ಜಾರಿ ತಂದಿದೆ. ಪ್ರತಿ ಮನೆಗೆ ಶುದ್ಧನೀರು ಪೂರೈಸಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ಮೋದಿ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ. ಜಗತ್ತಿನ ಎಲ್ಲ ರಾಷ್ಟ್ರಗಳಲ್ಲಿ ಆರ್ಥಿಕ ಹಿಂಜರಿತ ಇದೆ.ಆದರೆ ಭಾರತ ಜಿಡಿಪಿಯಲ್ಲಿ ನಿಯಂತ್ರಣ ಹೊಂದಿದೆ. ಜಿಡಿಪಿ ೭% ಬೆಳವಣಿಗೆ ಕಾಣುತ್ತಿದೆ. ಆರ್ಥಿಕವಾಗಿ ಭಾರತ ಪ್ರಗತಿ ಸಾಧಿಸುತ್ತಿದೆ'' ಎಂದರು.

''ಮೋದಿ ಸರ್ಕಾರದ ದಾರಿಯಲ್ಲಿ ರಾಜ್ಯ ಸರ್ಕಾರ ಸಾಗುತ್ತಿದೆ. ಕೋವಿಡ್ ನಿರ್ವಹಣೆಯಲ್ಲಿ ಯಶಸ್ವಿಯಾಗಿದ್ದೇವೆ. ಯಡಿಯೂರಪ್ಪ ಅವರು ಮಾದರಿ ನಿರ್ವಹಣೆ ಮಾಡಿ ತೋರಿಸಿದ್ದಾರೆ. ನಾನು ಸಿಎಂ ಆಗಿದ್ದಾಗ ತೆರಿಗೆ ನಿರ್ವಹಣೆಯಲ್ಲಿ ಹಿನ್ನಡೆಯಿತ್ತು. ಈಗ ಗುರಿ ಮಿರಿ ತೆರಿಗೆ ಸಂಗ್ರಹಣೆ ಆಗಿದೆ'' ಎಂದರು.

''ಗೋ ಹತ್ಯೆ ನಿಷೇಧ ಮಾಡಿದ್ದೇವೆ. ಪುಣ್ಯಕೋಟಿ ವಿಶೇಷ ಯೋಜನೆಯಡಿ ಗೋವಿನ ಸಂತತಿ ರಕ್ಷಣೆ ಹಾಗೂ ಗೋಶಾಲೆಗಳ ನಿರ್ಮಾಣಕ್ಕೆ  ಸರ್ಕಾರಿ ನೌಕರರ ಸಂಘದವರು ಮುಂದೆ ಬಂದು ಡೊನೇಷನ್ ಕೊಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ನವರು ಇದಕ್ಕೂ ಟೀಕೆ ಮಾಡುತ್ತಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ನಾವೂ ಸಾರ್ವಜನಿಕರಿಗೂ ಅವಕಾಶ ನೀಡಿದ್ದೇವೆ'' ಎಂದರು.

''ಮತಾಂತರ ಕಾಯ್ದೆ ಬಗ್ಗೆ ವಿರೋಧ ಪಕ್ಷದವರು ದಿನಗಟ್ಟಲೇ ಮಾತನಾಡಿದರು. ಒತ್ತಾಯ ಪೂರ್ವಕ ಮತಾಂತರ ಮಾಡುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ನಮ್ಮ ಗಟ್ಟಿ ನಿರ್ಧಾರ ಜನರಿಗೆ ಹಲವು ಅನುಕೂಲ ಮಾಡಿಕೊಟ್ಟಿದೆ'' ಎಂದು ಹೇಳಿದರು.

ಚುನಾವಣೆಗೆ ಸಿದ್ಧರಾಗಲು ಕರೆ: ಪಕ್ಷದ ನಾಯಕರು,ಕಾರ್ಯಕರ್ತರು ಚುನಾವಣೆಗೆ ಸಿದ್ದರಾಗಬೇಕು ಎಂದು ಕರೆ ನೀಡಿದ ಸಿಎಂ, ನಮ್ಮ ಸರ್ಕಾರದ ಯೋಜನೆಗಳನ್ನು ಮುಂದೆ ಇಟ್ಟುಕೊಂಡು ಜನರ ಮುಂದೆ ಹೋಗ ಬೇಕು. ಪೂರ್ವ ಪ್ರಮಾಣದ ಸರ್ಕಾರ ಬರಬೇಕು ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ದರಾಮಣ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮತ್ತಿತರು ಉಪಸ್ಥಿತರಿದ್ದರು.

share
Next Story
X