Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶರಾವತಿ ಮುಳುಗಡೆ ಸಂತ್ರಸ್ತರ ಡಿ...

ಶರಾವತಿ ಮುಳುಗಡೆ ಸಂತ್ರಸ್ತರ ಡಿ ನೋಟಿಫಿಕೇಷನ್ ರದ್ದತಿ | ಡಿಸಿ ವರದಿ ಬಳಿಕ ಕೇಂದ್ರದ ಅನುಮತಿ ಪಡೆಯುತ್ತೇವೆ: ಬೊಮ್ಮಾಯಿ

25 Nov 2022 7:28 PM IST
share
ಶರಾವತಿ ಮುಳುಗಡೆ ಸಂತ್ರಸ್ತರ ಡಿ ನೋಟಿಫಿಕೇಷನ್ ರದ್ದತಿ | ಡಿಸಿ ವರದಿ ಬಳಿಕ ಕೇಂದ್ರದ ಅನುಮತಿ ಪಡೆಯುತ್ತೇವೆ: ಬೊಮ್ಮಾಯಿ

ಶಿವಮೊಗ್ಗ: ''ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಂಚಿಕೆ ವಿಚಾರವಾಗಿ ಈ ಹಿಂದೆ ಆಗಿರುವ ಡಿನೋಟಿಫಿಕೇಷನ್ ಕುರಿತು ಡಿಸೆಂಬರ್ 3ನೇ ವಾರದೊಳಗೆ ವರದಿ ಕೊಡಲು ಸೂಚಿಸಿದ್ದೇನೆ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ''ಶರಾವತಿ ಸಂತ್ರಸ್ತರ ಭೂ ಹಕ್ಕಿನ  ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರಿಂದ ಮಾಹಿತಿ ಪಡೆದಿದ್ದೇನೆ. ಈ ಹಿಂದೆ ಆಗಿರುವ ಡಿ ನೋಟಿಪಿಕೇಶನ್ ಕುರಿತು ಡಿಸೆಂಬರ್ 3ನೇ ವಾರದೊಳಗೆ ವರದಿ ಕೊಡಲು ಸೂಚಿಸಿದ್ದೇನೆ. ಡಿಸಿ ಅವರು ವರದಿ ಕೊಟ್ಟ ತಕ್ಷಣ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡುತ್ತೇವೆ'' ಎಂದರು.

''ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂ ಮಂಜೂರಾತಿ ಪಡೆಯಲು ಹಿಂದಿನ ಸರಕಾರ ಅನುಮತಿ ಪಡೆಯದ ಕಾರಣ ಕೇಂದ್ರ ಸರಕಾರದಿಂದ ಅನುಮತಿ ಪಡೆಯಬೇಕಿದೆ. ಈಗಾಗಲೇ ಕೇಂದ್ರ ಸಚಿವರಿಗೆ ವಿಷಯ ತಿಳಿಸಲಾಗಿದೆ.ಆದಷ್ಟು ಬೇಗ ಕೇಂದ್ರದ ಅನುಮತಿ ಪಡೆದು ಸಮಸ್ಯೆ ಪರಿಹರಿಸುತ್ತೇವೆ.ಸಂತ್ರಸ್ಥರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ'' ಎಂದರು.

ಮತದಾರರ ಪಟ್ಟಿ ದುರ್ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,ಎಲ್ಲಾ ವಿಚಾರಗಳನ್ನು ಸೂಕ್ಷ್ಮವಾಗಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ.ಅಧಿಕಾರಿಗಳಿಗೆ ಮುಕ್ತವಾಗಿ ತನಿಖೆ ಮಾಡಲು ಬಿಟ್ಟಿದ್ದೇವೆ. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗುತ್ತದೆ'' ಎಂದರು.

ಮಹಾರಾಷ್ಟ್ರ ಗಡಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,ಗಡಿ ವಿಚಾರದಲ್ಲಿ ನಮ್ಮ‌ ನಿಲುವನ್ನು ಈಗಾಗಲೇ ತಿಳಿಸಿದ್ದೇವೆ. ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ.ನಮಗೆ ಕಾನೂನಿನಲ್ಲಿ ಗಟ್ಟಿಯಾದ ನೆಲೆಗಟ್ಟಿದೆ. ಈ ಬಗ್ಗೆ ಸರ್ವಪಕ್ಷ ಸಭೆ ಕರೆದು ಚರ್ಚಿಸುತ್ತೇನೆ.ಕಾನೂನು ತಜ್ಞರ ಜೊತೆ ಚರ್ಚಿಸುತ್ತೇವೆ. ಸಮರ್ಥವಾಗಿ ವಾದ ಮಂಡಿಸುತ್ತೇವೆ'' ಎಂದರು.

ಮಂಗಳೂರು ಸ್ಫೋಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,ನಮ್ಮ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿದ್ದಾರೆ.ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರ ಸಂಗ್ರಹಿಸಿದ್ದಾರೆ.ಇಂತಹ ಪ್ರಕರಣ ಇದ್ದಾಗ ಯುಎಪಿಎ ಅಡಿ ಕೇಸ್ ದಾಖಲಾಗಬೇಕು. ಇಂತಹ ಪ್ರಕರಣ ಎನ್ ಐಎ ಗೆ ವಹಿಸಬೇಕಾಗುತ್ತದೆ'' ಎಂದರು.

ಬಗರ್ ಹುಕುಂ ಸಮಸ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಲೆನಾಡು ಭಾಗದಲ್ಲಿ ಡೀಮ್ಡ್ ಫಾರೆಸ್ಟ್  ಹೆಚ್ಚಿದೆ. ಡೀಮ್ಡ್ ಫಾರೆಸ್ಟ್ ವಿಚಾರ ಕುರಿತಂತೆ ಸರಕಾರ  ನಿರ್ಣಯ ಕೈಗೊಂಡಿದೆ.ಸುಮಾರು 6 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ಲ್ಯಾಂಡನ್ನು ಕಂದಾಯ ಇಲಾಖೆಗೆ ವಹಿಸಲಾಗಿದೆ'' ಎಂದರು.

share
Next Story
X