Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರೆತಾಗ...

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರೆತಾಗ ಮಾತ್ರ ಶಾಂತಿ ಸ್ಥಾಪನೆಯಾಗುವುದು: ಅಮಿತ್ ಶಾಗೆ ಉವೈಸಿ ತಿರುಗೇಟು

26 Nov 2022 4:48 PM IST
share
ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರೆತಾಗ ಮಾತ್ರ ಶಾಂತಿ ಸ್ಥಾಪನೆಯಾಗುವುದು: ಅಮಿತ್ ಶಾಗೆ ಉವೈಸಿ ತಿರುಗೇಟು

ಹೊಸದಿಲ್ಲಿ: "ಗಲಭೆಕೋರರಿಗೆ 2002 ರಲ್ಲಿ ಪಾಠ ಕಲಿಸಲಾಗಿದೆ," ಎಂದು ಗುಜರಾತ್ ಚುನಾವಣಾ ರ್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಾದಿತ ಹೇಳಿಕೆ ನೀಡಿದ ಬೆನ್ನಲ್ಲೇ ಅದಕ್ಕೆ ತೀವ್ರವಾಗಿ ಆಕ್ಷೇಪಿಸಿ ತಿರುಗೇಟು ನೀಡಿರುವ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ, ಅವರ ಪಾಠಗಳು ವಾಸ್ತವವಾಗಿ ಅಪರಾಧಿಗಳನ್ನು ಬಂಧನದಿಂದ ಬಿಡುಗಡೆಗೊಳಿಸುವ ಕುರಿತಾಗಿದೆ ಎಂದು  ಹೇಳಿದ್ದಾರೆ.

ಗುಜರಾತ್‍ನ ಅತಿ ದೊಡ್ಡ ಮುಸ್ಲಿಂ ಬಾಹುಳ್ಯ ಪ್ರದೇಶವಾದ ಜುಹಾಪುರ ಎಂಬಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಓವೈಸಿ ಮಾತನಾಡುತ್ತಿದ್ದರು.

"ಗುಜರಾತ್ ಗಲಭೆಕೋರರಿಗೆ 2002 ರಲ್ಲಿ ಅವರು ಪಾಠ ಕಲಿಸಿದರು ಹಾಗೂ ಇದು ರಾಜ್ಯದಲ್ಲಿ ಖಾಯಂ ಶಾಂತಿ ಸ್ಥಾಪನೆಗೆ ಕಾರಣವಾಯಿತು ಎಂದು ಅಮಿತ್ ಶಾ ಇಂದು ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದ್ದಾರೆ. ಈ ಕ್ಷೇತ್ರ (ಅಹ್ಮದಾಬಾದ್) ಸಂಸದರಾಗಿರುವ ಅಮಿತ್ ಶಾಗೆ ನಾನು ಹೇಳಬಯಸುತ್ತೇನೆ, ನೀವು 2002 ರಲ್ಲಿ ಕಲಿಸಿದ ಪಾಠವೇನೆಂದರೆ ಬಿಲ್ಕಿಸ್ ಅತ್ಯಾಚಾರಿಗಳನ್ನು ನೀವು ಬಿಡುಗಡೆಗೊಳಿಸುತ್ತೀರಿ ಎಂಬುದು, ನೀವು ಬಿಲ್ಕಿಸ್‍ಳ ಮೂರು ವರ್ಷದ ಪುತ್ರಿಯ ಕೊಲೆಗಾರರನ್ನು ಬಿಡುಗಡೆಗೊಳಿಸಬಹುದೆಂಬ ಪಾಠ ಕಲಿಸಿದ್ದೀರಿ. ಎಹ್ಸಾನ್ ಜಾಫ್ರಿ ಅವರನ್ನು ಕೊಲ್ಲಬಹುದು ಎಂಬ ಪಾಠವನ್ನೂ ಕಲಿಸಿದ್ದೀರಿ,'' ಎಂದು ಓವೈಸಿ ಹೇಳಿದರು.

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಹಾಗೂ ಬೆಸ್ಟ್ ಬೇಕರಿ ಘಟನೆಯನ್ನು ಉಲ್ಲೇಖಿಸಿದ ಓವೈಸಿ "ಎಷ್ಟು ಪಾಠಗಳನ್ನು ನಾವು ನೆನಪಿಸಿಕೊಳ್ಳಬೇಕು, ಅಮಿತ್ ಶಾ ಅವರೇ? ಪಾಠ ಕಲಿಸುವುದು ಏನೂ ಅಲ್ಲ,  ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರೆತಾಗ ಮಾತ್ರ ಶಾಂತಿ ಬಲಗೊಳ್ಳುವುದು ಎಂಬುದನ್ನು ನೆನಪಿಡಿ," ಎಂದರು.

"ಅಧಿಕಾರ ಯಾವತ್ತೂ ಒಬ್ಬನೇ ವ್ಯಕ್ತಿ ಬಳಿ ಇರುವುದರಿಲ್ಲ. ಒಂದು ದಿನ ಅಧಿಕಾರ ಎಲ್ಲರಿಂದಲೂ ಸೆಳೆಯಲ್ಪಡುವುದು, ಅಧಿಕಾರದ ಮದದಲ್ಲಿ ಗೃಹ ಸಚಿವರು ತಾವು ಪಾಠ ಕಲಿಸಿದ್ದಾಗಿ ಹೇಳಿದ್ದಾರೆ. ನೀವು ಯಾವ ಪಾಠ ಕಲಿಸಿದ್ದೀರಿ? ನೀವು ಇಡೀ ದೇಶದಲ್ಲಿ ಕುಖ್ಯಾತಿ ಪಡೆದಿರಿ," ಎಂದು ಓವೈಸಿ ಪ್ರಶ್ನಿಸಿದರು.

share
Next Story
X