Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರಿನಲ್ಲಿ ಇನ್ನು ಮುಂದೆ ಬಾಡಿಗೆ ಮನೆ...

ಮೈಸೂರಿನಲ್ಲಿ ಇನ್ನು ಮುಂದೆ ಬಾಡಿಗೆ ಮನೆ ಪಡೆಯಬೇಕಿದ್ದರೆ ಹೊಸ ಕಾನೂನು; ಮಾಲಕರಿಗೆ ನಗರ ಪೊಲೀಸ್ ಆಯುಕ್ತರ ಸೂಚನೆ

26 Nov 2022 8:50 PM IST
share
ಮೈಸೂರಿನಲ್ಲಿ ಇನ್ನು ಮುಂದೆ ಬಾಡಿಗೆ ಮನೆ ಪಡೆಯಬೇಕಿದ್ದರೆ ಹೊಸ ಕಾನೂನು; ಮಾಲಕರಿಗೆ ನಗರ ಪೊಲೀಸ್ ಆಯುಕ್ತರ ಸೂಚನೆ

ಮೈಸೂರು,ನ.26: ಬಾಡಿಗೆ ಮನೆ ಮತ್ತು ರೂಮ್‍ಗಳು, ಪಿಜಿಗಳಲ್ಲಿ ಇರುವವರು ತಮ್ಮ ಪೂರ್ವಾಪರ ಮಾಹಿತಿಯನ್ನು ಒಂದು ತಿಂಗಳೊಳಗೆ ಪೊಲೀಸರಿಗೆ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ. 

ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರ ಪೊಲೀಸ್ ವೆಬ್‍ಸೈಟ್‍ನಲ್ಲಿ ಮತ್ತು ನಗರದ ಎಲ್ಲಾ ಠಾಣೆಗಳಲ್ಲಿ ಸುರಕ್ಷಾ ಮನೂನೆ-1 ಸಿಗಲಿದೆ. ಇದನ್ನು ಪಡೆದುಕೊಂಡು ನಾವು ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಬೇಕು, ಇದರ ಜೊತೆಗೆ ಬಾಡಿಗೆದಾರರ ಯಾವುದಾದರೂ ಒಂದು (ಆಧಾರ್ ಕಾರ್ಡ್, ಪಾಸ್ ಪೋರ್ಟ್, ಮತದಾರರ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಪಡಿತರ ಚೀಟಿ) ಗುರುತಿನ ಚೀಟಿ ಜೆರಾಕ್ಸ್ ಅನ್ನು ಲಗತ್ತಿಸಬೇಕು ಮುಂದಿನ ದಿನಗಳಲ್ಲಿ ಆನ್ ಲೈನ್  ಅಲ್ಲಿಯೇ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಹೀಗೆ ನೀಡುವ ನಮೂನೆಗಳನ್ನು ಮತ್ತು ಗುರುತಿನ ಚೀಟಿಯನ್ನು ಪೊಲೀಸರು ಪರಿಶೀಲಿಸುವರು. ಇದಕ್ಕೆ ನಗರ ಪಾಲಿಕೆ ಅಧಿಕಾರಿಗಳ ಸಹಕಾರವನ್ನು ಕೇಳಿದ್ದೇವೆ ಮಾಹಿತಿಯನ್ನು ನೀಡದೇ ಉದಾಸೀನ ಮಾಡಿದರೆ ಮುಂದೆ ಯಾವುದೇ ಅನಾಹುತವಾದರೂ ಅದಕ್ಕೆ ಮಾಲಕರು ಮತ್ತು ಪಿಜಿ  ನಡೆಸುವವರು ಹೊಣೆಯಾಗುತ್ತಾರೆ. ಬಾಡಿಗೆದಾರರು ನಕಲಿ ದಾಖಲೆಗಳನ್ನು ನೀಡುತ್ತಿದ್ದಾರೆ ಎಂಬ ಅನುಮಾನವಿದ್ದರೆ ಆಯಾ ಠಾಣೆ ಪೊಲೀಸರಿಗೆ ತಿಳಿಸಿ ಅನುಮಾನ ಪರಿಹರಿಸಿಕೊಳ್ಳಿ ಎಂದು ತಿಳಿಸಿದರು.

ಮಾಲಕರ ಮೇಲೆ ಕ್ರಮ: ಹೋಟೆಲ್ ಲಾಡ್ಜ್, ಹೋಂ ಸ್ಟೇಗಳಲ್ಲಿಯೂ ಯಾವುದೇ ವ್ಯವಸ್ಥಿತವಾದ ದಾಖಲೆ ಇಲ್ಲದೆ ಯಾರಿಗಾದರೂ ರೂಮ್‍ಗಳನ್ನು ನೀಡುವುದು ಉಳಿದುಕೊಳ್ಳಲು ಅವಕಾಶ ನೀಡುವುದು ಮಾಡುವಂತಿಲ್ಲ, ನಮ್ಮ ಸಿಬ್ಬಂದಿಗಳು ನಿತ್ಯ ಪರಿಶೀಲನೆ ಮಾಡಲಿದ್ದು, ದಾಖಲೆ ಇಲ್ಲದೆ ಯಾರಿಗಾದರೂ ಉಳಿಯಲು ಅವಕಾಸ ನೀಡುವುದು ಕಂಡು ಬಂದಲ್ಲಿ ಮಾಲಕರ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.

''ಗಡಿಪಾರು ಮಾಡುತ್ತೇವೆ'': ನಗರದ ಮೊಹಲ್ಲಾಗಳಲ್ಲಿ ಸಾರ್ವಜನಿಕ ಸಭೆಗಳನ್ನು ಮಾಡಲಿದ್ದು, ಸಾರ್ವಜನಿಕರು ಕುಂದುಕೊರತೆಗಳನ್ನು ತಿಳಿಸಬಹುದು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ರೌಡಿ ಶೀಟರ್ಗಳ ಪೆರೇಡ್ ಹೆಚ್ಚಿಸಲಾಗುವುದು. ಅವರಿಗೆ ತಿಳುವಳಿಕೆ ಹೇಳಲಾಗುವುದು. ಕೇಳದೆ ಅವರ ಚಟುವಟಿಕೆಯನ್ನು  ಮುಂದುವರೆಸಿದರೆ ಗಡಿಪಾರು ಮಾಡುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು  ಹೇಳಿದರು.

ನಗರಕ್ಕೆ ಪ್ರವೇಶಿಸುವ 9 ಪಾಯಿಂಟ್‍ಗಳಲ್ಲಿ ಇನ್ ಅಂಡ್ ಔಟ್ ಆಗುವವರ ಬಗ್ಗೆ ನಮ್ಮ ಸಿಬ್ಬಂದಿ ಪರಿಶೀಲಿಸಿ ವಿಳಾಸ ನಮೂದಿಸಿಕೊಳ್ಳುತ್ತಾರೆ. ನಗರದ ಒಳಗೆ 23 ಪಾಯಿಂಟ್‍ಗಳನ್ನು ಮಾಡಿದ್ದು, ನಮ್ಮ ಸಿಬ್ಬಂದಿ ಅನುಮಾನಾಸ್ಪದವಾಗಿ ಕಂಡು ಬಂದವರನ್ನು ಪರಿಶೀಲಿಸುವರು, ನಗರ ಪಾಲಿಕೆಯಿಂದ ರಾತ್ರಿ 11 ಗಂಟೆಯ ನಂತರವೂ ತೆರೆದಿರಬಹುದಾದ ಅಂಗಡಿಗಳನ್ನು ಬಿಟ್ಟು ಉಳಿದ ಎಲ್ಲಾ ಅಂಗಡಿಗಳು ರಾತ್ರಿ 11 ಗಂಟೆಯ ಹೊತ್ತಿಗೆ ಮುಚ್ಚಲೇಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಲು ಎಲ್ಲಾ ಠಾಣೆಯ ಪೊಲೀಸರಿಗೆ ಸೂಚಿಸಿದ್ದೆನೆ ಎಂದರು.

ವಾಹನ ದಟ್ಟಣೆ ಮತ್ತು ವ್ಯಾಪಾರ ವಹಿವಾಟು ನಡೆಯುವ ಸ್ಥಳಗಳಲ್ಲಿ ವ್ಯವಸ್ಥಿತವಾದ ಪಾರ್ಕಿಂಗ್ ಅವಕಾಶ ಮಾಡಿಕೊಡಲು ಅಪರಾಧ ಮತ್ತು ಸಂಚಾರ ವಿಭಾದ ಡಿಸಿಪಿ ಸಂಚಾರ ವಿಭಾಗದ ಎಸಿಪಿ ಅವರಿಗೆ ಹೇಗೆ ಮಾಡಬಹುದು ಎಂದು ಪ್ರಸ್ತಾವನೆ ನೀಡಲು ಹೇಳಿದ್ದೇನೆ.  ಇದನ್ನು ನೋಡಿ ಆ ನಂತರ ಯೋಜನೆ   ಕೈಗೊಳ್ಳುತ್ತೇನೆ ಎಂದು  ಹೇಳಿದರು.

''ನಾನು ಕೂಡ ಮಧ್ಯಾಹ್ನ 12.30 ರಿಂದ ಸಂಜೆ 6 ಗಂಟೆಯವರೆಗೂ ಸಾರ್ವಜನಿಕರ ಭೇಟಿಗೆ ಸಿಗಲಿದ್ದು, ಏನಾದರೂ ದೂರುಗಳು ಇದ್ದರೆ ದಿನನಿತ್ಯ ಎರಡು ಗಂಟೆ ಠಾಣೆಗೆ ಬರುವ ಸಾರ್ವಜನಿಕರ  ಸಮಸ್ಯೆ ಆಲಿಸಲು ಸಮಯ ನಿಗದಿ ಮಾಡಿಕೊಳ್ಳಲು ಜನಸ್ನೇಹಿಯಾಗಿರಲು ಹೇಳಿದ್ದೇನೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರೆ ಇಲ್ಲಿಯೂ ತನಿಖೆ ಮಾಡುತ್ತಿದ್ದಾರೆ. ಅವರಿಗೆ ಬೇಕಾದ ಸಹಕಾರವನ್ನು ಅಷ್ಟೇ ನಾವು ನೀಡಿದ್ದೇವೆ. ಹಾಗಾಗಿ, ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ''

 -ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ, ಮೈಸೂರು.

ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಬಿ.ರಮೇಶ್ IPS ರವರು ಈ ದಿನ ಪತ್ರಿಕಾಗೋಷ್ಟಿಯಲ್ಲಿ ನಗರದಲ್ಲಿನ ಮನೆಯ ಮಾಲೀಕರು ತಮ್ಮ ಮನೆಗಳನ್ನು ಬಾಡಿಗೆಗೆ & ಪೇಯಿಂಗ್ ಗೆಸ್ಟ್ ಹೌಸ್ ಗಳ ವಾಸ್ತವ್ಯಕ್ಕೆ ನೀಡಿರುವ /ನೀಡುವಾಗ ಬಾಡಿಗೆದಾರರ ವಿವರಗಳನ್ನು ನಮೂನೆಯಲ್ಲಿ ಸಂಪೂರ್ಣವಾಗಿ ಭರ್ತಿಮಾಡಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ನೀಡಬೇಕಾಗಿ ತಿಳಿಸಿರುತ್ತಾರೆ. pic.twitter.com/c1ezOZjVAY

— Commissioner of Police Mysuru (@CPMysuru) November 26, 2022
share
Next Story
X