Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಶಾಸಕ...

ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಶಾಸಕ ರಘುಪತಿ ಭಟ್ ವಿರೋಧ: ಮುಖ್ಯಮಂತ್ರಿ, ಸಂಸದರಿಗೆ ಪತ್ರ

26 Nov 2022 9:03 PM IST
share
ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಶಾಸಕ ರಘುಪತಿ ಭಟ್ ವಿರೋಧ: ಮುಖ್ಯಮಂತ್ರಿ, ಸಂಸದರಿಗೆ ಪತ್ರ

ಉಡುಪಿ, ನ.26: ಈವರೆಗೆ ಸುರತ್ಕಲ್‌ನಲ್ಲಿ ಕಾರ್ಯಾಚರಿಸುತಿದ್ದ ಟೋಲ್‌ಗೇಟ್‌ನ್ನು ಮುಚ್ಚಿ, ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರ್ಪಡೆ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಿರೋಧಿಸಿದ್ದಾರೆ.

ಇದು ಖಂಡಿತ ತಪ್ಪು. ಸುರತ್ಕಲ್ ಟೋಲ್‌ನ್ನು ಮುಚ್ಚಿ, ಅಲ್ಲಿ ವಸೂಲಿ ಮಾಡುತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್‌ಗೇಟ್‌ಗೂ, ಹೆಜಮಾಡಿ ಟೋಲ್‌ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್‌ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್‌ನ್ನು ಬಂಟ್ವಾಳಕ್ಕೆ ಸಂಬಂಧಿಸಿದ ಕಂಪೆನಿ ಪಡೆಯು‌ತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ  ನವಯುಗ ಅಲ್ಲಿನ ಟೋಲ್‌ನ್ನು ಉಡುಪಿಯ ಜನತೆಯಿಂದ ಪಡೆಯುವುದು ಸರಿಯಲ್ಲ ಎಂದರು.

ಇದರಿಂದ ತೊಂದರೆಗೊಳಗಾಗುವುದು ಉಡುಪಿಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಹೆಜಮಾಡಿಯಲ್ಲಿ ಇದರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇದರಲ್ಲಿ ಭಾಗವಹಿಸುತ್ತೀರಾ ಎಂದು ಪ್ರಶ್ನಿಸಿದಾಗ, ಅದನ್ನು ಯಾರು ಮಾಡುತಿದ್ದಾರೆ, ಅವರ ಉದ್ದೇಶವೇನು ಎಂಬುದನ್ನು ತಿಳಿದುಕೊಳ್ಳಬೇಕಿದೆ ಎಂದರು.

ಚುನಾವಣೆಗೆ ಸಿದ್ಧತೆ: ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ತನ್ನ ತಯಾರಿಯನ್ನು 2018ರಿಂದಲೇ ಪ್ರಾರಂಭಿಸಿದ್ದೇನೆ.  ಕಳೆದ ಐದು ವರ್ಷಗಳಿಂದಲೂ 24 ಗಂಟೆ ಕ್ಷೇತ್ರದ ಕೆಲಸ ಮಾಡುತಿದ್ದೇನೆ. ಆದರೆ ಈಗ ಚುನಾವಣೆ ಗೆಲ್ಲಲು ಬೇಕಾದ ಕಾರ್ಯಕ್ರಮವನ್ನು ಶುರು ಮಾಡಿದ್ದೇನೆ ಎಂದು ರಘುಪತಿ ಭಟ್ ನುಡಿದರು.

ಹಾಲಿ ಶಾಸಕನಾಗಿ, ಶಾಸಕನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿರುವ ವಿಶ್ವಾಸದಲ್ಲಿ ಸ್ಪರ್ಧೆಗೆ ಮತ್ತೆ ಅವಕಾಶ ಪಡೆಯುವ ವಿಶ್ವಾಸ ಹೊಂದಿದ್ದೇನೆ. ನಮ್ಮಲ್ಲಿ ಪಕ್ಷದ ವ್ಯವಸ್ಥೆ ಇದನ್ನು ನಿರ್ದರಿಸುತ್ತದೆ. ಕೇಂದ್ರ ಸಂಸದೀಯ ಮಂಡಳಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಆದರೆ ತನಗೆ ಪಕ್ಷದ ನಾಯಕರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದ ಭಟ್, ತಾನು ಸದಾ ಕ್ಷೇತ್ರದ ಜನರೊಂದಿಗೆ ಸೇರಿ ಶಾಸಕನಾಗಿ ಮಾಡಬೇಕಾದ ಕರ್ತವ್ಯವೆಲ್ಲವನ್ನೂ ಮಾಡಿದ್ದೇನೆ ಎಂದರು.

share
Next Story
X