Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿಯಿಂದ ಸ್ಯಾಟ್ ಲೈಟ್ ಕರೆ...

ಬೆಳ್ತಂಗಡಿಯಿಂದ ಸ್ಯಾಟ್ ಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ದ.ಕ. ಎಸ್ಪಿ ರಿಷಿಕೇಶ್ ಸೋನಾವಣೆ

"ಸ್ಫೋಟದ ಸದ್ದು ಆನೆ ಓಡಿಸಲು ಗ್ರಾಮಸ್ಥರು ಸಿಡಿಸುವ ಪಟಾಕಿಯದ್ದು"

27 Nov 2022 1:55 PM IST
share
ಬೆಳ್ತಂಗಡಿಯಿಂದ ಸ್ಯಾಟ್ ಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ದ.ಕ. ಎಸ್ಪಿ ರಿಷಿಕೇಶ್ ಸೋನಾವಣೆ
"ಸ್ಫೋಟದ ಸದ್ದು ಆನೆ ಓಡಿಸಲು ಗ್ರಾಮಸ್ಥರು ಸಿಡಿಸುವ ಪಟಾಕಿಯದ್ದು"

ಬೆಳ್ತಂಗಡಿ, ನ.27: ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.

ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆದರೆ ಇಲ್ಲಿಂದ ಯಾವುದೇ ಸ್ಯಾಟ್ ಲೈಟ್ ಕರೆ ಹೋಗಿರುವ ಮಾಹಿತಿ ದೃಢಪಟ್ಟಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

ಬೆಂದ್ರಾಳ ಪ್ರದೇಶದ ಅರಣ್ಯದಲ್ಲಿ ಸ್ಪೋಟದ ಶಬ್ದ ಕೇಳಿಸಿದೆ ಎಂಬ ವದಂತಿ ಹರಡುತ್ತಿದೆ. ಈ ಬಗ್ಗೆಯೂ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಅತ್ಯಂತ ಹೆಚ್ಚಾಗಿದೆ. ಅವುಗಳನ್ನು ಓಡಿಸಲು ಸ್ಥಳೀಯರು ಅರಣ್ಯ ಇಲಾಖೆ ನೀಡುವ ಪಟಾಕಿಗಳನ್ನು ಉಪಯೋಗಿಸುತ್ತಿದ್ದು, ಅದರ  ಶಬ್ದವೇ ಆಗಿರಬಹುದು ಎಂಬ ಮಾಹಿತಿ ಪೊಲೀಸರ ಪರಿಶೀಲನೆಯ ಸಂದರ್ಭದಲ್ಲಿ ಕಂಡುಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಲ್ಲಿ ನ,18ರಂದು ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆಯಾಗಿದೆ ಎಂಬ ವದಂತಿ ಎಲ್ಲೆಡೆ ಹರಡಿತ್ತು. ಈ ನಡುವೆ ಇಲ್ಲಿ ಭಾರೀ ಸ್ಫೋಟದ ಶಬ್ದ ಕೇಳಿದೆ ಎಂಬ ವದಂತಿಯೂ ಹರಡಲಾರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

share
Next Story
X