Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಲೀಜಿಯಂ ಶಿಫಾರಸುಗಳನ್ನು...

ಕೊಲೀಜಿಯಂ ಶಿಫಾರಸುಗಳನ್ನು ಅನುಮೋದಿಸುವಲ್ಲಿ ಕೇಂದ್ರದ ವಿಳಂಬದ ಬಗ್ಗೆ ಅಸಮಾಧಾನ ಹೊರಹಾಕಿದ ಸುಪ್ರೀಂ ಕೋರ್ಟ್

28 Nov 2022 4:01 PM IST
share
ಕೊಲೀಜಿಯಂ ಶಿಫಾರಸುಗಳನ್ನು ಅನುಮೋದಿಸುವಲ್ಲಿ ಕೇಂದ್ರದ ವಿಳಂಬದ ಬಗ್ಗೆ ಅಸಮಾಧಾನ ಹೊರಹಾಕಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ನ್ಯಾಯಾಧೀಶರುಗಳ ನೇಮಕಾತಿ ಕುರಿತಂತೆ ಕೊಲೀಜಿಯಂ ಮಾಡಿದ ಶಿಫಾರಸುಗಳ ಕುರಿತಂತೆ ತನ್ನ ನಿರ್ಧಾರ ಪ್ರಕಟಿಸಲು ಕೇಂದ್ರ ಸರಕಾರದ ವಿಳಂಬ ನೀತಿಯನ್ನು ಸುಪ್ರೀಂ ಕೋರ್ಟ್ (Supreme Court) ಇಂದು ಕಟುವಾಗಿ ಟೀಕಿಸಿದೆ.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿಗಳ ಆಯೋಗ ಜಾರಿಯಾಗಿಲ್ಲವೆಂಬ ಅಸಮಾಧಾನದಿಂದಾಗಿ  ಕೊಲೀಜಿಯಂ ಶಿಫಾರಸುಗಳನ್ನು ತಡೆಹಿಡಿಯಲಾಗಿದೆಯೇ ಎಂಬ ಸಂದೇಹವನ್ನು ವಿಭಾಗೀಯ ಪೀಠದ ನೇತೃತ್ವ ವಹಿಸಿದ್ದ ಜಸ್ಟಿಸ್ ಸಂಜಯ್ ಕಿಶನ್ ಕೌಲ್ ವ್ಯಕ್ತಪಡಿಸಿದರು.

"ವಿಷಯವೇನೆಂದರೆ ಹೆಸರುಗಳನ್ನು ಅನುಮೋದಿಸಲಾಗುತ್ತಿಲ್ಲ. ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ನಮ್ಮ ಅಸಮಾಧಾನ ವ್ಯಕ್ತಪಡಿಸಿದ್ದೇವೆ. ಎನ್‍ಜೆಎಸಿ ಜಾರಿಯಾಗಿಲ್ಲದೇ ಇರುವುದು ಸರಕಾರದ ಅಸಂತುಷ್ಟಕ್ಕೆ ಕಾರಣವಾಗಿದೆ. ಹೆಸರುಗಳನ್ನು ಅನುಮೋದಿಸದೇ ಇರುವುದಕ್ಕೆ ಇದು ಕಾರಣವಾಗಿರಬಹುದೇ?'' ಎಂದು ಜಸ್ಟಿಸ್ ಕಿಶನ್ ಕೌಲ್ ಪ್ರಶ್ನಿಸಿದರು.

"ಕೊಲೀಜಿಯಂ ಕುರಿತು ಕೆಲವರಿಗೆ ಅಸಮಾಧಾನವಿರಬಹುದು. ಆದರೆ ಅದು ಇರುವ ತನಕ ಅದು ನೆಲದ ಕಾನೂನಾಗಿದೆ.,'' ಎಂದು ಅವರು ಹೇಳಿದರು.

'ಟೈಮ್ಸ್ ನೌ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಕೇಂದ್ರ ಕಾನೂನು ಸಚಿವ ಕಿರೆಣ್ ರಿಜಿಜು ಅವರು ಕೊಲೀಜಿಯಂ ವ್ಯವಸ್ಥೆಯನ್ನು ಟೀಕಿಸಿದ್ದರಲ್ಲದೆ ಇದು ಭಾರತದ ಸಂವಿಧಾನಕ್ಕೆ ಪರಕೀಯವಾಗಿದೆ ಹಾಗೂ ದೇಶದ ಜನರ ಬೆಂಬಲ ಅದಕ್ಕಿಲ್ಲ ಮತ್ತು ಕೊಲೀಜಿಯಂ ಶಿಫಾರಸು ಮಾಡಿದ ಹೆಸರುಗಳನ್ನು ಕೇವಲ ಅನುಮೋದಿಸಬೇಕೆಂದು ಸರಕಾರದಿಂದ ನಿರೀಕ್ಷಿಸುವಂತಿಲ್ಲ" ಎಂದಿದ್ದರು.

"ಸರಕಾರ ಫೈಲ್‍ಗಳನ್ನು ಇಟ್ಟುಕೊಂಡು ಕುಳಿತಿದೆ ಎಂದು ಹೇಳಬೇಡಿ, ಹಾಗಿದ್ದರೆ ಫೈಲ್‍ಗಳನ್ನು ಕಳುಹಿಸಬೇಡಿ, ನೀವೇ ನೇಮಕ ಮಾಡಿ,'' ಎಂದು ಸಚಿವರು ಹೇಳಿರುವ ಬಗ್ಗೆ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಪೀಠದ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಜಸ್ಟಿಸ್ ಕೌಲ್, "ದೊಡ್ಡ ಹುದ್ದೆಯಲ್ಲಿರುವವರು ಹೀಗೆ ಹೇಳಿದ್ದಾರೆ. ಹಾಗಾಗಬಾರದಾಗಿತ್ತು. ಹಲವು ಮಾಧ್ಯಮ ವರದಿಗಳನ್ನು ನಿರ್ಲಕ್ಷ್ಯಿಸಿದ್ದೇನೆ ಆದರೆ ಈ ಮಾತುಗಳು ಉನ್ನತ ಹುದ್ದೆಯಲ್ಲಿರುವವರಿಂದ ಬಂದಿದೆ,'' ಎಂದು ಹೇಳಿದರು.

ನ್ಯಾಯಾಲಯದ ಅಸಮಾಧಾನದ ಕುರಿತಂತೆ ಸರಕಾರಕ್ಕೆ ತಿಳಿಸುವಂತೆ ಜಸ್ಟಿಸ್ ಕೌಲ್ ಅವರು ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದರು.

ಮುಂದಿನ ವಿಚಾರಣೆ ಡಿಸೆಂಬರ್ 8ಕ್ಕೆ ನಿಗದಿಯಾಗಿದೆ.

share
Next Story
X